ಒಲಿಂಪಿಕ್ಸ್: ಸಾಧನೆಯ ಗುರಿಯೊಂದಿಗೆ ಟೋಕಿಯೊಕ್ಕೆ ಬಂದಿಳಿದ ಭಾರತೀಯ ಕ್ರೀಡಾಪಟುಗಳು!
ಟೋಕಿಯೊ, ಜು. 18: ಭಾರತದ ಹಾಕಿ ವೈಭವವನ್ನು ಒಲಿಂಪಿಕ್ಸ್ನಲ್ಲಿ ಮರಳಿ ತರುವುದು ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡುವ ಗುರಿಯೊಂದಿಗೆ 54 ಅಥ್ಲೀಟ್ ಗಳೂ ಸೇರಿದಂತೆ 88 ಸದಸ್ಯರ ಭಾರತದ ಕ್ರೀಡಾಪಟುಗಳ ತಂಡ ಟೋಕಿಯೊ ನಗರದ ನರಿಟಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದಿಳಿದಿದೆ. ಕುರ್ಬೆ ನಗರದ ಪ್ರತಿನಿಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಭಾರತೀಯ ತಂಡವನ್ನು ಬರಮಾಡಿಕೊಂಡರು.
ಬ್ಯಾಡ್ಮಿಂಟನ್, ಬಿಲ್ಲುಗಾರಿಕೆ, ಹಾಕಿ, ಜುಡೋ, ಈಜು, ಭಾರ ಎತ್ತುವ ಸ್ಪರ್ಧೆ, ಜಿಮ್ನಾಸ್ಟಿಕ್ಸ್ ಮತ್ತು ಟೆಬಲ್ ಟೆನಿಸ್ ಸೇರಿದಂತೆ 8 ತಂಡಗಳ ಅಥ್ಲೀಟ್ಗಳು ಮತ್ತು ಇತರ ಸಿಬ್ಬಂದಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಿನ್ನೆ (ಜು.17) ರಾತ್ರಿ ಪ್ರಯಾಣ ಬೆಳೆಸಿದ್ದರು. ಈ ಸಲ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಸ್ಪರ್ಧೆ ಮಾಡಲು 127 ಅಥ್ಲೀಟ್ಗಳು ಹೋಗುತ್ತಿದ್ದು, ಇದು ಒಲಿಂಪಿಕ್ಸ್ನಲ್ಲಿ ಭಾಗವಹಿಸುತ್ತಿರುವ ಭಾರತದ ಅತಿ ದೊಡ್ಡ ಕ್ರೀಡಾಪಟುಗಳ ತಂಡವಾಗಿದೆ.

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವ ನಿಶಿತ್ ಪ್ರಮಾಣಿಕ್ ಅವರು ತಂಡಕ್ಕೆ ಶುಭ-ಹಾರೈಸಿ ಬೀಳ್ಕೊಟ್ಟಿದ್ದರು.
ಟೋಕಿಯೊ ತಲುಪಿದ ಭಾರತೀಯ ಪರುಷರ ಹಾಕಿ ತಂಡದ ಸದಸ್ಯರು #TokyoOlympics #IndianHockeyTeam pic.twitter.com/SU4skTLjXe
— myKhel Kannada (@MykhelKannada) July 18, 2021
"ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳ ಮೇಲೆ 135 ಕೋಟಿ ಭಾರತೀಯರ ಶುಭ ಹಾರೈಕೆ ಇದೆ. ಇಂತಹ ಶ್ರೇಷ್ಠ ಅವಕಾಶ ಪಡೆದ ಆಯ್ದ ಕೆಲವೇ ಕೆಲವರಲ್ಲಿ ನೀವೂ ಸೇರಿದ್ದೀರಿ, ನೀವು ಜೀವನದಲ್ಲಿ ಇನ್ನೂ ದೂರ ಸಾಗಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಲಹೆ ಮಾಡಿರುವಂತೆ ಒತ್ತಡಕ್ಕೆ ಒಳಗಾಗದೆ ನಿಮ್ಮ ಅತ್ಯುತ್ತಮ ಪ್ರದರ್ಶನ ನೀಡಿ" ಎಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications