ಇಂದೇ ಲೋಕಾರ್ಪಣೆಯಾದ ಸಾಯಿ ಕೃಷ್ಣನ್ ಸ್ಟೇಡಿಯಂನಲ್ಲಿ ದಿಗ್ಗಜರ ನಡುವೆ ಸೌಹಾರ್ದ ಪಂದ್ಯ ಆರಂಭ
ಚಿಕ್ಕಬಳ್ಳಾಪುರ ಜನವರಿ 18: ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕು ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ಇಂದು ಅಂತಾರಾಷ್ಟ್ರೀಯ ಮಟ್ಟದ ಸಾಯಿಕೃಷ್ಣನ್ ಕ್ರಿಕೆಟ್ ಸ್ಟೇಡಿಯಂ ಕ್ರಿಕೆಟ್ ದಿಗ್ಗಜರ ಟಿ 20 ಕ್ರಿಕೆಟ್ ಪಂದ್ಯದ ಮೂಲಕ ಲೋಕಾರ್ಪಣೆಗೊಂಡಿದೆ.
ಒಂದು ಪ್ರಪಂಚ ಒಂದು ಕುಟುಂಬ ಕಪ್ ಎಂಬ ಹೆಸರಿನಡಿ ಸೌಹಾರ್ದಯುತ ಪಂದ್ಯಾವಳಿಯಲ್ಲಿ 8 ದೇಶಗಳ 24 ದಿಗ್ಗಜ ಆಟಗಾರರು ಆಡಲಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ಯುವರಾಜ್ ಸಿಂಗ್ ನಾಯಕತ್ವದ ಎರಡು ತಂಡಗಳ ನಡುವೆ ಈ ಪಂದ್ಯ ನಡೆಯಲಿದೆ.

ಭಾರತದ ಮೂಲ ಧೈಯ ವಾಕ್ಯ ವಸುಧೈವ ಕುಟುಂಬಕಂ ಎಂಬ ಮಾತಿಗೆ ಪ್ರತಿರೂಪವೆಂಬಂತೆ ಪಂದ್ಯಾವಳಿ ಆಯೋಜಿಸಲಾಗಿದೆ. ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ನೇತೃತ್ವದಲ್ಲಿ ಪಂದ್ಯಾವಳಿಗೆ ಬೇಕಾದ ಎಲ್ಲ ತಯಾರಿಗಳು ನಡೆದಿವೆ. ಪಂದ್ಯಾವಳಿಯಲ್ಲಿ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ್, ಸನತ್ ಜಯ ಸೂರ್ಯ, ಮುತ್ತಯ್ಯ ಮುರಳೀಧರನ್ ಚಮಿಂಡಾ ವಾಸ್ ಸೇರಿದಂತೆ 24 ಮಂದಿ ಮಾಜಿ ಕ್ರಿಕೆಟ್ ಆಟಗಾರರು ಭಾಗವಹಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಸ್ಟೇಡಿಯಂ ಉದ್ಘಾಟನೆಯಾಗಿದೆ. 11ಗಂಟೆಯಿಂದ 1ರವರೆಗೆ ಮೊದಲ ಇನ್ನಿಂಗ್ಸ್ 1 ರಿಂದ 1:30 ಗಂಟೆಗೆ ಭೋಜನ ವಿರಾಮ ವಿರಲಿದ್ದು, 1:30ಗಂಟೆಯಿಂದ 3:30 ಗಂಟೆ ವರೆಗೆ ಎರಡನೇ ಇನ್ನಿಂಗ್ಸ್ ನಡೆಯಲಿದೆ. ತದನಂತರ 4 ಗಂಟೆಗೆ ಸಾಯಿ ಸಿಂಪೋನಿ ಆರ್ಕೆಸ್ಟ್ರಾ ತಂಡದಿಂದ ವಾದ್ಯಗೋಷ್ಠಿ ನಡೆಯಲಿದೆ.
ಈ ಪಂದ್ಯ ವೀಕ್ಷಣೆಗೆ ಆಮಂತ್ರಿತರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಸುಮಾರು 10 ಸಾವಿರ ಮಂದಿಗೆ ಆಮಂತ್ರಣ ನೀಡಲಾಗಿದೆ. ಸತ್ಯಸಾಯಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು, ಉದ್ಯೋಗಿಗಳು, ಭಕ್ತರು ಭಾಗಿಯಾಗಲಿದ್ದಾರೆ.
ಪ್ರಶಸ್ತಿಗಾಗಿ ಸೇಣೆಸಲಿರುವ ತಂಡಗಳು:-
ಸಚಿನ್ ತೆಂಡೂಲ್ಕರ್ (ನಾಯಕ), ನಮನ್ ಓಜಾ, ಉಪುಲ್ ತರಂಗಾ, ಅಲ್ವಿರೋ ಪೀಟರ್ಸನ್, ಸುಬ್ರಹ್ಮಣಿಯನ್ ಬದ್ರೀನಾಥ್, ಇರ್ಫಾನ್ ಪಠಾಣ್, ಅಶೋಕ್ ದಿಂಡಾ, ಅಜಂತಾ ಮೆಂಡಿಸ್, ಹರಭಜನ್ ಸಿಂಗ್, ಮಾಂಟಿ ಪನೇಸರ್, ಆರ್.ಪಿ.ಸಿಂಗ್, ಡ್ಯಾನಿ ಮೊರಿಸನ್.
ಯುವರಾಜ್ ಸಿಂಗ್ (ನಾಯಕ), ಪೃಥ್ವಿ ಪಟೇಲ್, ಮೊಹಮದ್ ಕೈಫ್, ಡರೇನ್ ಮ್ಯಾಡಿ, ಅಲೋಕ್ ಕಪಿಲ್, ರೊಮೇಶ್ ಕಲವಿತರಣ, ಯೂಸಫ್ ಪಠಾಣ್, ಜಾಸನ್ ಕ್ರೇಜಾ, ಮುತ್ತಯ್ಯ ಮುರ ಳೀಧರನ್, ಮಕಾಯಾ ನಿಟ್ಟಿ, ಚಮಿಂಡಾ ವಾಸ್, ವೆಂಕಟೇಶ್ ಪ್ರಸಾದ್.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications