Vinesh Phogat: ಒಲಿಂಪಿಕ್ಸ್ನಿಂದ ಅನರ್ಹ; ವಿನೇಶ್ ಫೋಗಟ್ ಮೊದಲ ಪ್ರತಿಕ್ರಿಯೆ
ಪ್ಯಾರಿಸ್ ಒಲಿಂಪಿಕ್ಸ್ ನಿಂದ ಅನರ್ಹಗೊಂಡಿರುವ ಕುಸ್ತಿಪಟು ವಿನೇಶ್ ಫೋಗಟ್, ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 50 ಕೆಜಿ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿದ್ದ ವಿನೇಶ್ ಫೋಗಟ್ 100 ಗ್ರಾಂ ತೂಕ ಹೆಚ್ಚಾಗಿದ್ದಾರೆ ಎನ್ನುವ ಕಾರಣಕ್ಕೆ ಪ್ಯಾರಿಸ್ ಒಲಿಂಪಿಕ್ಸ್ 2024ರಿಂದ ಅನರ್ಹಗೊಂಡಿದ್ದಾರೆ. ಈ ಮೂಲಕ ಭಾರತಕ್ಕೆ ಪದಕವೊಂದು ಕೈತಪ್ಪಿದೆ. ಡಿಹೈಡ್ರೇಷನ್ನಿಂದ ಆಸ್ಪತ್ರೆ ಸೇರಿದ್ದ ವಿನೇಶ್ ಫೋಗಟ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ತಾವು ಅನರ್ಹಗೊಂಡ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು 'ಇದು ಆಟದ ಭಾಗವಾಗಿದೆ' ಎಂದು ಹೇಳಿದ್ದಾರೆ. ಮಹಿಳಾ ರಾಷ್ಟ್ರೀಯ ಕೋಚ್ ವೀರೇಂದ್ರ ದಹಿಯಾ ಮತ್ತು ಮಂಜೀತ್ ರಾಣಿ ಚಿಕಿತ್ಸೆ ಪಡೆಯುತ್ತಿದ್ದ ವಿನೇಶ್ ಫೋಗಟ್ರನ್ನು ಭೇಟಿಯಾದ ಬಳಿಕ ಈ ಹೇಳಿಕೆ ನೀಡಿದ್ದಾರೆ.

ಮಂಗಳವಾರ ಆರಂಭಿಕ ಸುತ್ತಿನಲ್ಲಿ ವಿಶ್ವದ ನಂಬರ್ ಒನ್ ಮತ್ತು ಹಾಲಿ ಚಾಂಪಿಯನ್ ಯುಯಿ ಸುಸಾಕಿಯನ್ನು ಸೋಲಿಸುವ ಮೂಲಕ ಕುಸ್ತಿ ಅಖಾಡದಲ್ಲಿ ಸಂಚಲನ ಮೂಡಿಸಿದ್ದರು. ಕ್ವಾರ್ಟರ್ ಫೈನಲ್, ಸೆಮಿಫೈನಲ್ನಲ್ಲಿ ಭರ್ಜರಿ ಗೆಲುವಿನ ಮೂಲಕ ಫೈನಲ್ ಪ್ರವೇಶಿಸಿದ್ದರು. ಭಾರತಕ್ಕೆ ಅದಾಗಲೇ ಬೆಳ್ಳಿ ಪದಕ ಖಚಿತವಾಗಿತ್ತು, ಅದರೆ ವಿನೇಶ್ ಚಿನ್ನದ ಪದಕ ಗೆದ್ದು ಬರಲಿ ಎಂದು ಕೋಟ್ಯಂತರ ಭಾರತೀಯರು ಹಾರೈಸಿದ್ದರು.
ಬುಧವಾರ ಬೆಳಗ್ಗೆ ವಿನೇಶ್ ಫೋಗಟ್ರ ತೂಕವನ್ನು ಪರಿಶೀಲನೆ ಮಾಡಿದ ಬಳಿಕ ಅವರನ್ನು ಅನರ್ಹ ಎಂದು ಘೋಷಣೆ ಮಾಡಲಾಯಿತು. ಇದು ಭಾರತೀಯ ಕ್ರೀಡಾಭಿಮಾನಿಗಳಿಗೆ ದೊಡ್ಡ ಆಘಾತವಾಗಿತ್ತು. ಒಲಿಂಪಿಕ್ಸ್ ಆಡಳಿತ ಮಂಡಳಿ ವಿರುದ್ದ ಭಾರಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಕೋಚ್ ಹೇಳಿದ್ದೇನು?
ವಿನೇಶ್ ಫೋಗಟ್ರನ್ನು ಭೇಟಿಯಾದ ಬಳಿಕ ಮಾತನಾಡಿದ ಮಹಿಳಾ ರಾಷ್ಟ್ರೀಯ ಕೋಚ್ ವೀರೇಂದ್ರ ದಹಿಯಾ ಮತ್ತು ಮಂಜೀತ್ ರಾಣಿ, ನಾವು ಆಕೆಯನ್ನು ಸಮಾಧಾನ ಮಾಡಲು ಯತ್ನಿಸಿದೆವು. ಆದರೆ ಆಕೆ ಧೈರ್ಯಶಾಲಿ, ನಾವು ಪದಕ ಕಳೆದುಕೊಂಡಿರುವುದು ಒಪ್ಪಿಕೊಳ್ಳುವುದು ಕಷ್ಟ ಆದರೆ ಇದು ಆಟದ ಭಾಗವಾಗಿದೆ ಎಂದು ಹೇಳಿರುವುದಾಗಿ ತಿಳಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications