ಶ್ರೀಲಂಕಾದ ಕ್ರಿಕೆಟ್ ದಿಗ್ಗಜನ ಕಿರಿ ಸೋದರ ಜೈಲು ಪಾಲು
ಕೊಲಂಬೋ, ಜೂನ್ 6: ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಅರ್ಜುನ್ ರಣತುಂಗ ಅವರ ಕಿರಿಯ ಸೋದರ ಜೈಲು ಪಾಲಾಗಿದ್ದಾರೆ. 1996 ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ನಾಯಕರಾಗಿರುವ ರಣತುಂಗ ಸೋದರ ಪ್ರಸನ್ನರನ್ನು ಸೋಮವಾರದಂದು ಜೈಲಿಗೆ ಕಳಿಸಲಾಗಿದೆ. ಉದ್ಯಮಿಯೊಬ್ಬರಿಗೆ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಪ್ರಸನ್ನ ವಿರುದ್ಧದ ಆರೋಪ ಸಾಬೀತಾಗಿದೆ.
2015ರಲ್ಲಿ ದಾಖಲಾಗಿದ್ದ ಈ ಪ್ರಕರಣ ವಿಚಾರಣೆ ಸುದೀರ್ಘ ಅವಧಿ ನಡೆದಿತ್ತು. ಸೋಮವಾರದಂದು ಪ್ರಸನ್ನ ರಣತುಂಗ ಅಪರಾಧಿ ಎಂದು ಸ್ಥಳೀಯ ನ್ಯಾಯಾಲಯವೊಂದು ತೀರ್ಪು ನೀಡಿದೆ. ಪ್ರಸನ್ನ ರಣತುಂಗ ರಾಜಕಾರಣಿಯಾಗಿದ್ದು, ನಗರಾಭಿವೃದ್ಧಿ ಸಚಿವರಾಗಿದ್ದರು. 55 ವರ್ಷ ವಯಸ್ಸಿನ ಪ್ರಸನ್ನ ವಿರುದ್ಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ದೋಷಿ ಎಂದು ಪರಿಗಣಿಸಿ ಎರಡು ವರ್ಷಗಳ ಕಠಿಣ ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಇದರ ಬೆನ್ನಲ್ಲೇ ರಾಜಕೀಯ ವೃತ್ತಿ ಬದುಕಿನಿಂದ ಐದು ವರ್ಷಗಳ ಹೊರಗುಳಿಯಬೇಕಾಗುತ್ತದೆ.

ಈ ಪ್ರಕರಣದ ಜೈಲು ಶಿಕ್ಷೆ ಜೊತೆಗೆ 25 ಮಿಲಿಯನ್ ಲಂಕನ್ ರುಪಾಯಿ (USD 69,061) ಹಾಗೂ ಸಂತ್ರಸ್ತ ಉದ್ಯಮಿಗೆ 1 ಮಿಲಿಯನ್ ರುಪಾಯಿ (USD 2,762) ಪರಿಹಾರ ಮೊತ್ತ ನೀಡುವಂತೆ ಕೋರ್ಟ್ ಸೂಚಿಸಿದೆ. ಬೆದರಿಕೆ ಹಾಗೂ ವಸೂಲಿ ಪ್ರಕರಣದಲ್ಲಿ ಸಹ ಆರೋಪಿಯಾಗಿದ್ದ ಪ್ರಸನ್ನ ಅವರ ಪತ್ನಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದು, ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications