ಟಿ-20 ಕ್ರಿಕೆಟ್ ವಿಶ್ವಕಪ್ನಲ್ಲಿ ಕೆನಡಾದ ಬಲ ಹೆಚ್ಚಿಸಲಿರುವ ಕರ್ನಾಟಕದ ಬೆಣ್ಣೆನಗರಿಯ ಆಲ್ರೌಂಡರ್
ದಾವಣಗೆರೆ, ಜೂನ್, 02: ಟಿ-20 ವಿಶ್ವಕಪ್ ಕ್ರಿಕೆಟ್ 2024 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಲ್ಲಾ ತಂಡಗಳು ಗೆಲುವಿಗೆ ರಣತಂತ್ರ ರೂಪಿಸಿವೆ. ಟೀಂ ಇಂಡಿಯಾ ಸಹ ಈ ಬಾರಿ ಗೆಲ್ಲುವ ಫೇವರಿಟ್ ತಂಡ. ವಿಶೇಷ ಅಂದರೆ, ಕರ್ನಾಟಕದ ಬೆಣ್ಣೆನಗರಿಯ ಯುವಕ ಕೆನಡಾ ತಂಡದ ಪರ ಆಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇವರ ಹಿನ್ನೆಲೆ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಟಿ-20 ವಿಶ್ವಕಪ್ ಕ್ರಿಕೆಟ್ 2024ಕ್ಕೆ ಬೆಣ್ಣೆನಗರಿ ದಾವಣಗೆರೆಯ ಶ್ರೇಯಸ್ ಮೋವಾ ಕೆನಡಾ ತಂಡಕ್ಕೆ ಆಯ್ಕೆ ಆಗಿದ್ದು, ಪೋಷಕರು, ಸ್ನೇಹಿತರು, ಕುಟುಂಬದವರು, ಸಂಬಂಧಿಕರಲ್ಲಿ ಸಂಭ್ರಮ ಮನೆ ಮಾಡಿದೆ.

ದಾವಣಗೆರೆ ಕ್ರಿಕೆಟ್ ಅಕಾಡೆಮಿಯ ಆಟಗಾರನಾಗಿದ್ದ ಶ್ರೇಯಸ್ ಮೋವಾ ಅವರು, ಟಿ-20 ವಿಶ್ವಕಪ್-2024ಕ್ಕೆ ಕೆನಾಡ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಕ್ರಿಕೆಟ್ ಅಕಾಡೆಮಿಯ ಕೋಚ್ ಗೋಪಾಲಕೃಷ್ಣ ಮಾಹಿತಿ ನೀಡಿದರು.
ಶ್ರೇಯಸ್ ಅವರು 2006ರಿಂದ 2016ರವರೆಗೆ ದಾವಣಗೆರೆ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ಮಾಡಿದ್ದರು. ನಗರದ ಬಿಐಇಟಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿ ಕೆಲಸ ಸಿಕ್ಕ ಕಾರಣಕ್ಕೆ ಕೆನಡಾಕ್ಕೆ ತೆರಳಿದ್ದರು. ನಂತರವೂ ತಮ್ಮ ಕ್ರಿಕೆಟ್ ಅಭ್ಯಾಸದಲ್ಲಿ ತೊಡಗಿದ್ದರು.
ಇದೀಗ ಕೆನಡಾ ತಂಡಕ್ಕೆ ಟಿ-20 ವಿಶ್ವಕಪ್ಗೆ ಆಡುವ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ದಾವಣಗೆರೆ ಕ್ರಿಕೆಟ್ ಅಕಾಡೆಮಿಯಲ್ಲಿ ನಾಗರಾಜ್ ಪಿ.ವಿ. ಎಂಬ ನುರಿತ ಕೆ.ಎಸ್.ಸಿ.ಎ. ಕೋಚ್ ಇವರ ಬಳಿ ತರಬೇತಿಯನ್ನು ಪಡೆದಿದ್ದರು.
ಬಳಿಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸುವ ಅಂತರಾಜ್ಯ ವಯೋಮಿತಿ ಒಳಗೊಂಡ 16 ವರ್ಷದೊಳಗಿನ, 19 ವರ್ಷದೊಳಗಿನ ಪಂದ್ಯಾವಳಿಗಳಿಗೆ ಆಯ್ಕೆಯಾಗುವ ಮೂಲಕ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.
ತುಮಕೂರು ಕ್ರಿಕೆಟ್ ವಲಯದ ಸಂಚಾಲಕ ಕೆ.ಶಶಿಧರ್ರ ಅವರ ವೀನಸ್ ಕ್ರಿಕೆಟ್ ಕ್ಲಬ್ ತಂಡವನ್ನು ಸುಮಾರು ವರ್ಷಗಳ ಕಾಲ ಪ್ರತಿನಿಧಿಸಿದ್ದಾರೆ. ತದ ನಂತರದ ವರ್ಷಗಳಲ್ಲಿ ತಮ್ಮ ಕ್ರಿಕೆಟ್ ವೃತ್ತಿಯನ್ನು ಮುಂದುವರೆಸಲು ಕೆನಡಾ ದೇಶದ ಪೌರತ್ವವನ್ನು ಪಡೆದುಕೊಂಡು ಕ್ರಿಕೆಟ್ ವೃತ್ತಿಯನ್ನು ಮುಂದುವರೆಸಿದ್ದಾರೆ.
ಹಲವು ವರ್ಷಗಳ ನಂತರ ಕೆನಡಾದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿ ಹಲವು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಜೂನ್-2024ರಿಂದ ಆರಂಭ ಆಗುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆ ಆಗಿದ್ದಾರೆ.
ಶ್ರೇಯಸ್ ಮೋವಾ ಅವರ ಪೋಷಕರಾದ ಎಂ.ಜಿ.ವಾಸುದೇವರೆಡ್ಡಿ, ಎನ್.ಯಶೋಧ, ಕೋಚ್ ತಿಮ್ಮೇಶ್ ಸಂತಸ ವ್ಯಕ್ತಪಡಿಸಿದ್ದು, ಉತ್ತಮ ಪ್ರದರ್ಶನ ನೀಡಿ ಎಲ್ಲರ ಮನ ಗೆಲ್ಲಲಿ ಎಂದು ಹಾರೈಸಿದ್ದಾರೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್












Click it and Unblock the Notifications