ಚಿಕ್ಕಬಳ್ಳಾಪುರದಲ್ಲಿಂದು T20I ಲೀಗ್: ಕಣದಲ್ಲಿ ಅಬ್ಬರಿಸಲಿದ್ದಾರೆ ಸಚಿನ್, ಯುವಿ, ಜಯಸೂರ್ಯ
ಚಿಕ್ಕಬಳ್ಳಾಪುರ ಜನವರಿ 18: ಮಾನವ ಸೇವಾ ಸ್ಫೂರ್ತಿಯನ್ನು ಎತ್ತರಕ್ಕೊಯ್ಯುವ ಸದುದ್ದೇಶದೊಂದಿಗೆ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಕ್ರೀಡಾಂಗಣದಲ್ಲಿ ಇಂದು (ಜ.18) ಕ್ರಿಕೆಟ್ ಪಂದ್ಯ ಆಯೋಜಿಸಲಾಗಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ದಿಗ್ಗಜರ ಸಮಾಗಮ ಆಗಲಿದೆ.
ಸತ್ಯಸಾಯಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಅಂತರಾಷ್ಟ್ರೀಯ ಮಟ್ಟದ ಸಾಯಿಕೃಷ್ಣನ್ ಕ್ರಿಕೆಟ್ ಸ್ಟೇಡಿಯಂನಲ್ಲಿ (Saikrishnan Cricket Stadium) ಇಂದು (ಜ.18) ಟಿ20 ಕ್ರಿಕೆಟ್ (T20 Cricket) ಟೂರ್ನಿಯನ್ನು ಆಯೋಜನೆ ಮಾಡಲಾಗಿದೆ.

ಮಧುಸೂದನ ಸಾಯಿ ಜಾಗತಿಕ ಮಾನವೀಯ ಸೇವಾ ಅಭಿಯಾನದಿಂದ ಆಯೋಜಿಸಿರುವ ಒಂದು ಜಗತ್ತು - ಒಂದು ಕುಟುಂಬ (ಒನ್ ವಲ್ಡ್ -ಒನ್ ಫ್ಯಾಮಿಲಿ) ಕಪ್ಗಾಗಿ ನಡೆಯುವ ಪಂದ್ಯದಲ್ಲಿ ವಿಶ್ವದ ಹಲವು ರಾಷ್ಟ್ರಗಳ ಕ್ರಿಕೆಟ್ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ. ನೂತನವಾಗಿ ನಿರ್ಮಾಣವಾಗಿರುವ ಕ್ರಿಕೆಟ್ ಸ್ಟೇಡಿಯಂ ಕೂಡ ಉದ್ಘಾಟನೆಯಾಗಲಿದೆ.
ಈ ಸೌಹಾರ್ದಯುತ ಪಂದ್ಯಾವಳಿಯಲ್ಲಿ 8 ದೇಶಗಳ 24 ದಿಗ್ಗಜ ಆಟಗಾರರು ಎರಡು ತಂಡಗಳಾಗಿ ಪಂದ್ಯವಾಡಲಿದ್ದಾರೆ. ಭಾರತದ ಮೂಲ ಧ್ಯೇಯ ವ್ಯಾಕ್ಯ ವಸುಧೈವ ಕುಟುಂಬಕಂ ಎಂಬ ಮಾತಿಗೆ ಪ್ರತಿರೂಪವೆಂಬಂತೆ ಒಂದು ಪ್ರಪಂಚ ಒಂದು ಕುಟುಂಬ ಕಪ್ ಎಂಬ ಹೆಸರಿನಡಿ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ.
ನೂತನ ಹೊಸ ಸಾಯಿಕೃಷ್ಣನ್ ಸ್ಟೇಡಿಯಂ ಉದ್ಘಾಟನಾ ಅಂಗವಾಗಿ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದೆ. ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ನೇತೃತ್ವದಲ್ಲಿ ಪಂದ್ಯಾವಳಿಗೆ ಬೇಕಾದ ಎಲ್ಲಾ ತಯಾರಿಗಳು ನಡೆದಿವೆ. ಇನ್ನೂ ಈ ಒಂದು ಪಂದ್ಯಾವಳಿಯಲ್ಲಿ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ್, ಸನತ್ ಜಯಸೂರ್ಯ, ಮುತ್ತಯ್ಯ ಮುರಳೀಧರನ್, ಚಮಿಂಡಾ ವಾಸ್ ಸೇರಿದಂತೆ 24 ಮಂದಿ ಮಾಜಿ ಕ್ರಿಕೆಟ್ ಆಟಗಾರರು ಭಾಗವಹಿಸಲಿದ್ದಾರೆ.

ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪಲ್ಲಾದ ಜೋಶಿ ಭಾಗವಹಿಸಲಿದ್ದಾರೆ. ವಸುದೈವ ಕುಟುಂಬಕಂ ಸಂದೇಶ ಸಾರುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯದಲ್ಲಿ ಸಚಿನ್ ತೆಂಡುಲ್ಕರ್ ಹಾಗೂ ಯುವರಾಜ್ ಸಿಂಗ್ ನಾಯಕತ್ವದ ತಂಡಗಳ ನಡುವೆ ಹೋರಾಟ ನಡೆಯಲಿದೆ.
ಸ್ಪಿನ್ನರ್ಗಳಾದ ಹರ್ಭಜನ್ ಸಿಂಗ್, ಮುತ್ತಯ್ಯ ಮುರಳೀಧರನ್, ವೇಗಿಗಳಾದ ಇರ್ಫಾನ್ ಪಠಾಣ್, ಚಾಮಿಂಡ್ ವಾಸ್, ಆರ್.ಪಿ.ಸಿಂಗ್ ಅಲ್ಲದೆ ಎಡಗೈ ಸ್ಪಿನ್ನರ್ ಮಾಂಟಿ ಪನೇಸರ್, ಡ್ಯಾನಿ ಮಾರಿಸನ್, ವೆಂಕಟೇಶಪ್ರಸಾದ್ ಸೇರಿ 7 ದೇಶಗಳ ಆಟಗಾರರು ಪಾಲ್ಗೊಳ್ಳಲಿದ್ದಾರೆ. ಒಂದು ಜಗತ್ತು-ಒಂದು ಕುಟುಂಬ ಸಂದೇಶ ಬೆಂಬಲಿಸಿ 1983ರಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡದ ಕೆಲವು ಆಟಗಾರರು ಆಗಮಿಸುತ್ತಿರುವುದು ವಿಶೇಷ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications