IPL 2025: ಸನ್ರೈಸರ್ಸ್ ಹೈದರಾಬಾದ್ ಸ್ಟಾರ್ ಆಟಗಾರನಿಗೆ ಕೋವಿಡ್ ಸೋಂಕು ದೃಢ
ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಒಂದು ವಾರ ಸ್ಥಗಿತಗೊಂಡಿದ್ದ ಐಪಿಎಲ್ 2025ರ ಪಂದ್ಯಾವಳಿ ಮತ್ತೆ ಆರಂಭವಾಗಿದೆ. ಪಂದ್ಯಾವಳಿ ಮುಗಿಯುವುದು ತಡವಾದ ಕಾರಣ ಹಲವು ವಿದೇಶಿ ಆಟಗಾರರ ಲಭ್ಯತೆ ಈಗಾಗಲೇ ಕಾಡುತ್ತಿದೆ. ಈ ಬೆನ್ನಲ್ಲೇ ಸನ್ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರರೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಆತಂಕ ಮೂಡಿಸಿದೆ.
ಸನ್ರೈಸರ್ಸ್ ಹೈದರಾಬಾದ್ನ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕು ದೃಢವಾಗಿದ್ದರಿಂದ ಅವರು ಸೋಮವಾರ ಲಕ್ನೋದಲ್ಲಿ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಪಂದ್ಯದ ಮುನ್ನಾದಿನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಎಸ್ಆರ್ಎಚ್ ಮುಖ್ಯ ತರಬೇತುದಾರ ಡೇನಿಯಲ್ ವೆಟ್ಟೋರಿ, ಟ್ರಾವಿಸ್ ಹೆಡ್ಗೆ ಕೋವಿಡ್ ಸೋಂಕು ತಗುಲಿದ್ದು, ಸೋಮವಾರ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ದೃಢಪಡಿಸಿದರು.

"ಟ್ರಾವಿಸ್ ನಾಳೆ ಬೆಳಿಗ್ಗೆ ಬರುತ್ತಿದ್ದಾರೆ, ಅವರು ತಡವಾಗಿ ಬರುತ್ತಿದ್ದಾರೆ. ಅವರಿಗೆ ಕೋವಿಡ್ ಇತ್ತು, ಆದ್ದರಿಂದ ಅವರು ಪ್ರಯಾಣಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ಅವರು ಸೋಮವಾರ ಬೆಳಿಗ್ಗೆ ಬರುತ್ತಾರೆ ಮತ್ತು ಅದರ ನಂತರ ಅವರು ಹೇಗಿದ್ದಾರೆಂದು ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ" ಎಂದು ವೆಟ್ಟೋರಿ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸೋಮವಾರ ಬರಲಿದ್ದರೂ, ಅವರಿಗೆ ಯಾವಾಗ ಮತ್ತು ಎಲ್ಲಿ ಕೋವಿಡ್ ಸೋಂಕು ತಗುಲಿತು ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ. ಐಪಿಎಲ್ ಸ್ಥಗಿತಗೊಂಡ ನಂತರ, ಹೆಡ್ ಮತ್ತು ನಾಯಕ ಪ್ಯಾಟ್ ಕಮ್ಮಿನ್ಸ್ ಆಸ್ಟ್ರೇಲಿಯಾಕ್ಕೆ ತೆರಳಿದ್ದರು ಮತ್ತು ಅವರು ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ತಯಾರಿ ನಡೆಸಬೇಕಾಗಿರುವುದರಿಂದ ಅವರು ಎಷ್ಟು ಪಂದ್ಯಗಳಿಗೆ ಲಭ್ಯವಿರುತ್ತಾರೆ ಎನ್ನುವ ಬಗ್ಗೆ ಸ್ಪಷ್ಟನೆ ಇಲ್ಲ.
ಐಪಿಎಲ್ ಮರು ಆರಂಭದ ಬಳಿಕ ಟ್ರಾವಿಸ್ ಹೆಡ್ ಮತ್ತು ಕಮ್ಮಿನ್ಸ್ ಇಬ್ಬರೂ ಉಳಿದ ಪಂದ್ಯಗಳಿಗೆ ಹೈದರಾಬಾದ್ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ದೃಢಪಡಿಸಲಾಯಿತು. ಎಸ್ಆರ್ಎಚ್ ಈಗಾಗಲೇ ಟೂರ್ನಮೆಂಟ್ನಿಂದ ಹೊರಗುಳಿದಿದ್ದು, ಮೇ 25 ರಂದು ನವದೆಹಲಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಲೀಗ್ ಪಂದ್ಯದೊಂದಿಗೆ ತಮ್ಮ ಸೀಸನ್ ಅನ್ನು ಕೊನೆಗೊಳಿಸಲಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications