UAE vs NZ T20: ನ್ಯೂಜಿಲೆಂಡ್ ತಂಡವನ್ನೇ ಬಗ್ಗು ಬಡಿದ ಯುಎಇ : ಕಿವೀಸ್ ವಿರುದ್ಧ ಐತಿಹಾಸಿಕ ಗೆಲುವು
ಕ್ರಿಕೆಟ್ ಶಿಶು ಯುಎಇ ತಂಡ ಬಲಿಷ್ಠ ನ್ಯೂಜಿಲೆಂಡ್ ತಂಡಕ್ಕೆ ಶಾಕ್ ನೀಡಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಇದು ಯುಎಇ ತಂಡಕ್ಕೆ ನ್ಯೂಜಿಲೆಂಡ್ ವಿರುದ್ಧದ ಮೊದಲ ಗೆಲುವಾಗಿದೆ.
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುಎಇ ಹೊಸ ಇತಿಹಾಸ ಬರೆಯಿತು. ಸರಣಿ ಮೊದಲನೇ ಪಂದ್ಯದಲ್ಲಿ ಗೆಲ್ಲುವ ಅವಕಾಶ ಹೊಂದಿದ್ದ, ಯುಎಇ ಕೊನೆ ಕ್ಷಣದಲ್ಲಿ ಸೋಲನುಭವಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆ ತಪ್ಪನ್ನು ತಿದ್ದಿಕೊಂಡು ಯಶಸ್ವಿಯಾಗಿ ಗೆಲುವಿನ ದಡ ಸೇರಿತು. ನ್ಯೂಜಿಲೆಂಡ್ಗೆ ಟೆಸ್ಟ್ ಆಡದ ತಂಡದ ವಿರುದ್ಧದ ಮೊದಲ ಸೋಲು ಇದಾಗಿದೆ.

ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಯುಎಇಯ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿತು. ರನ್ ಗಳಿಸಲು ಪರದಾಡಿದ ಕಿವೀಸ್ ಪಡೆ, ಮಾರ್ಕ್ ಚಾಪ್ಮನ್ ಅವರ ಅರ್ಧಶತಕದ ನೆರವಿನಿಂದ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 142 ರನ್ ಗಳಿಸಿತು.
38 ರನ್ ಗಳಾಗುವಷ್ಟರಲ್ಲೇ 4 ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲೆಂಡ್ಗೆ ಮಾರ್ಕ್ ಚಾಪ್ಮನ್ ಆಸರೆಯಾದರು. ಜಿಮ್ಮಿ ನೀಶಮ್ 21 ರನ್ ಗಳಿಸಿ ಚಾಪ್ಮನ್ಗೆ ಸಾಥ್ ನೀಡಿದರು. ಜವಾದುಲ್ಲಾ 2 ವಿಕೆಟ್ ಪಡೆದರೆ, ಆಯನ್ ಖಾನ್ 3 ವಿಕೆಟ್ ಪಡೆದು ನ್ಯೂಜಿಲೆಂಡ್ಗೆ ಆಘಾತ ನೀಡಿದರು.
ಮುಹಮ್ಮದ್ ವಸೀಂ ನಾಯಕನ ಆಟ
ಈ ಮೊತ್ತವನ್ನು ಬೆನ್ನತ್ತಿದ ಯುಎಇ ಮೊದಲ ಓವರ್ ನಲ್ಲೇ ಆರ್ಯನ್ ಶರ್ಮಾ ಅವರ ವಿಕೆಟ್ ಕಳೆದುಕೊಂಡಿತು. ಕಳೆದ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದ ಆರ್ಯನ್ ಶರ್ಮಾ ಶೂನ್ಯಕ್ಕೆ ಔಟಾದರು.
ನಂತರ ನಾಯಕ ಮುಹಮ್ಮದ್ ವಸೀಂ ಮತ್ತು ವೃತ್ಯ ಅರವಿಂದ್ ತಂಡಕ್ಕೆ ಆಸರೆಯಾದರು. ಅರವಿಂದ್ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದರೆ ವಸೀಂ ಸಿಕ್ಸರ್, ಬೌಂಡರಿಗಳ ಮೂಲಕ ರನ್ ಗಳಿಸಿದರು. 6 ಓವರ್ ಗಳಲ್ಲಿ ಈ ಜೋಡಿ 2ನೇ ವಿಕೆಟ್ಗೆ 40 ರನ್ ಕಲೆ ಹಾಕಿತು.
ಅರವಿಂದ್ 25 ರನ್ ಗಳಿಸಿ ಔಟಾದರು. ನಂತರ ಬಂದ ಆಸಿಫ್ ಖಾನ್ ಮತ್ತು ವಸೀಂ ಮೂರನೇ ವಿಕೆಟ್ಗೆ 56 ರನ್ ಕಲೆಹಾಕಿದರು. ಮುಹಮ್ಮದ್ ವಸೀಮ್ 29 ಎಸೆತಗಳಲ್ಲಿ 4 ಬೌಂಡರಿ ಮೂರು ಸಿಕ್ಸರ್ ನೆರವಿನಿಂದ 55 ರನ್ ಗಳಿಸಿದರೆ, ಆಸಿಫ್ ಖಾನ್ 29 ಎಸೆತಗಳಲ್ಲಿ 5 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 48 ರನ್ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications