WPL RCB vs UPW: ಆರ್ಸಿಬಿ ವಿರುದ್ಧ ಯುಪಿ ವಾರಿಯರ್ಸ್ಗೆ ರೋಚಕ ಗೆಲುವು
ಮಹಿಳಾ ಸೂಪರ್ ಲೀಗ್ ಇತಿಹಾಸದಲ್ಲೇ ಮೊದಲ ಸೂಪರ್ ಓವರ್ ಗೆ ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಿದೆ. ಸೋಮವಾರ ನಡೆದ ರಣರೋಚಕ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಯುಪಿ ವಾರಿಯರ್ಸ್ ಗೆದ್ದು ಬೀಗಿದೆ. ಸೂಪರ್ ಓವರ್ ನಲ್ಲಿ ಸೋಫಿ ಎಕಲ್ಸ್ಟನ್ ಬಿಗಿ ಬೌಲಿಂಗ್ ಮಾಡುವ ಮೂಲಕ ಯುಪಿ ವಾರಿಯರ್ಸ್ ಗೆಲುವನ್ನು ಸುಲಭವಾಗಿಸಿದರು.
ಟಾಸ್ ಗೆದ್ದ ಯುಪಿ ವಾರಿಯರ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 180 ರನ್ ಕಲೆಹಾಕಿತು. ಎಲ್ಲಿಸ್ ಪೆರ್ರಿ 56 ಎಸೆತಗಳಲ್ಲಿ 9 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 90 ರನ್ ಗಳಿಸಿದರು. ಡೇನಿಯಲ್ ವ್ಯಾಟ್ ಹಾಡ್ಜ್ 41 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ಸಹಿತ 57 ರನ್ ಗಳಿಸಿದರು. ಇವರಿಬ್ಬರನ್ನು ಹೊರತುಪಡಿಸಿದರೆ ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ರನ್ ಗಳಿಸಲಿಲ್ಲ.

ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಯುಪಿ ವಾರಿಯರ್ಸ್ ಸ್ಫೋಟಕ ಆರಂಭ ಪಡೆಯಿತು. ಕಿರಣ್ ನ್ಯಾವಿಗೆರೆ 12 ಎಸೆತಗಳಲ್ಲೇ 4 ಬೌಂಡರಿ 1 ಸಿಕ್ಸರ್ ಸಹಿತ 24 ರನ್ ಗಳಿಸಿದರು. ನಾಯಕಿ ದೀಪ್ತಿ ಶರ್ಮಾ 13 ಎಸೆತಗಲ್ಲಿ 25 ರನ್ ಗಳಿಸಿದರು. ಶ್ವೇತಾ ಶೆರವಾತ್ 31 ರನ್ ಗಳಿಸಿದರೆ, ಉಮಾ ಚೆಟ್ರಿ 14 ರನ್ ಗಳಿಸಿದರು.
ಸೋಲಿನ ಸುಳಿಯಲ್ಲಿದ್ದ ಯುಪಿ ವಾರಿಯರ್ಸ್ಗೆ ಸೋಫಿ ಎಕಲ್ಸ್ಟನ್ ಆಸರೆಯಾದರು. 19 ಎಸೆತಗಳಲ್ಲಿ 1 ಬೌಂಡರಿ 4 ಸಿಕ್ಸರ್ ಸಹಿತ 33 ರನ್ ಗಳಿಸಿದರು. ಕೊನೆಯ ಎಸೆತದಲ್ಲಿ ಯುಪಿ ವಾರಿಯರ್ಸ್ಗೆ 1 ರನ್ ಬೇಕಿದ್ದಾಗ ರನೌಟ್ ಆಗುವ ಮೂಲಕ ಪಂದ್ಯ ಟೈನಲ್ಲಿ ಅಂತ್ಯವಾಯಿತು.
ಸೋಫಿ ಎಕಲ್ಸ್ಟನ್ ಹೋರಾಟ
ಬಳಿಕ ನಡೆದ ಸೂಪರ್ ಓವರ್ ನಲ್ಲಿ ಆರ್ ಸಿಬಿ ವೇಗಿ ಕಿಮ್ ಗಾರ್ತ್ ಕೇವಲ 8 ರನ್ ಬಿಟ್ಟುಕೊಟ್ಟರು. ಆರ್ ಸಿಬಿ ಗೆಲುವಿಗೆ 9 ರನ್ ಬೇಕಿತ್ತು, ಫಾರ್ಮ್ನಲ್ಲಿದ್ದ ಎಲ್ಲಿಸ್ ಪೆರ್ರಿ ಅವರನ್ನು ಬಿಟ್ಟು ಸ್ಮೃತಿ ಮಂಧಾನ ಮತ್ತು ರಿಷಾ ಘೋಷ್ ಸೂಪರ್ ಓವರ್ ಆಡಲು ಬಂದರು. ಸೋಫಿ ಎಕಲ್ಸ್ಟನ್ ಇಬ್ಬರನ್ನು ತಮ್ಮ ಸ್ಪಿನ್ ದಾಳಿಯಿಂದ ಕಾಡಿದರು. ಇಬ್ಬರೂ ಬೌಂಡರಿ ಗಳಿಸಲು ಮಾಡಿದ ಪ್ರಯತ್ನಗಳು ವಿಫಲವಾದವು. ಅಂತಿಮವಾಗಿ 4 ರನ್ ಮಾತ್ರ ಗಳಿಸಿದ ಆರ್ ಸಿಬಿ ಸೋಲೋಪ್ಪಿಕೊಂಡಿದೆ.
-
ಬೆಂಗಳೂರಲ್ಲಿ RCB ಪಂದ್ಯ: ಏ.15ರಂದು ಸ್ಟೇಡಿಯಂ ಸುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ -
RCB Vs LSG: ಬೆಂಗಳೂರಿನಲ್ಲಿ ಆರ್ಸಿಬಿ-ಎಲ್ಎಸ್ಜಿ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB Playing 11 Prediction: ಎಲ್ಎಸ್ಜಿ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 ಭವಿಷ್ಯ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications