WPL RCB vs UPW: ಆರ್ಸಿಬಿ ವಿರುದ್ಧ ಯುಪಿ ವಾರಿಯರ್ಸ್ಗೆ ರೋಚಕ ಗೆಲುವು
ಮಹಿಳಾ ಸೂಪರ್ ಲೀಗ್ ಇತಿಹಾಸದಲ್ಲೇ ಮೊದಲ ಸೂಪರ್ ಓವರ್ ಗೆ ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಿದೆ. ಸೋಮವಾರ ನಡೆದ ರಣರೋಚಕ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಯುಪಿ ವಾರಿಯರ್ಸ್ ಗೆದ್ದು ಬೀಗಿದೆ. ಸೂಪರ್ ಓವರ್ ನಲ್ಲಿ ಸೋಫಿ ಎಕಲ್ಸ್ಟನ್ ಬಿಗಿ ಬೌಲಿಂಗ್ ಮಾಡುವ ಮೂಲಕ ಯುಪಿ ವಾರಿಯರ್ಸ್ ಗೆಲುವನ್ನು ಸುಲಭವಾಗಿಸಿದರು.
ಟಾಸ್ ಗೆದ್ದ ಯುಪಿ ವಾರಿಯರ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 180 ರನ್ ಕಲೆಹಾಕಿತು. ಎಲ್ಲಿಸ್ ಪೆರ್ರಿ 56 ಎಸೆತಗಳಲ್ಲಿ 9 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 90 ರನ್ ಗಳಿಸಿದರು. ಡೇನಿಯಲ್ ವ್ಯಾಟ್ ಹಾಡ್ಜ್ 41 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ಸಹಿತ 57 ರನ್ ಗಳಿಸಿದರು. ಇವರಿಬ್ಬರನ್ನು ಹೊರತುಪಡಿಸಿದರೆ ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ರನ್ ಗಳಿಸಲಿಲ್ಲ.

ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಯುಪಿ ವಾರಿಯರ್ಸ್ ಸ್ಫೋಟಕ ಆರಂಭ ಪಡೆಯಿತು. ಕಿರಣ್ ನ್ಯಾವಿಗೆರೆ 12 ಎಸೆತಗಳಲ್ಲೇ 4 ಬೌಂಡರಿ 1 ಸಿಕ್ಸರ್ ಸಹಿತ 24 ರನ್ ಗಳಿಸಿದರು. ನಾಯಕಿ ದೀಪ್ತಿ ಶರ್ಮಾ 13 ಎಸೆತಗಲ್ಲಿ 25 ರನ್ ಗಳಿಸಿದರು. ಶ್ವೇತಾ ಶೆರವಾತ್ 31 ರನ್ ಗಳಿಸಿದರೆ, ಉಮಾ ಚೆಟ್ರಿ 14 ರನ್ ಗಳಿಸಿದರು.
ಸೋಲಿನ ಸುಳಿಯಲ್ಲಿದ್ದ ಯುಪಿ ವಾರಿಯರ್ಸ್ಗೆ ಸೋಫಿ ಎಕಲ್ಸ್ಟನ್ ಆಸರೆಯಾದರು. 19 ಎಸೆತಗಳಲ್ಲಿ 1 ಬೌಂಡರಿ 4 ಸಿಕ್ಸರ್ ಸಹಿತ 33 ರನ್ ಗಳಿಸಿದರು. ಕೊನೆಯ ಎಸೆತದಲ್ಲಿ ಯುಪಿ ವಾರಿಯರ್ಸ್ಗೆ 1 ರನ್ ಬೇಕಿದ್ದಾಗ ರನೌಟ್ ಆಗುವ ಮೂಲಕ ಪಂದ್ಯ ಟೈನಲ್ಲಿ ಅಂತ್ಯವಾಯಿತು.
ಸೋಫಿ ಎಕಲ್ಸ್ಟನ್ ಹೋರಾಟ
ಬಳಿಕ ನಡೆದ ಸೂಪರ್ ಓವರ್ ನಲ್ಲಿ ಆರ್ ಸಿಬಿ ವೇಗಿ ಕಿಮ್ ಗಾರ್ತ್ ಕೇವಲ 8 ರನ್ ಬಿಟ್ಟುಕೊಟ್ಟರು. ಆರ್ ಸಿಬಿ ಗೆಲುವಿಗೆ 9 ರನ್ ಬೇಕಿತ್ತು, ಫಾರ್ಮ್ನಲ್ಲಿದ್ದ ಎಲ್ಲಿಸ್ ಪೆರ್ರಿ ಅವರನ್ನು ಬಿಟ್ಟು ಸ್ಮೃತಿ ಮಂಧಾನ ಮತ್ತು ರಿಷಾ ಘೋಷ್ ಸೂಪರ್ ಓವರ್ ಆಡಲು ಬಂದರು. ಸೋಫಿ ಎಕಲ್ಸ್ಟನ್ ಇಬ್ಬರನ್ನು ತಮ್ಮ ಸ್ಪಿನ್ ದಾಳಿಯಿಂದ ಕಾಡಿದರು. ಇಬ್ಬರೂ ಬೌಂಡರಿ ಗಳಿಸಲು ಮಾಡಿದ ಪ್ರಯತ್ನಗಳು ವಿಫಲವಾದವು. ಅಂತಿಮವಾಗಿ 4 ರನ್ ಮಾತ್ರ ಗಳಿಸಿದ ಆರ್ ಸಿಬಿ ಸೋಲೋಪ್ಪಿಕೊಂಡಿದೆ.
-
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications