Vaibhav Suryavanshi: ಸಂಜು ಟೀಂ ವಿರುದ್ಧವೇ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ
Vaibhav Suryavanshi: ಗುವಾಹಟಿಯಲ್ಲಿ ಸೋಮವಾರ ನಡೆದ ಐಪಿಎಲ್ 2026ರ 3ನೇ ಪಂದ್ಯದಲ್ಲಿ ರಾಜಸಸ್ಥಾನ್ ರಾಯಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್ಆರ್ ತಂಡ ಸಿಎಸ್ಕೆ ನೀಡಿದ್ದ 128 ರನ್ಗಳ ಗುರಿಯನ್ನು ಕೇವಲ 12.1 ಓವರ್ಗಳಲ್ಲಿ ತಲುಪಿತು.
ವೈಭವ್ ಸೂರ್ಯವಂಶಿ ಕೇವಲ 17 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್ಗಳೊಂದಿಗೆ 52 ರನ್ ಸಿಡಿಸಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಅದ್ಭುತ ಆರಂಭ ನೀಡಿದರು. ಇವರು ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ದಾಖಲೆ ಬರೆದರು. ಆರಂಭಿಕ ಆಟಗಾರ ಜೈಸ್ವಾಲ್ 36 ಎಸೆತಗಳಲ್ಲಿ ಅಜೇಯ 38* ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಸಿಎಸ್ಕೆ ಬ್ಯಾಟಿಂಗ್ ವೈಫಲ್ಯ
ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ಬೌಲರ್ಗಳ ಮಾರಕ ದಾಳಿಯಿಂದ 19.4 ಓವರ್ಗಳಲ್ಲಿ 127 ರನ್ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. ರಾಜಸ್ಥಾನ್ ಪರ ನಾಂದ್ರೆ ಬರ್ಗರ್ 2 ವಿಕೆಟ್ (ಸಂಜು ಸ್ಯಾಮ್ಸನ್ ಸೇರಿದಂತೆ) ಪಡೆದರೆ, ಜೋಫ್ರಾ ಆರ್ಚರ್ ನಾಯಕ ರುತುರಾಜ್ ಗಾಯಕವಾಡ್ ಅವರ ವಿಕೆಟ್ ಪಡೆದರು. ಬ್ರಿಜೇಶ್ ಶರ್ಮಾ ತಮ್ಮ ಚೊಚ್ಚಲ ವಿಕೆಟ್ ಪಡೆದು ಗಮನ ಸೆಳೆದರು.
ಆರ್ಆರ್ ಬೌಲಿಂಗ್ ದಾಳಿಗೆ ಸಿಎಸ್ಕೆ ತತ್ತರ
ರಾಜಸ್ಥಾನ್ ರಾಯಲ್ಸ್ ಪರ ರಿಯಾನ್ ಪರಾಗ್ ಮೊದಲ ಬಾರಿಗೆ ನಾಯಕನಾಗಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡರು. ಇದೇ ಇವರಿಗೆ ಪ್ಲಸ್ ಪಾಂಯಿಂಟ್ ಆಯಿತೆಂದರೆ ತಪ್ಪಾಗಲಾರದು. ಆರ್ಆರ್ ತಂಡದ ಬೌಲರ್ಗಳು ಮಾರಕ ಬೌಲಿಂಗ್ ದಾಳಿ ಮಾಡುವ ಮೂಲಕ ಸಿಎಸ್ಕೆ ಬ್ಯಾಟರ್ಗಳನ್ನು ಕಟ್ಟಿಹಾಕುವುದಲ್ಲದೆ, ಕೊನೆಗೆ 20 ಓವರ್ವೊಳಗೆ ಆಲ್ಔಟ್ ಮಾಡಿ ಗಮನ ಸೆಳೆದರು.
ಮಿಂಚಿದ ಆರ್ಆರ್ ಬೌಲರ್ಗಳು
ಆರ್ಆರ್ ಪರ ವೇಗಿಗಳಾದ ನಾಂದ್ರೆ ಬರ್ಗರ್ ಮತ್ತು ಜೋಫ್ರಾ ಆರ್ಚರ್ ಪವರ್ಪ್ಲೇನಲ್ಲೇ ಸಿಎಸ್ಕೆ ತಂಡಕ್ಕೆ ಆಘಾತ ನೀಡಿದರು. ಸ್ಪಿನ್ ವಿಭಾಗದಲ್ಲಿ ರವೀಂದ್ರ ಜಡೇಜಾ ಅವರು ತಮ್ಮ ಹಳೆಯ ತಂಡವಾದ ಸಿಎಸ್ಕೆ ವಿರುದ್ಧ ಒಂದೇ ಓವರ್ನಲ್ಲಿ ಎರಡು ವಿಕೆಟ್ ಪಡೆಯುವ ಮೂಲಕ ಗಮನ ಸೆಳೆದರು.
ನಾಂದ್ರೆ ಬರ್ಗರ್, ಜೋಫ್ರಾ ಆರ್ಚರ್, ರವೀಂದ್ರ ಜಡೇಜಾ ಅವರು ತಲಾ ಎರಡು ವಿಕೆಟ್ ಪಡೆದರೆ, ಬ್ರಿಜೇಶ್ ಶರ್ಮಾ, ಸಂದೀಪ್ ಶರ್ಮಾ, ರವಿ ಬಿಷ್ಣೋಯಿ ತಲಾ ಒಂದು ವಿಕೆಟ್ ಪಡೆದು ಸಿಎಸ್ಕೆ ಬ್ಯಾಟರ್ಗಳಿಗೆ ಕಡಿವಾಣ ಹಾಕಿದರು. ಒಟ್ಟಿನಲ್ಲಿ ಹೇಳುವುದಾದರೆ ಈ ಪಂದ್ಯದಲ್ಲಿ ರಾಜಸ್ಥಾನ್ ತಂಡದ ಬೌಲಿಂಗ್, ಬ್ಯಾಟಿಂಗ್ ಎರಡೂ ವಿಭಾಗದಲ್ಲೂ ಉತ್ತಮ ಪ್ರದರ್ಶನ ಕಂಡುಬಂದಿತು. ಅದರಲ್ಲೂ, 128 ರನ್ಗಳ ಸಾಧಾರಣ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡಕ್ಕೆ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಸ್ಫೋಟಕ ಆರಂಭ ನೀಡಿದರು. ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಅವರು ತಂಡದ ಸುಲಭ ಜಯಕ್ಕೆ ಅಡಿಪಾಯ ಹಾಕಿದರು.
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11: ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮಿಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ.
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಮ್ಯಾಥ್ಯೂ ಶಾರ್ಟ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಜೇಮೀ ಓವರ್ಟನ್, ನೂರ್ ಅಹ್ಮದ್, ಮ್ಯಾಟ್ ಹೆನ್ರಿ, ಅಂಶುಲ್ ಕಾಂಬೋಜ್, ಖಲೀಲ್ ಅಹ್ಮದ್.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
ಸಿಎಸ್ಕೆ ಕಪ್ 5 ರೂಪಾಯಿ, ಆರ್ಸಿಬಿ ಟ್ರೋಫಿ ಬೆಲೆ 5 ಕೋಟಿ ರೂಪಾಯಿ: ಪುಟ್ಟ ಬಾಲಕನ ಹೇಳಿಕೆ ಭಾರೀ ವೈರಲ್ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ಲೈವ್ ಕಾಮೆಂಟರಿಯಲ್ಲೇ ವೀರೇಂದರ್ ಸೆಹ್ವಾಗ್-ಆರ್.ಅಶ್ವಿನ್ ಕಿತ್ತಾಟ; ಹಿರಿಯ ಆಟಗಾರರ ವರ್ತನೆಗೆ ಕ್ರೀಡಾಭಿಮಾನಿಗಳ ಆಕ್ರೋಶ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
MI Vs KKR: 14 ವರ್ಷಗಳ ಬಳಿಕ ಹೊಸ ಇತಿಹಾಸ ಬರೆದ ಮುಂಬೈ ಇಂಡಿಯನ್ಸ್; ಕೆಕೆಆರ್ ವಿರುದ್ಧ ಭರ್ಜರಿ ಜಯ -
ಚಿನ್ನಸ್ವಾಮಿಯಲ್ಲಿ ಕನ್ನಡಿಗ ದೇವ್, ವಿರಾಟ್ ಅಬ್ಬರದ ಬ್ಯಾಟಿಂಗ್: ಆರ್ಸಿಬಿ ವಿರುದ್ಧ ಎಸ್ಆರ್ಎಚ್ ಹೀನಾಯು ಸೋಲು -
IPL 2026 RCB Vs SRH: ಎಸ್ಆರ್ಎಚ್ನಿಂದ 13,00,00,000 ರೂಪಾಯಿ ಮೌಲ್ಯದ ಸ್ಟಾರ್ ಆಟಗಾರ ಔಟ್ -
RCB Vs SHR: ಚಿನ್ನಸ್ವಾಮಿಯಲ್ಲಿ ಎಸ್ಆರ್ಎಚ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್











Click it and Unblock the Notifications