Sri Lanka vs Afghanistan: ಒಂದೇ ಓವರ್ನಲ್ಲಿ 39 ರನ್; 36 ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ ಶ್ರೀಲಂಕಾ ಬ್ಯಾಟರ್
ಉದಯ್ಪುರದ ಮೀರಜ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯನ್ ಲೆಜೆಂಡ್ಸ್ ಲೀಗ್ 2025ರ ಎಲಿಮಿನೇಟರ್ ಪಂದ್ಯದಲ್ಲಿ ಶ್ರೀಲಂಕಾದ ಬ್ಯಾಟರ್ ತಿಸಾರ ಪೆರೇರಾ ಅಬ್ಬರಿಸಿದರು. 36 ಎಸೆತಗಳಲ್ಲಿ ಬರೋಬ್ಬರಿ 108 ಗಳಿಸಿದ್ದಲ್ಲದೆ, ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದರು.
ರಾಷ್ಟ್ರೀಯ ತಂಡಗಳಿಗೆ ಆಡಿ ನಿವೃತ್ತಿ ಹೊಂದಿರುವ ಆಟಗಾರರು ಮತ್ತೊಮ್ಮೆ ಏಷ್ಯನ್ ಲೆಜೆಂಡ್ಸ್ ಲೀಗ್ನಲ್ಲಿ ಆಡುತ್ತಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ಶ್ರೀಲಂಕಾ ಲೆಜೆಂಡ್ಸ್ ಅಫ್ಘಾನಿಸ್ತಾನ ಲೆಜೆಂಡ್ಸ್ ವಿರುದ್ಧ 26 ರನ್ಗಳ ಗೆಲುವು ಸಾಧಿಸಿತು. ತಿಸಾರಾ ಪೆರೇರಾ ಅಬ್ಬರದ ಶತಕದ ನೆರವಿನಿಂದ ಶ್ರೀಲಂಕಾ 230 ರನ್ ಕಲೆಹಾಕಿದರೆ, ಅಫ್ಘಾನಿಸ್ತಾನ 204 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.

ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿತು. ಲಿಯೋ ಫ್ರಾನ್ಸಿಸ್ಕೊ 2 ರನ್ ಗಳಿಸಿದರೆ, ದಿಲ್ಷಾನ್ 8 ರನ್ ಗಳಿಸಿ ಔಟಾದರು. ಮೆವಾನ್ ಫೆರ್ನಾಂಡೋ 56 ಎಸೆತಗಳಲ್ಲಿ 7 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 81 ರನ್ ಗಳಿಸಿದರು, ಲಸಿತ್ ಲಕ್ಷಣ್ 15 ಎಸೆತಗಳಲ್ಲಿ 19 ರನ್ ಗಳಿಸಿದರು. ತಿಸಾರ ಪೆರೇರಾ ಕೇವಲ 36 ಎಸೆತಗಳಲ್ಲಿ 2 ಬೌಂಡರಿ 13 ಸಿಕ್ಸರ್ ಸಹಿತ ಅಜೇಯ 108 ರನ್ ಗಳಿಸಿ ಅಬ್ಬರಿಸಿದರು.
ಕೊನೆಯ ಓವರ್ ನಲ್ಲಿ 39 ರನ್
ಕೊನೆಯ ಓವರ್ ನಲ್ಲಿ ತಿಸಾರ ಪೆರೇರಾ ಅಬ್ಬರಕ್ಕೆ ಅಫ್ಘಾನಿಸ್ತಾನ ದಂಗಾಯಿತು. ಕೊನೆಯ ಓವರ್ ನ ಆರೂ ಎಸೆತಗಳನ್ನು ಸಿಕ್ಸರ್ ಬಾರಿಸಿದ ಪೆರೇರಾ ಶತಕ ಪೂರೈಸಿದರು. ಜೊತೆಗೆ ಅಫ್ಘಾನಿಸ್ತಾನ ಬೌಲರ್ ಮೂರು ವೈಡ್ ಬಾಲ್ ಎಸೆಯುವ ಮೂಲಕ ಕೊನೆಯ ಓವರ್ ನಲ್ಲಿ ಶ್ರೀಲಂಕಾ ಬರೋಬ್ಬರಿ 39 ರನ್ ಗಳಿಸಿತು.
ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್ ಮಾತ್ರ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು. ಅಸ್ಘರ್ ಅಫ್ಘಾನ್ 31 ಎಸೆತಗಳಲ್ಲಿ 70 ರನ್ ಗಳಿಸಿದರೆ, ಅಯಾನ್ ಖಾನ್ 38 ಎಸೆತಗಳಲ್ಲಿ 52 ರನ್ ಗಳಿಸಿದರು, ಉಳಿದ ಯಾವ ಬ್ಯಾಟರ್ ಕೂಡ ಹೋರಾಟ ಕೊಡಲಿಲ್ಲ.
ಈ ಗೆಲುವಿನ ಮೂಲಕ ಶ್ರೀಲಂಕಾ ಕ್ವಾಲಿಫೈಯರ್ 2 ಹಂತಕ್ಕೆ ಪ್ರವೇಶ ಪಡೆದುಕೊಂಡಿದೆ. ಸೋಮವಾರ ಮಾರ್ಚ್ 17ರಂದು ಇಂಡಿಯಾ ಲೆಜೆಂಡ್ಸ್ ಮತ್ತು ಏಷ್ಯನ್ ಸ್ಟಾರ್ಸ್ ಕ್ವಾಲಿಫೈಯರ್ 2 ಪಂದ್ಯ ಆಡಲಿದ್ದು, ಇಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದ್ದು, ಸೋಲುವ ತಂಡ ಕ್ವಾಲಿಫೈಯರ್ 2 ಪಂದ್ಯದಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications