ದಕ್ಷಿಣ ಆಫ್ರಿಕಾ ವಿರುದ್ಧ ವೆಸ್ಟ್ ಇಂಡೀಸ್ ಪರ ಕರ್ನಾಟಕದ ಆರ್ಸಿಬಿ ರೊಮಾರಿಯೋ ಮಿಂಚಿನ ಆಟ: ಮನಸೋತ ಅಭಿಮಾನಿಗಳು
Romario Shepherd: ಅಹಮದಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2026 ಸೂಪರ್ 8 ಹಂತದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ವೆಸ್ಟ್ ಇಂಡೀಸ್ ಪರ ಕರ್ನಾಟಕದ ಆರ್ಸಿಬಿಯ ರೊಮಾರಿಯೋ ಶೆಫರ್ಡ್ ಸ್ಫೋಟಕ ಬ್ಯಾಟಿಂಗ್ ಮಾಡಿ ಅರ್ಧ ಶತಕ ಸಿಡಿಸಿದ್ದಾರೆ. ಈ ಮೂಲಕ ತಂಡ ಬೃಹತ್ ರನ್ ಕಲೆಹಾಕಲು ಪ್ರಮುಖ ಪಾತ್ರವಹಿಸಿದರು.
ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ವೆಸ್ಟ್ ಇಂಡೀಸ್ ನಿಗದಿ 20 ಓವರ್ಗಳಿಗೆ 8 ವಿಕೆಟ್ ಕಳೆದುಕೊಂಡು 176 ರನ್ಗಳನ್ನು ಕಲೆಹಾಕಿತು. ಅದರಲ್ಲೂ ಸ್ಫೋಟಕ ಇನ್ನಿಂಗ್ ಆಡಿದ ರೊಮಾರಿಯೋ ಶೆಫರ್ಡ್, 37 ಎಸೆತಗಳಲ್ಲಿ 3 ಬೌಂಡರಿ, 4 ಸಕ್ಸರ್ಗಳೊಂದಿಗೆ ಅಜೇಯ 52 ರನ್ ಕಲೆಹಾಕಿದರು. ಇವರು ಐಪಿಎಲ್ನಲ್ಲಿ ಕರ್ನಾಟಕದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಲಿದ್ದಾರೆ. ಕಳೆದ ಬಾರಿಯ ಸೀಸನ್ನಲ್ಲಿ ಉತ್ತಮ ಪ್ರದರ್ಶನದ ಮೂಲಕ ಇವರು ಬ್ಲ್ಯಾಕ್ ಡ್ರ್ಯಾಗನ್ ಅಂತಲೇ ಹೆಸರುವಾಸಿಯಾಗಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಮಿಂಚಿದ ಶೆಫರ್ಡ್
ಇದೀಗ ತಮ್ಮ ದೇಶದ ವೆಸ್ಟ್ ಇಂಡೀಸ್ ಪರ ಟಿ20 ವಿಶ್ವಕಪ್ನಲ್ಲೂ ಕೂಡ ಉತ್ತಮ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹಾಗೆಯೇ ಇಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ತಮ್ಮ ತಂಡದ ಪರ ಅತೀ ಹೆಚ್ಚು ರನ್ ಗಳಿಸಿ ಗಮನ ಸೆಳೆದಿದ್ದಾರೆ. ಹಾಗಾದಾರೆ ಯಾರೆಲ್ಲಾ ಎಷ್ಟು ರನ್ಗಳನ್ನು ಬಾರಿಸಿದ್ದಾರೆ ಎನ್ನುವ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ತಿಳಿಯಿರಿ.
ವೆಸ್ಟ್ ಇಂಡೀಸ್ ಪರ ಯಾರು ಎಷ್ಟು ರನ್ ಬಾರಿಸಿದರು?
ವೆಸ್ಟ್ ಇಂಡೀಸ್ ಪರ ಬ್ಯಾಟ್ ಬೀಸಿದ ಜೇಸನ್ ಹೋಲ್ಡರ್ 49(31), ಬ್ರಾಂಡನ್ ಕಿಂಗ್ 21(11), ಶೆರ್ಫೇನ್ ರುದರ್ಫೋರ್ಡ್ 12(10), ಮ್ಯಾಥ್ಯೂ ವಾಲ್ಟರ್ ಫೋರ್ಡ್ 11(9), ರೊಮಾರಿಯೋ ಶೆಫರ್ಡ್ ಅಜೇಯ 52(37) ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.
ರೊಮಾರಿಯೋ ಶೆಫರ್ಡ್ ಬಗ್ಗೆ ಮಾಹಿತಿ
ರೊಮಾರಿಯೋ ಶೆಫರ್ಡ್ ವೆಸ್ಟ್ ಇಂಡೀಸ್ನ ಪ್ರಮುಖ ಆಲ್ರೌಂಡರ್ ಆಗಿದ್ದು, ವೇಗದ ಬೌಲಿಂಗ್ ಮತ್ತು ಸ್ಪೋಟಕ ಕೆಳ-ಕ್ರಮಾಂಕದ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಗಯಾನಾದವರಾದ ಇವರು 2019ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು.
ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್, ಎಸ್ಆರ್ಹೆಚ್, ಲಕ್ನೋ ಸೂಪರ್ ಜೈಂಟ್ಸ್ ಪರ ಆಡಿದ್ದಾರೆ. ಇದೀಗ ಇವರು ಆರ್ಸಿಬಿ ಪರ ಆಡುತ್ತಿದ್ದು, ಕಳೆದ ಬಾರಿ ಸಿಎಸ್ಕೆ ವಿರುದ್ಧ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದರು. ಆಗಿನಿಂದ ಇವರನ್ನು ಆರ್ಸಿಬಿ ಬ್ಲ್ಯಾಕ್ ಡ್ರ್ಯಾಗನ್ ಅಂತಲೇ ಕರೆಯಲಾಗುತ್ತಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications