ಲಾರಾ ಸ್ಟೈಲ್, ಸಚಿನ್ ಟೈಮಿಂಗ್, ದ್ರಾವಿಡ್ ಶಿಸ್ತು: ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದ ವೈಭವ್ ಸೂರ್ಯವಂಶಿ
Vaibhav Sooryavanshi: ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ವೈಭವ್ ಸೂರ್ಯವಂಶಿ, ಕೇವಲ ಒಬ್ಬ ಆಟಗಾರನಾಗಿ ಕಾಣಿಸುತ್ತಿಲ್ಲ. ಬದಲಿಗೆ ಕ್ರಿಕೆಟ್ ಲೋಕದ ಭವಿಷ್ಯದ ಸೂಪರ್ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಾರೆ. ಇವರ ಆಟದ ಶೈಲಿಯನ್ನು ನೋಡುತ್ತಿರುವ ದಿಗ್ಗಜರು, ಇವರಲ್ಲಿ ಅಂದು ಬ್ರಿಯಾನ್ ಲಾರಾ ಮತ್ತು ಸಚಿನ್ ತೆಂಡೂಲ್ಕರ್ ಅವರಲ್ಲಿದ್ದ ಕಿಚ್ಚನ್ನು ಕಾಣುತ್ತಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ವೈಭವ್ ಅವರ ಬ್ಯಾಕ್ ಲಿಫ್ಟ್ ಮತ್ತು ಚೆಂಡನ್ನು ಹೊಡೆಯುವ ವಿಧಾನವು ವೆಸ್ಟ್ ಇಂಡೀಸ್ ದಿಗ್ಗಜ ಬ್ರಿಯಾನ್ ಲಾರಾ ಅವರನ್ನು ನೆನಪಿಸುತ್ತದೆ ಎಂದು ಹಲವರು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೆ, ಎಡಗೈ ಬ್ಯಾಟರ್ ಆಗಿರುವ ಇವರಲ್ಲಿರುವ ಲಯ ಅದ್ಭುತವಾಗಿದೆ ಅಂತಲೂ ಹೇಳುತ್ತಿದ್ದಾರೆ.

ವೈಭವ್ ಸೂರ್ಯವಂಶಿ 15ನೇ ವಯಸ್ಸಿಗೆ ಇಂತಹ ದೊಡ್ಡ ವೇದಿಕೆಯಲ್ಲಿ ಅಬ್ಬರಿಸುತ್ತಿರುವುದು ಸಚಿನ್ ತೆಂಡೂಲ್ಕರ್ ಅವರ ಆರಂಭಿಕ ದಿನಗಳನ್ನು ನೆನಪಿಸುತ್ತಿದೆ. ಇವರ ಶಿಸ್ತು ಮತ್ತು ಏಕಾಗ್ರತೆಯನ್ನು ಕಂಡವರು ಇವರಲ್ಲಿ ರಾಹುಲ್ ದ್ರಾವಿಡ್ ಅವರಂತಹ ತಾಳ್ಮೆಯೂ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ವೈಭವ್ ಯಶಸ್ಸಿನ ಹಿಂದಿದೆ ಕಠಿಣ ಪರಿಶ್ರಮದ ಕಥೆ
ಬಿಹಾರದ ಸಮಸ್ತಿಪುರ ಜಿಲ್ಲೆಯ ಪುಟ್ಟ ಹಳ್ಳಿಯಿಂದ ಬಂದ ವೈಭವರ್, ತಂದೆಯ ಮಾರ್ಗದರ್ಶನದಲ್ಲಿ ಕ್ರಿಕೆಟ್ ಅಭ್ಯಾಸ ಆರಂಭಿಸಿದರು. 12ನೇ ವಯಸ್ಸಿನಲ್ಲಿಯೇ ಬಿಹಾರದ ಪರ ರಣಜಿ ಟ್ರೋಫಿ ಆಡುವ ಮೂಲಕ ಅತಿ ಕಿರಿಯ ವಯಸ್ಸಿನ ಪ್ರಥಮ ದರ್ಜೆ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಜಸ್ಪ್ರೀತ್ ಬುಮ್ರಾ ಅವರಂತಹ ವಿಶ್ವದ ಅತ್ಯುತ್ತಮ ಬೌಲರ್ಗಳನ್ನು ಎದುರಿಸುವಾಗ ಇವರಲ್ಲಿ ಯಾವುದೇ ಆತಂಕವಿರಲಿಲ್ಲ. ಆ ಭಯವಿಲ್ಲದ ಮನಸ್ಥಿತಿಯೇ ಇಂದು ಇವರನ್ನು ಸ್ಟಾರ್ ಮಾಡಿದೆ ಎನ್ನುತ್ತಿದ್ದಾರೆ ಬಹುತೇಕ ಮಂದಿ.
ಯುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಹೆಸರುವಾಸಿಯಾದ ರಾಜಸ್ಥಾನ್ ರಾಯಲ್ಸ್, ಹರಾಜಿನಲ್ಲಿ ವೈಭವ್ ಅವರನ್ನು ಖರೀದಿಸಿ ಎಲ್ಲರ ಹುಬ್ಬೇರಿಸಿತ್ತು. ಆದರೆ, ಹರಾಜಿನ ನಿರ್ಧಾರ ಸರಿಯಾಗಿತ್ತು ಎಂಬುದನ್ನು ವೈಭವ್ ತಮ್ಮ ಬ್ಯಾಟಿಂಗ್ ಮೂಲಕ ಸಾಬೀತುಪಡಿಸಿದ್ದಾರೆ. ಈಗ ಇಡೀ ಜಗತ್ತು ಇವರನ್ನು ಭವಿಷ್ಯದ ಸೂಪರ್ ಸ್ಟಾರ್ ಆಟಗಾರ ಎಂದು ಕರೆಯುತ್ತಿದೆ.
ಭುವನೇಶ್ವರ್ ಸ್ವಿಂಗ್ ದಾಳಿ ಎದುರಿಸಲು ಸಜ್ಜಾದ ವೈಭವ್
ಬ್ರಿಯಾನ್ ಲಾರಾ ಅವರ ಸ್ಟೈಲ್, ಸಚಿನ್ ಅವರ ಟೈಮಿಂಗ್ ಮತ್ತು ದ್ರಾವಿಡ್ ಅವರ ಶಿಸ್ತು ಈ ಮೂರು ವೈಭವ್ ಸೂರ್ಯವಂಶಿ ಅವರಲ್ಲಿದ್ದು, ಭಾರತೀಯ ಕ್ರಿಕೆಟ್ನ ಮುಂದಿನ ಉತ್ತಮ ಸ್ಟಾರ್ ಆಟಗಾರನಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಲೂ ಹೇಳುತ್ತಿದ್ದಾರೆ. ಇನ್ನೂ ಶುಕ್ರವಾರ ಆರ್ಸಿಬಿಯ ಭುವನೇಶ್ವರ್ ಕುಮಾರ್ ಅವರ ಸ್ವಿಂಗ್ ದಾಳಿಯನ್ನು ಇವರು ಹೇಗೆ ಎದುರಿಸುತ್ತಾರೆ ಎಂಬುದು ಇವರ ವೃತ್ತಿಜೀವನದ ಮತ್ತೊಂದು ಪ್ರಮುಖ ಮೈಲಿಗಲ್ಲಾಗಲಿದೆ.
-
ಸ್ಟೇಡಿಯಂ ಸಾಲುತ್ತಿಲ್ಲ, 1 ಲಕ್ಷ ಆಸನಗಳ ಸಾಮರ್ಥ್ಯದ ಮೈದಾನ ಬೇಕು: ಡಿಸಿಎಂಗೆ ಆರ್ಸಿಬಿ ಅಭಿಮಾನಿಗಳ ವಿಶೇಷ ಬೇಡಿಕೆ -
ಆರ್ಸಿಬಿ ಪಾಲಿಗೆ ವರದಾನವಾದ ಒಂದೇ ಒಂದು ನೋ-ಬಾಲ್ -
IPL Ticket: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬ್ಲಾಕ್ನಲ್ಲಿ ಐಪಿಎಲ್ ಟಿಕೆಟ್ ಮಾರಾಟ ದಂಧೆ: 11 ಮಂದಿ ಸಿಸಿಬಿ ವಶಕ್ಕೆ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು












Click it and Unblock the Notifications