ಆರ್ಸಿಬಿ ಸ್ಟಾರ್ ಟಿಮ್ ಡೇವಿಡ್ ಅಬ್ಬರದ ಹಿಂದಿದೆ ದಿನೇಶ್ ಕಾರ್ತಿಕ್ ಕೈವಾಡ: ಸ್ಫೋಟಕ ಮಾಹಿತಿ ರಿವೀಲ್
IPL 2026 RCB: ಎಂ.ಚಿನ್ನಸ್ವಾಮಿಯಲ್ಲಿ ನಡೆದ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಪರ ಟಿಮ್ ಡೇವಿಡ್ ಸ್ಫೋಟಕ ಇನ್ನಿಂಗ್ಸ್ ಆಡಿ ತಂಡದ ಗೆಲವಿಗೆ ಪ್ರಮುಖ ಪಾತ್ರವಹಿಸಿದರು. ಪಂದ್ಯದ ನಂತರ ಮಾತನಾಡಿದ ಅವರು ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕೆ ಕಾರಣ ಯಾರೆಂದು ಬಹಿರಂಗಬಪಡಿಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 25 ಎಸೆತಗಳಲ್ಲಿ 70 ರನ್ ಚಚ್ಚಿ ಪಂದ್ಯದ ಗತಿಯನ್ನೇ ಬದಲಿಸಿದ ಆರ್ಸಿಬಿ ತಂಡದ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್, ತಮ್ಮ ಈ ಅದ್ಭುತ ಪ್ರದರ್ಶನದ ಕ್ರೆಡಿಟ್ ಅನ್ನು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಅವರಿಗೆ ಅರ್ಪಿಸಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಗಳಲ್ಲಿ ಆಡಲು ದಿನೇಶ್ ಕಾರ್ತಿಕ್ ನೀಡಿದ ಸಲಹೆಗಳು ತಮಗೆ ಬಹಳ ಸಹಾಯ ಮಾಡಿದವು ಎಂದು ಅವರು ಸಂತಸ ಹಂಚಿಕೊಂಡಿದ್ದಾರೆ.

ಆಕ್ರಮಣಕಾರಿ ಆಟ ಆಡಿದ ಟಿಮ್ ಡೇವಿಡ್
ನಾಯಕ ರಜತ್ ಪಾಟಿದಾರ್ ಅವರಿಂದ "ತಾವು ಕಂಡ ಅತ್ಯುತ್ತಮ ಫಿನಿಶರ್" ಎಂದು ಕರೆಸಿಕೊಂಡ ಟಿಮ್ ಡೇವಿಡ್, ತಮ್ಮ ಇನ್ನಿಂಗ್ಸ್ನಲ್ಲಿ 8 ಸಿಕ್ಸರ್ ಹಾಗೂ 3 ಬೌಂಡರಿಗಳನ್ನು ಸಿಡಿಸಿದರು. ಇವರ ಈ ಆಕ್ರಮಣಕಾರಿ ಆಟದ ನೆರವಿನಿಂದ ಆರ್ಸಿಬಿ 3 ವಿಕೆಟ್ ನಷ್ಟಕ್ಕೆ 250 ರನ್ಗಳ ಬೃಹತ್ ಮೊತ್ತ ಪೇರಿಸಿತು. ಬಳಿಕ ಗುರಿ ಬೆನ್ನಟ್ಟಿದ ಸಿಎಸ್ಕೆ ತಂಡವನ್ನು 207 ರನ್ಗಳಿಗೆ ಆಲೌಟ್ ಮಾಡುವ ಮೂಲಕ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿತು.
ದಿನೇಶ್ ಕಾರ್ತಿಕ್ ಕೊಂಡಾಡಿದ ಡೇವಿಡ್
ಪಂದ್ಯದ ನಂತರದ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಟಿಮ್ ಡೇವಿಡ್, "ನಾನು ನನ್ನ ಆಟದಲ್ಲಿ ಹೆಚ್ಚಿನ ಬದಲಾವಣೆ ಮಾಡಿಕೊಳ್ಳುವುದಿಲ್ಲ. ಆದರೆ ನಾನು ಮಾಡುವ ಸಿದ್ಧತೆಯು ನನಗೆ ಆತ್ಮವಿಶ್ವಾಸ ನೀಡುತ್ತದೆ. ದಿನೇಶ್ ಕಾರ್ತಿಕ್ ಅವರೊಂದಿಗೆ ಕೆಲಸ ಮಾಡುವುದು ತುಂಬಾ ಖುಷಿ ನೀಡುತ್ತದೆ. ಇಂತಹ ಪರಿಸ್ಥಿತಿಗಳಲ್ಲಿ ಹೇಗೆ ಆಡಬೇಕೆನ್ನುವ ಅನುಭವ ಹೊಂದಿರುವ ಆಟಗಾರ ಅವರು," ಎಂದು ಹೇಳಿದರು.
"ಎಲ್ಲವೂ ಯಾವಾಗಲೂ ಅಂದುಕೊಂಡಂತೆಯೇ ನಡೆಯುವುದಿಲ್ಲ. ನಾಯಕ ಪಾಟಿದಾರ್ ಕೇವಲ 19 ಎಸೆತಗಳಲ್ಲಿ 48 ರನ್ ಸಿಡಿಸಿದರು. ನಾನು ಅವರ ಮೇಲಿನ ಒತ್ತಡವನ್ನು ಸ್ವಲ್ಪ ಕಡಿಮೆ ಮಾಡಿದೆ ಅಷ್ಟೇ, ಇದು ತುಂಬಾ ಮಜವಾಗಿತ್ತು. ನನ್ನ ನಂತರ ಬ್ಯಾಟಿಂಗ್ ಮಾಡಲು ಜಿತೇಶ್ ಶರ್ಮಾ ಮತ್ತು ರೊಮಾರಿಯೋ ಶೆಫರ್ಡ್ ಇರುವುದು ನನಗೆ ಹೆಚ್ಚಿನ ಆತ್ಮವಿಶ್ವಾಸ ನೀಡಿತು," ಎಂದು ಅವರು ಹೇಳಿದರು.
"ಟಿಮ್ ಡೇವಿಡ್ ಒಬ್ಬ ಅನುಭವಿ ಆಟಗಾರ ಮತ್ತು ಅತ್ಯುತ್ತಮ ಫಿನಿಶರ್ಗಳಲ್ಲಿ ಒಬ್ಬರು. ಅವರು ಸ್ಥಿರವಾಗಿ ಪ್ರದರ್ಶನ ನೀಡುತ್ತಾರೆ ಮತ್ತು ನಾನು ಕಂಡ ಅತ್ಯುತ್ತಮ ಫಿನಿಶರ್ಗಳಲ್ಲಿ ಇವರು ಒಬ್ಬರು," ಎಂದು ಇದೇ ವೇಳೆ ನಾಯಕ ಪಾಟಿದಾರ್ ಅವರು ಶ್ಲಾಘಿಸಿದರು. ಇನ್ನೂ ಕೃನಾಲ್ ಅವರು ಒಂದೇ ಓವರ್ನಲ್ಲಿ ಸರ್ಫರಾಜ್ ಖಾನ್ ಮತ್ತು ಕಾರ್ತಿಕ್ ಶರ್ಮಾ ಅವರ ವಿಕೆಟ್ ಪಡೆದು ನೆರವಾದರು ಅಂತಲೂ ಹೇಳಿದರು. ಮುಂದುವರೆದು ಮಾತನಾಡಿದ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಅವರು, "ನನ್ನ ಮೇಲೆ ಒತ್ತಡ ಬಿದ್ದಾಗ ಕೃನಾಲ್ ಪಾಂಡ್ಯ ಕಡೆಗೆ ನೋಡುತ್ತೇನೆ. ಅವರ ಮೇಲೆ ನನಗೆ ಅಂತಹ ನಂಬಿಕೆಯಿದೆ," ಎಂದು ಹೇಳಿದರು.
-
RCB vs CSK: ಆರ್ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್ಕೆ; ಪಕ್ಕಾ ಪ್ಲೇಯಿಂಗ್ 11 ಹೀಗಿದೆ ನೋಡಿ -
RCB Playing 11 Prediction: ಸಿಎಸ್ಕೆ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 -
ಚಿನ್ನಸ್ವಾಮಿಯಲ್ಲಿ ರಾರಾಜಿಸಿದ ಕರ್ನಾಟಕ ಕ್ರಿಕೆಟ್ ದಿಗ್ಗಜರ ಹೆಸರು; ಕನ್ನಡ ಮಣ್ಣಿನ ಮಕ್ಕಳಿಗೆ ಕೆಎಸ್ಸಿಎ ವಿಶೇಷ ಗೌರವ -
RCB Vs CSK: ಆರ್ಸಿಬಿ ನೀಡಿದ ಗುರಿ ಮುಟ್ಟಲಾಗದೇ ಶರಣಾದ ಸಿಎಸ್ಕೆ -
ಚಿನ್ನಸ್ವಾಮಿಯಲ್ಲಿ ರನ್ ಮಳೆ ಹರಿಸಿ ಸಿಎಸ್ಕೆಗೆ ರೆಡ್ ಅಲರ್ಟ್ ನೀಡಿದ ಆರ್ಸಿಬಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
IPL ವಿಐಪಿ ಟಿಕೆಟ್ ದುರ್ಬಳಕೆ ಆಗಿಲ್ಲ: ಶಾಸಕರ ಕುಟುಂಬಸ್ಥರು ಪಂದ್ಯ ನೋಡಿದರೆ ತಪ್ಪೇನು; ಪರಮೇಶ್ವರ್ ಪ್ರಶ್ನೆ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್ -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಬೈಲ್ ಕಳ್ಳತನ: ಜಾರ್ಖಂಡ್ ಮೂಲದ ಕಳ್ಳರ ಜಾಲ ಬೇಧಿಸಿದ ಬೆಂಗಳೂರು ಪೊಲೀಸರು












Click it and Unblock the Notifications