T20 World Cup 2026: ಸೆಮಿಫೈನಲ್ ಸ್ಥಾನಕ್ಕಾಗಿ ಟೀಂ ಇಂಡಿಯಾ ಕಾದಾಟ
T20 World Cup 2026: ಕೋಲ್ಕತ್ತಾದಲ್ಲಿ ಭಾನುವಾರ ನಡೆಯುತ್ತಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಸೂಪರ್ 8 ಹಂತದ ಮಹತ್ವದ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಗಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್ನ ಕೊನೆಯ ಉಳಿದ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಈಗಾಗಲೇ ನ್ಯೂಜಿಲೆಂಡ್, ಇಂಗ್ಲೆಂಡ್ ತಂಡಗಳು ತಮ್ಮ ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿಕೊಂಡಿವೆ.
ಈಗಾಗಲೇ ಸೂಪರ್ 8 ಹಂತದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಎರಡೂ ತಂಡಗಳು ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿವೆ. ಮತ್ತೊಂದೆಡೆ, ಈ ಆವೃತ್ತಿಯಲ್ಲಿ ಅತಿ ಹೆಚ್ಚು ಮೊತ್ತ ದಾಖಲಿಸಿರುವ ಸಾಧನೆಯೂ ಎರಡೂ ತಂಡಗಳ ಪಾಲಾಗಿದೆ. ವೆಸ್ಟ್ ಇಂಡೀಸ್ ಜಿಂಬಾಬ್ವೆ ವಿರುದ್ಧ 254/6 ರನ್ ಗಳಿಸಿದ್ದರೆ, ಅದೇ ಎದುರಾಳಿಗಳ ವಿರುದ್ಧ ಭಾರತ ಮೂರು ದಿನಗಳ ಬಳಿಕ 256/4 ರನ್ ಕಲೆಹಾಕಿ ಆ ದಾಖಲೆ ಮುರಿದಿತ್ತು.

ಭಾನುವಾರ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಸಾಮರ್ಥ್ಯ ಉತ್ತಮವಾಗಿದೆ. ಈ ಪಂದ್ಯ ಎರಡೂ ತಂಡಗಳಿಗೂ ಅತ್ಯಂತ ಪ್ರಮುಖವಾಗಿದೆ. ಆದ್ದರಿಂದ ಪಿಚ್ ಅನ್ನು ಅರಿತುಕೊಂಡು ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ವೆಸ್ಟ್ ಇಂಡೀಸ್ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಒಟ್ಟಿನಲ್ಲಿ ಟೀಂ ಇಂಡಿಯಾ 'ಮಾಡು ಇಲ್ಲವೇ ಮಡಿ' ಕದನದಲ್ಲಿ ಗೆಲ್ಲಲೇಬೇಕೆನ್ನುವ ಭರವಸೆಯೊಂದಿಗೆ ಅಖಾಡಕ್ಕೆ ಇಳಿದಿದೆ.
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11
ಶಾಯ್ ಡಿಯಾಗೋ ಹೋಪ್ (ನಾಯಕ, ವಿಕೆಟ್ ಕೀಪರ್), ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮಿಯರ್, ರೋವ್ಮನ್ ಪಾವೆಲ್, ಶೆರ್ಫೇನ್ ರದರ್ಫೋರ್ಡ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಮ್ಯಾಥ್ಯೂ ಫೋರ್ಡ್, ಗುದಕೇಶ್ ಮೋಟಿ, ಅಕೇಲ್ ಹೊಸೈನ್, ಶಮಾರ್ ಜೋಸೆಫ್.
ಟೀಂ ಇಂಡಿಯಾ ಪ್ಲೇಯಿಂಗ್ 11
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications