RCB: ಆರ್ ಸಿಬಿ ಪ್ಲೇಆಫ್ ಲೆಕ್ಕಾಚಾರ; ಇನ್ಮುಂದೆ ಪ್ರತಿ ಪಂದ್ಯ ಕೂಡ ಫೈನಲ್!
ಮಹಿಳಾ ಪ್ರೀಮಿಯರ್ ಲೀಗ್ (WPL) 2025 ಆವೃತ್ತಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಆರ್ ಸಿಬಿ ಬಳಿಕ ಬೆಂಗಳೂರಿನಲ್ಲಿ ನಡೆದ ನಾಲ್ಕು ಪಂದ್ಯಗಳನ್ನು ಸೋತು ಸಂಕಷ್ಟಕ್ಕೆ ಸಿಲುಕಿದೆ. ಆರ್ ಸಿಬಿ ಆಡಿರುವ 6 ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದ್ದು 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.
ಸುಳಭವಾಗಿ ಪ್ಲೇಆಫ್ ತಲುಪುವ ಅವಕಾಶ ಕಳೆದುಕೊಂಡಿದ್ದು ಆರ್ ಸಿಬಿ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ. ಆರ್ ಸಿಬಿ ಪ್ಲೇಆಫ್ ಪ್ರವೇಶಿಸಬೇಕು ಎಂದರೆ ಇನ್ನುಳಿದ ಎರಡೂ ಪಂದ್ಯಗಳಲ್ಲಿ ದೊಡ್ಡ ಅಂತರದಲ್ಲಿ ಗೆದ್ದು ನಾಲ್ಕು ಪಾಯಿಂಟ್ ಪಡೆಯುವ ಜೊತೆಗೆ ರನ್ ರೇಟ್ ಕೂಡ ಸುಧಾರಿಸಿಕೊಳ್ಳಬೇಕಾಗುತ್ತದೆ.

ಮುಂದಿನ ಎರಡು ಪಂದ್ಯಗಳನ್ನು ಯುಪಿ ವಾರಿಯರ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಈ ಎರಡೂ ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯಗಳಾಗಿದೆ. ಎರಡೂ ಪಂದ್ಯ ಗೆದ್ದರು ಉಳಿದ ತಂಡಗಳ ಫಲಿತಾಂಶಗಳ ಮೇಲೆ ಕೂಡ ಅವಲಂಬಿತವಾಗಿದೆ.
ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ಮುಂದಿನ ಮೂರು ಪಂದ್ಯಗಳಲ್ಲಿ ಕನಿಷ್ಠ ಎರಡು ಪಂದ್ಯಗಳನ್ನು ಸೋತರೆ ಮಾತ್ರ ಆರ್ ಸಿಬಿಗೆ ಪ್ಲೇಆಫ್ ಅವಕಾಶ ಇರಲಿದೆ.
ತವರಿನಲ್ಲಿ ಸತತ ನಾಲ್ಕು ಪಂದ್ಯಗಳನ್ನು ಸೋತಿದ್ದು ಹಾಲಿ ಚಾಂಪಿಯನ್ನರಿಗೆ ದೊಡ್ಡ ಹೊಡೆತವನ್ನೇ ನೀಡಿದೆ. ಯುಪಿ ವಾರಿಯರ್ಸ್ ವಿರುದ್ಧ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಸೋತು ಪಂದ್ಯಾವಳಿಯಿಂದ ಹೊರಬೀಳುವ ಆತಂಕದಲ್ಲಿದೆ.
ತವರಿನಲ್ಲಿ ಆಡುವುದೇ ದೊಡ್ಡ ಸಮಸ್ಯೆ?
ಆರ್ ಸಿಬಿ ತಂಡಕ್ಕೆ ತವರಿನಲ್ಲಿ ಆಡುವುದೇ ದೊಡ್ಡ ಸಮಸ್ಯೆಯಾಗಿದೆ. ಕಳೆದ ಆವೃತ್ತಿಯಲ್ಲಿ ಕೂಡ ತವರಿನಲ್ಲಿ ಪಂದ್ಯಗಳನ್ನು ಗೆಲ್ಲುವಲ್ಲಿ ತಡಕಾಡಿದ್ದ ಆರ್ ಸಿಬಿ ದೆಹಲಿಯಲ್ಲಿ ಸತತವಾಗಿ ಪಂದ್ಯಗಳನ್ನು ಗೆದ್ದಿದ್ದು ಮಾತ್ರವಲ್ಲದೆ ಚಾಂಪಿಯನ್ ಕೂಡ ಆಗಿತ್ತು.
ಮಹಿಳಾ ತಂಡಕ್ಕೆ ಮಾತ್ರವಲ್ಲ ಪುರುಷ ತಂಡಕ್ಕೂ ಕೂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೆಲುವು ಪಡೆಯುವುದು ಕಠಿಣ ಸವಾಲಾಗಿದೆ. ತವರಿನಲ್ಲಿ ಕಳಪೆ ಗೆಲುವಿನ ಸರಾಸರಿಯನ್ನು ಹೊಂದಿರುವ ತಂಡ ಆರ್ ಸಿಬಿಯಾಗಿದೆ. ಕಪ್ ಗೆಲ್ಲದೇ ಇದ್ದರೂ ಆರ್ ಸಿಬಿಗೆ ಸಿಗುವ ಅಭಿಮಾನಿಗಳ ಬೆಂಬಲ ಕಡಿಮೆಯೇನಲ್ಲ, ಕಿಕ್ಕಿರಿದು ಸೇರುವ ಅಭಿಮಾನಿಗಳು ಮೈದಾನದಿಂದ ಗೆಲುವಿನ ಖುಷಿಯಲ್ಲಿ ಹೋಗುವುದಕ್ಕಿಂತ ಸೋಲಿನ ನೋವಿನಲ್ಲಿ ಹೋಗುವುದೇ ಹೆಚ್ಚಾಗಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications