14 ವರ್ಷದ ವೈಭವ್ ಸೂರ್ಯವಂಶಿಯನ್ನು ಕೊಂಡಾಡಿದ ರಾಹುಲ್ ದ್ರಾವಿಡ್ ಆದರೆ..
ಗುಜರಾತ್ ಟೈಟನ್ಸ್ ವಿರುದ್ಧ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಕ್ರಿಕೆಟ್ ಲೋಕದಲ್ಲಿ ಇತಿಹಾಸ ನಿರ್ಮಿಸಿದ್ದಾರೆ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ. ಅತ್ಯಂತ ಕಿರಿಯ ವಯಸ್ಸಿನಲ್ಲೇ ಈ ಹುಡುಗ ಕ್ರಿಕೆಟ್ ಪಂದ್ಯದಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾನೆ. ತನ್ನ ಅದ್ಭುತ ಆಟಗಾರಿಕೆ ಮೂಲಕ ಭಾರತೀಯ ಕ್ರಿಕೆಟ್ ಪ್ರಿಯರ ಗಮನ ಸೆಳೆದಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ವೈಭವ್ ಸೂರ್ಯವಂಶಿ ಆಟಗಾರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು ಇದೀಗ ರಾಹುಲ್ ದ್ರಾವಿಡ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಅತ್ಯಂತ ಕಿರಿಯ ವಯಸ್ಸಿನಲ್ಲಿ ಶತಕ ಬಾರಿಸಿ ಕ್ರಿಕೆಟ್ ಘಟಾನುಘಟಿಗಳನ್ನು ಹಿಂದಿರುಗಿ ನೋಡುವಂತೆ ಮಾಡಿದ್ದಾರೆ ವೈಭವ್ ಸೂರ್ಯವಂಶಿ. ಅಂದಹಾಗೆ ವೈಭವ್ ಸೂರ್ಯವಂಶಿ ಇದೀಗ ಕೇವಲ 14 ವರ್ಷ ವಯಸ್ಸು. ಇಷ್ಟೊಂದು ಸಣ್ಣ ವಯಸ್ಸಿನಲ್ಲಿ ಇಂತಹ ಸಾಧನೆ ಮಾಡಲು ಹೇಗೆ ಸಾಧ್ಯ ಇವರಿಗೆ ವಯಸ್ಸು ಹೆಚ್ಚಾಗಿರಬಹುದು ಎಂದು ಸುದ್ದಿಗಳು ಹರಿದಾಡುತ್ತಿವೆ. ಇದೆಲ್ಲದರ ನಡುವೆ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವೈಭವ್ ಸೂರ್ಯವಂಶಿ ಬಗ್ಗೆ ಕೆಲವೊಂದಿಷ್ಟು ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ವೈಭವ್ ಬಗ್ಗೆ ಮಾತನಾಡಿದ ರಾಹುಲ್ ದ್ರಾವಿಡ್, 'ವೈಭವ್ ಸೂರ್ಯವಂಶಿ ಯುವ ಆಟಗಾರ. ಆತನಿಗೆ ಸಿಗುತ್ತಿರುವ ಪ್ರಶಂಸೆ ನಿಜಕ್ಕೂ ದೊಡ್ಡದು. ಈ ಹೊಗಳಿಕೆಯ ನಡುವೆ ಆತನನ್ನು ಹೇಗೆ ಬೆಳೆಸಬೇಕು ಎಂಬ ಬಗ್ಗೆ ಯೋಚಿಸುವುದು ಮುಖ್ಯ' ಎಂದು ಹೇಳಿದ್ದಾರೆ.
ವೈಭವ್ ಮೂರು ಐಪಿಎಲ್ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಆತನ ಅದ್ಭುತ ಆಟಗಾರಿಕೆಯನ್ನು ನಾವು ತಡೆಯಲು ಸಾಧ್ಯವಿಲ್ಲ. ಆದರೆ ನಮ್ಮ ಪ್ರಶಂಸೆ ಅವರ ಕಲಿಕೆಯನ್ನು ನಿಲ್ಲಿಸಬಾರದು. ಮುಂದುವರೆಯುವತ್ತಾ ನಾವು ಅವರನ್ನು ಕೊಂಡೊಯ್ಯಬೇಕು. ವೈಭವ್ ಸೂರ್ಯವಂಶಿ ಅದ್ಭುತ ಆಟಗಾರ. ಆದರೆ ಅವರು ಕಲಿಯುವುದು ತುಂಬಾ ಇದೆ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.
ಅಲ್ಲದೆ ದ್ರಾವಿಡ್ ವೈಭವ್ ಸೂರ್ಯವಂಶಿ ಬಗ್ಗೆ ವಿಶೇಷ ಗುಣಗಳನ್ನು ವರ್ಣಿಸಿದ್ದಾರೆ. 'ಆತನಿಗೆ ಭಯವಿಲ್ಲ. ಯಾವುದೇ ಸಂದರ್ಭಕ್ಕೂ ಆತ ಹೆದರದೆ ಮುನ್ನುಗ್ಗುತ್ತಾನೆ. ಅಷ್ಟು ಚಿಕ್ಕ ವಯಸ್ಸಿನಲ್ಲಿ ಇಂತಹ ಆಟ ನೋಡುವುದು ತುಂಬಾ ಅಪರೂಪ. ಆತ ಹೊಡೆಯುವ ಶಾಟ್ಗಳು ತುಂಬಾ ಅದ್ಭುತವಾಗಿವೆ ಎಂದು ದ್ರಾವಿಡ್ ವರ್ಣಿಸಿದ್ದಾರೆ.

ಜೊತೆಗೆ ವೈಭವ್ ಸೂರ್ಯವಂಶಿ ದೊಡ್ಡ ಆಟಗಾರನಲ್ಲ. ಆತ ಕಲಿಯುವುದು ತುಂಬಾ ಇದೆ. ಆತನನ್ನು ಯಾರೂ ದೊಡ್ಡ ಆಡಗಾರ ಎಂದು ಕರೆಯಬೇಡಿ. ವೈಭವ್ಗೆ ಸಿಕ್ಸ್ ಹೊಡೆಯುವ ಸಾಮರ್ಥ್ಯ ಇದೆ. ಆತನ ಬ್ಯಾಟ್ ವೇಗ, ಬಾಲ್ ಅನ್ನು ಗ್ರಹಿಸುವ ಸಾಮರ್ಥ್ಯ ನನಗೆ ಅಚ್ಚರಿ ತರಿಸಿದೆ. ಈ ಹೊಗಳಿಕೆಯಿಂದಾಗಿ ಮುಂದಿನ ಆಟಗಳಲ್ಲಿ ಆತ ಎದುರಾಳಿ ತಂಡಗಳನ್ನು ಎದುರಿಸಲು ವಿಫಲವಾಗುಬಹುದು ಎಂದು ದ್ರಾವಿಡ್ ಹೊಗಳಿದ್ದಾರೆ.
ಜೊತೆಗೆ ವೈಭವ್ ತಮ್ಮ ಅದ್ಭುತ ಆಟಗಾರಿಕೆಗೆ ದ್ರಾವಿಡ್ ಅವರೇ ಕಾರಣ ಎಂದು ಹೇಳಿದ್ದರು. ಆದರೆ ದ್ರಾವಿಡ್ ಅದನ್ನು ಅಲ್ಲಗಳಿದಿದ್ದಾರೆ. ವೈಭವ್ ಅವರ ಸಾಧನೆಗೆ ಅವರೇ ಕಾರಣ. ಅವರ ತಂದೆ ವೈಭವ್ ಅವರಿಗೆ ಬೆಂಬಲ ನೀಡಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡದ ಅನೇಕ ಜನರು ಆತನಿಗೆ ಸಹಾಯ ಮಾಡಿದ್ದಾರೆ ಎಂದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications