Breaking; ಮಲ್ಯ ಜೊತೆ Universe Boss, ಪೋಟೋ ವೈರಲ್
ಮುಂಬೈ, ಜೂನ್ 22; ಉದ್ಯಮಿ ವಿಜಯ್ ಮಲ್ಯ ಕ್ರಿಕೆಟಿಗ, ಯೂನಿವರ್ಸ್ ಬಾಸ್ ಎಂದು ಕರೆಸಿಕೊಳ್ಳುವ ಕ್ರಿಸ್ ಗೇಲ್ ಭೇಟಿ ಮಾಡಿದ್ದಾರೆ. ಇಬ್ಬರ ಭೇಟಿಯ ಚಿತ್ರಗಳು ಟ್ವಿಟರ್ನಲ್ಲಿ ವೈರಲ್ ಆಗುತ್ತಿದೆ.
ವಿಜಯ್ ಮಲ್ಯ ಕ್ರಿಕೆಟಿಗ ಕ್ರಿಸ್ ಗೇಲ್ ಭೇಟಿ ಮಾಡಿದ್ದು, ತಮ್ಮ ಅಧಿಕೃತ ಖಾತೆಯಿಂದ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. 'ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಫರ್ ಹೆನ್ರಿ ಗೇಲ್ ಅವರನ್ನು ಭೇಟಿಯಾದೆ' ಎಂದು ಬರೆದಿದ್ದಾರೆ.
'ಆರ್ಸಿಬಿ ತಂಡಕ್ಕೆ ನೇಮಿಸಿಕೊಂಡಾಗಿನಿಂದ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಜೊತೆ ನಾನು ಉತ್ತಮ ಸ್ನೇಹ ಹೊಂದಿದ್ದೇನೆ. ಅವರು ಎಂದಿಗೂ ಉತ್ತಮ ಆಟಗಾರ' ಎಂದು ವಿಜಯ್ ಮಲ್ಯ ಟ್ವೀಟ್ ಮಾಡಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಸೂಪರ್ ಕಿಂಗ್ಸ್ ತಂಡಗಳಲ್ಲಿ ಐಪಿಎಲ್ ಆಡಿದ್ದ ಕ್ರಿಸ್ ಗೇಲ್ ಸದ್ಯ ಐಪಿಎಲ್ ಪಂದ್ಯಗಳಿಂದ ದೂರ ಉಳಿದಿದ್ದಾರೆ. ಭಾರತದ ಅವರ ಅಭಿಮಾನಿಗಳು ಗೇಲ್ ಹೊಡಿಬಡಿ ಆಟ ಮಿಸ್ ಮಾಡಿಕೊಳ್ಳುತ್ತಿದ್ದಾರೆ.
2022ರ ಐಪಿಎಲ್ ಪಂದ್ಯಗಳಿಂದ ಕ್ರಿಸ್ ಗೇಲ್ ದೂರ ಉಳಿದಿದ್ದರು. ಕೋವಿಡ್ ಕಾರಣದಿಂದ ಬಯೋಬಬಲ್ ನಿಯಮಗಳನ್ನು ಆಟಗಾರರು ಪಾಲಿಸಬೇಕಿತ್ತು. ಆದರೆ ಈ ನಿಯಮಗಳನ್ನು ಒಪ್ಪದ ಗೇಲ್ ಐಪಿಎಲ್ ಟೂರ್ನಿಯಿಂದ ದೂರವಾಗಿದ್ದರು.
2020ರಲ್ಲಿ ಕೇವಲ 7 ಪಂದ್ಯಗಳನ್ನು ಅವರು ಮಾಡಿದ್ದರು. 2021ರ ಐಪಿಎಲ್ ಆವೃತ್ತಿಯಲ್ಲಿ ಗೇಲ್ ಪಂಜಾಬ್ ತಂಡದಲ್ಲಿದ್ದರು. ಆದರೆ ಅಭಿಮಾನಿಗಳನ್ನು ಸಂತಸಪಡಿಸುವಂತೆ ಬ್ಯಾಟಿಂಗ್ ಮಾಡುವುದರಲ್ಲಿ ವಿಫಲರಾಗಿದ್ದರು. 10 ಪಂದ್ಯಗಳನ್ನು ಮಾಡಿ ಕೇವಲ 193 ರನ್ ಗಳಿಸಿದ್ದರು.
Great to catch up with my good friend Christopher Henry Gayle @henrygayle , the Universe Boss. Super friendship since I recruited him for RCB. Best acquisition of a player ever. pic.twitter.com/X5Ny9d6n6t
— Vijay Mallya (@TheVijayMallya) June 22, 2022
ಕ್ರಿಸ್ ಗೇಲ್ ಸಾಮಾಜಿಕ ತಾಲತಾಣಗಳಲ್ಲಿ ಸಕ್ರಿಯರು. ಬಹಳಷ್ಟು ಪಾರ್ಟಿಗಳಲ್ಲಿ ಪಾಲ್ಗೊಳ್ಳುವ ಅವರು ಅದರ ಫೋಟೋಗಳನ್ನು ಅಪ್ ಲೋಡ್ ಮಾಡುತ್ತಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಗೇಲ್ ಆಡುತ್ತಿದ್ದ ದಿನಗಳಿಂದ ಅವರಿಗೆ ಕರ್ನಾಟಕದಲ್ಲಿ ಲಕ್ಷಾಂತರ ಅಭಿಮಾನಿಗಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications