Vaibhav Suryavanshi: ಸಾಗರದಾಚೆ ಯುವ ಆಟಗಾರನ ಬ್ಯಾಟಿಂಗ್ "ವೈಭವ": ಇಲ್ಲಿದೆ ದಾಖಲೆಗಳ ಪಟ್ಟಿ
ಟೀಮ್ ಇಂಡಿಯಾದ ಯುವ ಆಟಗಾರ ವೈಭವ್ ಸೂರ್ಯವಂಶಿ ಸಾಗರದಾಚೆ ತಮ್ಮ ಧಮಾಕೆದಾರ್ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ನಾರ್ಥಾಂಪ್ಟನ್ ಮೂರನೇ ಯುಥ್ ಏಕದಿನ ಪಂದ್ಯಕ್ಕೆ ಸಾಕ್ಷಯಾಯಿತು. ಈ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ, ತಮ್ಮ ಕ್ಲಾಸಿಕ್ ಬ್ಯಾಟಿಂಗ್ ಮುಂದುವರೆಸಿದರು. ಈ ಮೂಲಕ ಭಾರತದ ಭವಿಷ್ಯ ಉಜ್ವಲವಾಗಿದೆ ಎಂಬುದನ್ನು ಸಾರಿ ಹೇಳಿದರು.
ಮೊದಲು ಬ್ಯಾಟ್ ಮಾಡಿದ ಆತಿಥೇಯ ಇಂಗ್ಲೆಂಡ್ ತಂಡ 40 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 268 ರನ್ ಸೇರಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಯಂಗ್ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಹಾಗೂ ನಾಯಕ ಅಭಿಗ್ಯಾನ್ ಕುಂಡು (12) ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಆದರೆ ಎರಡನೇ ವಿಕೆಟ್ಗೆ ವೈಭವ್ ಸೂರ್ಯವಂಶಿ ಹಾಗೂ ವಿಹಾನ್ ಮಲೋತ್ರಾ ಜೋಡಿ ಎರಡನೇ ವಿಕೆಟ್ಗೆ 78 ರನ್ಗಳ ಜೊತೆಯಾಟವನ್ನು ನೀಡಿ ತಂಡಕ್ಕೆ ಆಧಾರವಾಯಿತು.

ಈಗಾಗಲೇ ಐಪಿಎಲ್ನಲ್ಲಿ ಅಬ್ಬರಿದ್ದ ವೈಭವ್ ಸೂರ್ಯವಂಶಿ ಇಂಗ್ಲೆಂಡ್ನಲ್ಲೂ ತಮ್ಮ ಅಮೋಘ ಬ್ಯಾಟಿಂಗ್ ಮುಂದುವರೆಸಿದರು. ಇವರು 277.41ರ ಸ್ಟ್ರೈಕ್ ರೇಟ್ನಲ್ಲಿ ರನ್ ಕಲೆ ಹಾಕಿದರು. ಇವರು 31 ಎಸೆತಗಳಲ್ಲಿ 6 ಬೌಂಡರಿ, 9 ಸಿಕ್ಸರ್ ಸಹಾಯದಿಂದ 86 ರನ್ ಸಿಡಿಸಿ ಅಬ್ಬರಿಸಿದರು. ಈ ಇನಿಂಗ್ಸ್ ಮೂಲಕ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ಬರೆದರು.
9 ಸಿಕ್ಸರ್
ಟೀಮ್ ಇಂಡಿಯಾದ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ಬರೆದರು. ವೈಭವ್ ಸೂರ್ಯವಂಶಿ ಯೂತ್ ಏಕದಿನ ಪಂದ್ಯದ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ಭಾರತದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು ಮಂದೀಪ್ ಸಿಂಗ್ ಹಾಗೂ ರಾಜ್ ಬಾವಾ ತಲಾ 8 ಶತಕ ಬಾರಿಸಿದ್ದರು. ರಾಜ್ ಬಾವಾ 2022ರಲ್ಲಿ ಉಗಾಂಡ ವಿರುದ್ಧ ಈ ಸಾಧನೆ ಮಾಡಿದ್ದರೆ, 2009ರಲ್ಲಿ ಮಂದೀಪ್ ಸಿಂಗ್ 8 ಶತಕ ಬಾರಿಸಿದ್ದರು.
2ನೇ ವೇಗದ ಅರ್ಧಶತಕ
ಟೀಮ್ ಇಂಡಿಯಾದ ಪರ ವೇಗವಾಗಿ ಅರ್ಧಶತಕ ಬಾರಿಸಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವೈಭವ್ ಸೂರ್ಯವಂಶಿ ಪಾತ್ರರಾದರು. ರಿಷಭ್ ಪಂತ್ 2016ರಲ್ಲಿ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದ್ದರು.
ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 34.3 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 274 ರನ್ ಬಾರಿಸಿ ಜಯ ಸಾಧಿಸಿತು. ಈ ಮೂಲಕ ಭಾರತ 5 ಪಂದ್ಯಗಳ ಯುತ್ ಏಕದಿನ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications