ಮಂಗಳೂರಿನಲ್ಲಿ ಮೂರು ದಿನ ರಾಷ್ಟ್ರಮಟ್ಟದ ಈಜು ಸ್ಪರ್ಧೆ: ಎಮ್ಮೆಕೆರೆ ಈಜುಕೊಳದ ವಿಶೇಷತೆಗಳೇನು..?
ಮಂಗಳೂರು, ನವೆಂಬರ್ 25: ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ಇಂದು ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ಲೋಕಾರ್ಪಣೆಗೊಂಡಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಮೂರು ದಿನಗಳವರೆಗೆ ರಾಷ್ಟ್ರಮಟ್ಟದ ಈಜು ಸ್ಪರ್ಧೆ ಆಯೋಜನೆಗೊಂಡಿದೆ. ಈ ಸ್ಪರ್ಧೆಯಲ್ಲಿ ದೇಶದ ವಿವಿಧ ಮೂಲೆಗಳಿಂದ ಬಂದ ಈಜು ಸ್ಪರ್ಧಿಗಳು ಉತ್ಸಾಹದಿಂದಲೇ ಭಾಗವಹಿಸಿದರು.
ವಿವಿಧ ವಿಭಾಗಗಳಲ್ಲಿ ಈಜುಸ್ಪರ್ಧೆ ನಡೆಯಲಿದ್ದು, 29 ರಾಜ್ಯಗಳ ಸುಮಾರು 752 ಮಂದಿ ಈಜುಪಟುಗಳು ಭಾಗವಹಿಸಿದ್ದಾರೆ. 25 ವರ್ಷದಿಂದ 90 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯನ್ನು ನಡೆಸಲು ಈಜು ಫೆಡರೇಶನ್ ಆಫ್ ಇಂಡಿಯಾದ 150ಕ್ಕೂ ಅಧಿಕ ಅಧಿಕಾರಿಗಳು ಮತ್ತು ಸ್ವಯಂ ಸೇವಕರು ಭಾಗಿಯಾಗಿದ್ದಾರೆ.

ಇಂಡಿಯನ್ ಸ್ವಿಮ್ಮಿಂಗ್ ಫೆಡರೇಶನ್ ವತಿಯಿಂದ ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಶನ್ ಸಹಯೋಗದಲ್ಲಿ ಈ ಸ್ಪರ್ಧೆ ನಡೆಯುತ್ತಿದೆ. ಸ್ಪರ್ಧೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಉತ್ತರಪ್ರದೇಶ, ಅಸ್ಸಾಂ, ಚಂಡೀಗಡ, ದೆಲ್ಲಿ, ಗುಜರಾತ್, ಹರ್ಯಾಣ, ಲಕ್ಷ ದ್ವೀಪ, ಮಣಿಪುರ, ಮೇಘಾಲಯ, ರಾಜಸ್ತಾನ, ಸಿಕ್ಕಿಂ,
ತಮಿಳುನಾಡು, ಉತ್ತರಖಂಡ, ಪಶ್ಚಿಮ ಬಂಗಾಲ, ಒರಿಸ್ಸಾ ರಾಜ್ಯಗಳ ಈಜುಪಟುಗಳು ಆಗಮಿಸಿದ್ದಾರೆ. ಸ್ಪರ್ಧಿಗಳು ಅತ್ಯಂತ ಉತ್ಸಾಹದಿಂದಲೇ ನೂತನ ಈಜುಕೊಳದಲ್ಲಿ ಈಜುಸ್ಪರ್ಧೆಯನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ಹಿರಿಯ ನಾಗರಿಕರೂ ಭಾರೀ ಉತ್ಸಾಹದಿಂದಲೇ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಕಂಡು ಬಂದಿತ್ತು.
ಎಮ್ಮೆಕೆರೆಯ ಈ ಅಂತಾರಾಷ್ಟ್ರೀಯ ಒಲಿಂಪಿಕ್ ಗುಣಮಟ್ಟದ ಈಜುಕೊಳ ಸುಮಾರು 2 ಎಕರೆ ಪ್ರದೇಶದಲ್ಲಿ 24.94 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. 50ಮೀಟರ್ ಉದ್ದ, 25ಮೀಟರದ ಅಗಲ ಮತ್ತು 2.2ಮೀಟರ್ ನಿಂದ 1.4ಮೀಟರ್ ವರೆಗಿನ ಆಳ ಹೊಂದಿರುವ ಸ್ಪರ್ಧಾತ್ಮಕ ಸ್ವಿಮ್ಮಿಂಗ್ ಪೂಲ್ ಇದಾಗಿದೆ.
ಸ್ಪರ್ಧೆಯೊಂದಿಗೆ, ಕ್ರೀಡಾಪಟುಗಳ ತರಬೇತಿಗಾಗಿ 25 ಮೀ. ಉದ್ದ, 10 ಅಗಲ ಮತ್ತು 2.2 ಮೀ ಆಳದ ಅಭ್ಯಾಸ ಪೂಲ್ ಅನ್ನು ನಿರ್ಮಿಸಲಾಗಿದೆ. ಅಲ್ಲದೆ, ಈಜುಸ್ಪರ್ಧೆಗೆ ಮಕ್ಕಳನ್ನು ಆರಂಭಿಕ ಹಂತದಲ್ಲೇ ತರಬೇತುಗೊಳಿಸುವ ಉದ್ದೇಶದಿಂದ ಪಕ್ಕದಲ್ಲಿಯೇ 13.8ಮೀ ಉದ್ದ, 10ಮೀ ಅಗಲ ಮತ್ತು 1.2ಮೀ ಆಳದ ಪುಟಾಣಿ ಈಜುಕೊಳವನ್ನೂ ಸಹ ನಿರ್ಮಿಸಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications