IND Vs PAK: ಪಾಕಿಸ್ತಾನ ಬೌಲರ್ಗಳ ಚಳಿ ಬಿಡಿಸಿದ ಇಶಾನ್ ಕಿಶಾನ್: 176 ರನ್ಗಳ ಟಾರ್ಗೆಟ್ ನೀಡಿದ ಟೀಂ ಇಂಡಿಯಾ
India Vs Pakistan: ಕೊಲೊಂಬೊದಾ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಟಿ20 ವಿಶ್ವಕಪ್ 2026ರ ಎ ಗುಂಪಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಭಾರತ ತಂಡವು ಪಾಕಿಸ್ತಾನಕ್ಕೆ 176 ರನ್ಗಳ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ಗಳನ್ನು ಕಲೆಹಾಕಿತು. ಇಶಾನ್ ಕಿಶನ್ ಅವರು ಸಿಡಿಸಿದ 77 ರನ್ಗಳೇ ತಂಡ ಇಷ್ಟೊಂದು ಮೊತ್ತ ಕಲೆಹಾಕಲು ಪ್ರಮುಖ ಕಾರಣವಾಯಿತು. ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ನಾಲ್ಕು ಬಾಲ್ ಎದುರಿಸಿ ಯಾವುದೇ ರನ್ ಇಲ್ಲದೆ, ಶೂನ್ಯ ಸುತ್ತಿ ವಿಕೆಟ್ ಒಪ್ಪಿಸಿ ಪೆವಿಲಿಯನ್ನತ್ತ ತೆರಳಿದರು.

ಪಾಕಿಸ್ತಾನ ಬೌಲರ್ಗಳ ಬೆವರಳಿಸಿದ ಇಶಾನ್ ಕಿಶನ್
ಆದರೂ, ಬಳಿಕ ಧೈರ್ಯ ಕಳೆದುಕೊಳ್ಳದ ಇಶಾನ್ ಕಿಶನ್ ಪಾಕ್ ಬೌಲರ್ಗಳನ್ನು ಬೆಂಡೆತ್ತಿ ಬೃಹತ್ ರನ್ಗಳನ್ನು ಕಲೆಹಾಕಿದರು. ಕೇವಲ 40 ಎಸೆತಗಳಲ್ಲಿ ಮೂರು ಸಿಕ್ಸ್ ಹಾಗೂ ಹತ್ತು ಬೌಂಡರಿಗಳ ಸಹಿತ ಬರೋಬ್ಬರಿ 77 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು. ಇವರು 27 ಬಾಲ್ಗಳಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದರು.
ಭಾರತದ ಪರ ಯಾರು ಎಷ್ಟು ರನ್ ಸಿಡಿಸಿದರು?
ಉಳಿದಂತೆ ತಿಲಕ್ ವರ್ಮಾ 1 ಸಿಕ್ಸ್, ಎರಡು ಬೌಂಡರಿಗಳ ಸಹಿತ 25 ರನ್ ಕಲೆಹಾಕಿದರೆ, ನಾಯಕ ಸೂರ್ಯಕುಮಾರ್ ಯಾದವ್ 32(29), ಶಿವಂ ದುಬೆ 27(17), ರಿಂಕು ಸಿಂಗ್ ಅಜೇಯ 11(4) ರನ್ಗಳು ತಂಡದ ಮೊತ್ತವನ್ನು 170 ಗಡಿ ದಾಡಿಸಿದವು. ಈ ಮೂಲಕ ಭಾರತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿದೆ. ಇನ್ನೂ ಅಭಿಷೇಕ್ ಶರ್ಮಾ ಸೇರಿದಂತೆ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಾಟೆಲ್ ಶೂನ್ಯಕ್ಕೆ ಔಟ್ ಆಗಿ ಪೆವಿಲಿಯನ್ ಅತ್ತ ತೆರಳಿದರು.
ಇಶಾನ್ ಕಿಶನ್ ಹೊರತುಪಡಿಸಿ, ಪಾಕಿಸ್ತಾನದ ಸ್ಪಿನ್ನರ್ಗಳು ಆರ್.ಪ್ರೇಮದಾಸ ಕ್ರೀಡಾಂಗಣದ ಪಿಚ್ನಲ್ಲಿ ಭಾರತೀಯ ಬ್ಯಾಟರ್ಗಳನ್ನು ಹೆಚ್ಚಿನ ರನ್ ಗಳಿಸಲು ಅವಕಾಶ ನೀಡಲಿಲ್ಲ. ಆರಂಭಿಕ ಬ್ಯಾಟರ್ ಇಶಾನ್ ಕಿಶನ್ ಕೇವಲ 27 ಬಾಲ್ಗಳಲ್ಲಿ ಅರ್ಧಶತಕ ಸಿಡಿಸಿದ್ದು, ಅವರ ಇನ್ನಿಂಗ್ಸ್ನಲ್ಲಿ 10 ಬೌಂಡರಿಗಳು ಹಾಗೂ ಮೂರು ಸಿಕ್ಸರ್ಗಳು ಸೇರಿವೆ. ಟಾಪ್ ಆರ್ಡ್ರ್ನಲ್ಲಿ ಅವರ ಆಕ್ರಮಣಕಾರಿ ಬ್ಯಾಟಿಂಗ್ನಿಂದ, ಪಾಕಿಸ್ತಾನ ಸ್ಪಿನ್ನರ್ಗಳು ಉತ್ತಮ ಪ್ರದರ್ಶನ ನೀಡಿದರೂ ಭಾರತ ಉತ್ತಮ ರನ್ರೇಟ್ ಕಾಯ್ದುಕೊಂಡಿತು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications