ಅರಸೀಕೆರೆ ಎಕ್ಸ್ಪ್ರೆಸ್ ಡೇವಿಡ್ ಜಾನ್ಸನ್ ಸಾವಿಗೆ ಜಯ್ ಶಾ, ಅನಿಲ್ ಕುಂಬ್ಳೆ, ಗಂಭಿರ್ ಸಂತಾಪ
ಅರಸೀಕೆರೆ ಎಕ್ಸ್ಪ್ರೆಸ್ ಎಂದೇ ಖ್ಯಾತರಾಗಿರುವ ಭಾರತ ಮತ್ತು ಕರ್ನಾಟಕ ತಂಡದ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ 52 ನೇ ವಯಸ್ಸಿನಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕ್ರಿಕೆಟ್ ಜಗತ್ತಿನಲ್ಲಿ ಆಘಾತ ಉಂಟಾಗಿದೆ.
ಭಾರತ ತಂಡಕ್ಕಾಗಿ ಡೇವಿಡ್ ಜಾನ್ಸನ್ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 1996ರಲ್ಲಿ ಅವರು ಭಾರತಕ್ಕಾಗಿ ಮೊದಲ ಪಂದ್ಯವನ್ನು ಆಡಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಮಾಜಿ ಕ್ರಿಕೆಟಿಗರಿಗೆ ಆಘಾತ ಉಂಟುಮಾಡಿದೆ.

ಸಂತಾಪ ಸೂಚಿಸಿದ ಜಯ್ ಶಾ, ಅನಿಲ್ ಕುಂಬ್ಳೆ
ಮಾಜಿ ಕ್ರಿಕೆಟಿಗನ ಅನಿರೀಕ್ಷಿತ ಸಾವಿಗೆ ಮಾಜಿ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಅನಿಲ್ ಕುಂಬ್ಳೆ ಮತ್ತು ಇತರರು ಜಾನ್ಸನ್ ಅವರ ನಿಧನಕ್ಕೆ ಎಕ್ಸ್ನಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಮಾಡಿದ್ದಾರೆ.
ನನ್ನ ಕ್ರಿಕೆಟ್ ಸಹೋದ್ಯೋಗಿ ಡೇವಿಡ್ ಜಾನ್ಸನ್ ಅವರ ನಿಧನವನ್ನು ಕೇಳಿ ದುಃಖವಾಯಿತು. ಅವರ ಕುಟುಂಬಕ್ಕೆ ಹೃತ್ಪೂರ್ವಕ ಸಂತಾಪ ಎಂದು ಅನಿಲ್ ಕುಂಬ್ಳೆ ಎಕ್ಸ್ನಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಹಂಚಿಕೊಂಡಿದ್ದಾರೆ.
Saddened to hear the passing of my cricketing colleague David Johnson. Heartfelt condolences to his family. Gone too soon “ Benny”!
— Anil Kumble (@anilkumble1074) June 20, 2024
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, "ಮಾಜಿ ಭಾರತೀಯ ವೇಗದ ಬೌಲರ್ ಡೇವಿಡ್ ಜಾನ್ಸನ್ ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಕ್ರಿಕೆಟ್ಗೆ ಅವರ ಕೊಡುಗೆ ಸದಾ ಸ್ಮರಣೀಯ" ಎಂದು ಹೇಳಿದ್ದಾರೆ.
Deepest condolences to family and friends of our former Indian fast bowler David Johnson. His contributions to the game will always be remembered 🙏
— Jay Shah (@JayShah) June 20, 2024
ಡೇವಿಡ್ ಜಾನ್ಸನ್ ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬ ಮತ್ತು ಆತ್ಮೀಯರಿಗೆ ದೇವರು ಶಕ್ತಿ ನೀಡಲಿ ಎಂದು ಗೌತಮ್ ಗಂಭೀರ್ ಸಂತಾಪ ವ್ಯಕ್ತಪಡಿಸಿದ್ದಾರೆ.
Saddened by the passing away of David Johnson. May god give strength to his family and loved ones.
— Gautam Gambhir (@GautamGambhir) June 20, 2024
ಮಾಜಿ ಸಚಿವ ಅಶ್ವತ್ಥ ನಾರಾಯಣ ಕೂಡ ಮಾಜಿ ಕ್ರಿಕೆಟಿಗನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, "ಭಾರತದ ಮಾಜಿ ಕ್ರಿಕೆಟರ್, ಕನ್ನಡಿಗ ಡೇವಿಡ್ ಜಾನ್ಸನ್ ಅವರು ಆತ್ಮಹತ್ಯೆಗೆ ಶರಣಾದ ಸಂಗತಿ ತಿಳಿದು ಮನಸ್ಸಿಗೆ ನೋವಾಯಿತು.
ಭಾರತದ ಮಾಜಿ ಕ್ರಿಕೆಟರ್, ಕನ್ನಡಿಗ ಡೇವಿಡ್ ಜಾನ್ಸನ್ ಅವರು ಆತ್ಮಹತ್ಯೆಗೆ ಶರಣಾದ ಸಂಗತಿ ತಿಳಿದು ಮನಸ್ಸಿಗೆ ನೋವಾಯಿತು.
— Dr. C.N. Ashwath Narayan (@drashwathcn) June 20, 2024
ಅಂದಿನ ಸಮಯದಲ್ಲಿಯೇ ಗಂಟೆಗೆ ಸುಮಾರು 157.8 ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದ ಅವರು ಹಾಸನ ಜಿಲ್ಲೆಯ ಅರಸಿಕೆರೆಯವರು. ಮೃತರ ಆತ್ಮಕ್ಕೆ ಸದ್ಗತಿ ಕೋರಿ ಪ್ರಾರ್ಥಿಸುವೆ. ಓಂ ಶಾಂತಿ.#DavidJohnson pic.twitter.com/MQNKRk7F8Y
ಅಂದಿನ ಸಮಯದಲ್ಲಿಯೇ ಗಂಟೆಗೆ ಸುಮಾರು 157.8 ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದ ಅವರು ಹಾಸನ ಜಿಲ್ಲೆಯ ಅರಸಿಕೆರೆಯವರು. ಮೃತರ ಆತ್ಮಕ್ಕೆ ಸದ್ಗತಿ ಕೋರಿ ಪ್ರಾರ್ಥಿಸುವೆ. ಓಂ ಶಾಂತಿ." ಎಂದು ದುಃಖ ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG: ಮನೆಯಲ್ಲೇ ಕುಳಿತು ಎಲ್ಪಿಜಿ ಇ-ಕೆವೈಸಿ ಮಾಡುವುದು ಹೇಗೆ? ಇಲ್ಲಿವೆ ಸರಳ ವಿಧಾನಗಳು -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications