India vs Sri Lanka: ಭಾರತದ ವಿರುದ್ಧ ಗೆದ್ದ ಶ್ರೀಲಂಕಾ; ರೋಹಿತ್ ಪಡೆ ಸೋಲಿಗೆ ಕಾರಣವೇನು?
ಮುಖ್ಯ ಕೋಚ್ ಗೌತಮ್ ಗಂಭೀರ್ ಗೆ ಮೊದಲ ಸೋಲಿನ ರುಚಿ ತೋರಿಸಿದೆ ಶ್ರೀಲಂಕಾ. ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ಭಾರತದ ವಿರುದ್ಧ 32 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಮೊದಲ ಏಕದಿನ ಪಂದ್ಯ ಟೈ ಆದ ಬಳಿಕ ಎರಡನೇ ಏಕದಿನ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದ ಭಾರತಕ್ಕೆ ಸೋಲಿನ ಆಘಾತ ಎದುರಾಗಿದೆ. ಟಿ20 ವಿಶ್ವಕಪ್ ಗೆದ್ದ ಬಳಿಕ ನಾಯಕ ರೋಹಿತ್ ಶರ್ಮಾ ಅವರಿಗೆ ಇದು ಮೊದಲ ಸೋಲಾಗಿದೆ.

ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭಾರತದ ಉತ್ತಮ ಬೌಲಿಂಗ್ ದಾಳಿಯ ನಡುವೆಯೂ 50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 240 ರನ್ ಗಳಿಸಿತು.
ಆವಿಷ್ಕ ಫರ್ನಾಂಡೋ 40 ರನ್, ಕುಸಾಲ್ ಮೆಂಡಿಸ್ 32 ರನ್, ಕಮಿಂದು ಮೆಂಡಿಸ್ 40 ರನ್, ದುನಿತ್ ವೆಲ್ಲಲಗೆ 39 ರನ್ ಗಳಿಸಿದರು. ವಾಷಿಂಗ್ಟನ್ ಸುಂದರ್ 3 ವಿಕೆಟ್ ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ ಪಡೆದರು.
ಕೈಕೊಟ್ಟ ಭಾರತದ ಬ್ಯಾಟಿಂಗ್ ಪಡೆ
241 ರನ್ಗಳ ಸವಾಲಿನ ಮೊತ್ತವನ್ನು ಬೆನ್ನತ್ತಿದ ಭಾರತ ಅತ್ಯುತ್ತಮ ಆರಂಭ ಪಡೆಯಿತು. ಮತ್ತೊಮ್ಮೆ ಅಬ್ಬರಿಸಿದ ನಾಯಕ ರೋಹಿತ್ ಶರ್ಮಾ 44 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್ ಸಹಿತ 64 ರನ್ ಗಳಿಸಿದರು. ಶುಭಮನ್ ಗಿಲ್ 44 ಎಸೆತಗಳಲ್ಲಿ 35 ರನ್ ಗಳಿಸಿದರು.
ಇವರಿಬ್ಬರು ಔಟಾದ ಬಳಿಕ ಭಾರತ ಮತ್ತೆ ಸಂಕಷ್ಟಕ್ಕೆ ಸಿಲುಕಿತು. ಅಕ್ಷರ್ ಪಟೇಲ್ 44 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್ ಗಳಿಂದ ಉತ್ತಮ ಪ್ರದರ್ಶನ ಬರಲಿಲ್ಲ. ವಿರಾಟ್ ಕೊಹ್ಲಿ 14 ರನ್ ಗಳಿಸಿದರೆ, ಶಿವಂ ದುಬೆ ಮತ್ತು ಕೆಎಲ್ ರಾಹುಲ್ ಸೊನ್ನೆಗೆ ಔಟಾದರು. ಅಂತಿಮವಾಗಿ ಭಾರತ 42.2 ಓವರ್ ಗಳಲ್ಲಿ 208 ರನ್ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.
ಶ್ರೀಲಂಕಾ ಪರವಾಗಿ ಜೆಫ್ರೆ ವಂದೆರ್ಸೆ 10 ಓವರ್ ಗಳಲ್ಲಿ 33 ರನ್ ನೀಡಿ 6 ವಿಕೆಟ್ ಪಡೆಯುವ ಮೂಲಕ ಭಾರತದ ಸೋಲಿಗೆ ಕಾರಣವಾದರು. ನಾಯಕ ಚರಿತ್ ಅಸಲಂಕ ಕೂಡ 3 ವಿಕೆಟ್ ಪಡೆದು ಮಿಂಚಿದರು. 3 ಪಂದ್ಯಗಳ ಸರಣಿಯಲ್ಲಿ ಶ್ರೀಲಂಕಾ 1-0 ಮುನ್ನಡೆ ಸಾಧಿಸಿದ್ದು, ಭಾರತಕ್ಕೆ ಸರಣಿ ಗೆಲ್ಲುವ ಅವಕಾಶ ಕೈತಪ್ಪಿದೆ. ಮುಂದಿನ ಪಂದ್ಯ ಭಾರತ ಗೆದ್ದರೆ ಸರಣಿ ಸಮಬಲವಾಗಲಿದ್ದು, ಸೋತರೆ ಶ್ರೀಲಂಕಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲಿದೆ.
-
Namma Metro: ಐಪಿಎಲ್ ಪಂದ್ಯದ ದಿನ ದಟ್ಟಣೆ ಇಲ್ಲದೇ ಓಡಾಡಿ, ಮೆಟ್ರೋ ಸೇವಾವಧಿ ವಿಸ್ತರಣೆ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications