Vinesh Phogat: ಸೆಮಿಫೈನಲ್ಗೆ ಲಗ್ಗೆಯಿಟ್ಟ ವಿನೇಶ್ ಫೋಗಟ್; ಭಾರತಕ್ಕೆ ಮತ್ತೊಂದು ಪದಕದ ಭರವಸೆ
ಹೆಮ್ಮೆಯ ಕುಸ್ತಿಪಟು ವಿನೇಶ್ ಫೋಗಟ್ ಒಲಿಂಪಿಕ್ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ವಿಶ್ವ ಚಾಂಪಿಯನ್ ಜಪಾನ್ನ ಯುಯಿ ಸುಸಾಕಿ ವಿರುದ್ಧ ಅದ್ಭುತ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದ ವಿನೇಶ್ ಫೋಗಟ್, ಕ್ವಾರ್ಟರ್ ಫೈನಲ್ನಲ್ಲಿ ಉಕ್ರೇನ್ನ ಒಕ್ಸಾನಾ ಲಿವಾಚ್ ಅವರನ್ನು 7-5 ಅಂಕಗಳಿಂದ ಸೋಲಿಸುವ ಮೂಲಕ ಸೆಮಿಫೈನಲ್ಗೆ ಲಗ್ಗೆಯಿಟ್ಟರು. ಸೆಮಿಫೈನಲ್ನಲ್ಲಿ ಅವರು ಗೆದ್ದರೆ ಭಾರತಕ್ಕೆ ಪದಕ ಖಚಿತವಾಗಲಿದೆ.
2018 ರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದಿದ್ದ ಮತ್ತು ಯೂರೋಪಿಯನ್ ಚಾಂಪಿಯನ್ ಆಗಿರುವ ಉಕ್ರೇನ್ನ ಒಕ್ಸಾನಾ ಲಿವಾಚ್ ಅವರು ಕಠಿಣ ಪ್ರತಿಸ್ಪರ್ಧಿಯಾಗಿದ್ದರು, ಆದರೆ ಕೊನೆಯ ಪಂದ್ಯದಲ್ಲಿ ಜಪಾನ್ನ ವಿಶ್ವ ಚಾಂಪಿಯನ್ ಕುಸ್ತಿಪಟುವನ್ನೇ ಮಣಿಸಿದ್ದ ವಿನೇಶ್ ಫೋಗಟ್ ಅವರ ಆತ್ಮವಿಶ್ವಾಸದ ಮುಂದೆ ಉಕ್ರೇನ್ ಕುಸ್ತಿಪಟುವಿನ ಆಟ ಮಂಕಾಯಿತು.

ಆರು ನಿಮಿಷಗಳ ರಣ ರೋಚಕ ಹೋರಾಟದಲ್ಲಿ ವಿನೇಶ್ ಫೋಗಟ್ ಮೊದಲಿನಿಂದಲೇ ಪ್ರಾಬಲ್ಯ ಸಾಧಿಸಿದರು. ಯಾವ ಹಂತದಲ್ಲೂ ಎದುರಾಳಿಗೆ ಮುನ್ನಡೆಯನ್ನು ಬಿಟ್ಟುಕೊಡಲಿಲ್ಲ. ಕೊನೆಯ ಕ್ಷಣದಲ್ಲಿ ಒಕ್ಸಾನಾ ಲಿವಾಚ್ ಆಕ್ರಮಣಕಾರಿಯಾಗಿ ಆಡಿದರೂ, ಅವರನ್ನು ಹಿಮ್ಮೆಟ್ಟಿಸುವಲ್ಲಿ ವಿನೇಶ್ ಫೋಗಟ್ ಯಶಸ್ವಿಯಾದರು. ವಿನೇಶ್ ಒಂದು ಹಂತದಲ್ಲಿ 4-0 ಮುನ್ನಡೆ ಸಾಧಿಸಿದರು, ಆದರೆ ಕೊನೆಯಲ್ಲಿ ಲಿವಾಚ್ ಕೂಡ ಆಕ್ರಮಣಕಾರಿ ಆಟ ಆಡಿದರು ಅವರು 5 ಅಂಕ ಗಳಿಸುವ ವೇಳೆಗೆ ವಿನೇಶ್ 7 ಅಂಕ ಗಳಿಸಿದ್ದರು.
ಇನ್ನೊಂದು ಪಂದ್ಯ ಗೆದ್ದರೆ!
ವಿನೇಶ್ ಫೋಗಟ್ ಸೆಮಿಫೈನಲ್ ಪ್ರವೇಶಿಸುವ ಮೂಲಕ ಭಾರತಕ್ಕೆ ಪದಕದ ಭರವಸೆ ಮೂಡಿಸಿದ್ದಾರೆ. ಸೆಮಿಫೈನಲ್ ಪಂದ್ಯ ಇಂದು ರಾತ್ರಿ 10.15 ಕ್ಕೆ ನಡೆಯಲಿದ್ದು, ಸೆಮಿಫೈನಲ್ನಲ್ಲಿ ವಿನೇಶ್ ಗೆದ್ದರೆ ಪದಕ ಗೆಲ್ಲುವುದು ಖಚಿತವಾಗಲಿದೆ. ಫೈನಲ್ನಲ್ಲಿ ಅವರು ಸೋತರೂ ಬೆಳ್ಳಿ ಪದಕ ಗೆಲ್ಲಲ್ಲಿದ್ದಾರೆ.
ವಿಶ್ವ ಚಾಂಪಿಯನ್ ಅನ್ನೆ ಬಗ್ಗು ಬಡಿದಿರುವ ವಿನೇಶ್ ಫೋಗಟ್ ಅವರು ಈಗ ಒಲಿಂಪಿಕ್ ಪದಕ ಗೆಲ್ಲುವ ಫೇವರಿಟ್ ಕ್ರೀಡಾಪಟುವಾಗಿದ್ದಾರೆ. ಕೋಟ್ಯಂತರ ಅಭಿಮಾನಿಗಳು ಕೂಡ ಫೋಗಟ್ ಅವರು ಪದಕ ಗೆಲ್ಲಲಿ ಎಂದು ಹಾರೈಸುತ್ತಿದ್ದಾರೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications