Vinesh Phogat: ಭಾರತಕ್ಕೆ ಮರಳಿದ ಬಳಿಕ ವಿನೇಶ್ ಫೋಗಟ್ ಮೊದಲ ಪ್ರತಿಕ್ರಿಯೆ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಚಿನ್ನ ತಂದುಕೊಡುವ ಕನಸು ಕಂಡಿದ್ದ ಕುಸ್ತಿಪಟು ವಿನೇಶ್ ಫೋಗಟ್ 100 ಗ್ರಾಂ ತೂಕ ಹೆಚ್ಚಿರುವ ಕಾರಣ ಅನರ್ಹತೆಯ ಆಘಾತ ಅನುಭವಿಸಿದ್ದರು. ಬೆಳ್ಳಿ ಪದಕವನ್ನಾದರೂ ಕೊಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರೂ ಕ್ರೀಡಾ ತಾತ್ಕಾಲಿಕ ನ್ಯಾಯಾಲಯ (ಸಿಎಎಸ್) ಆಕೆಯ ಮನವಿಯನ್ನು ತಿರಸ್ಕರಿಸಿದೆ. ನಿರಾಸೆಯಿಂದಲೇ ಭಾರತಕ್ಕೆ ಬಂದ ಹೆಮ್ಮೆಯ ಕ್ರೀಡಾಪಟುವಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ.
ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಜನರ ಪ್ರೀತಿ, ಗೌರವವನ್ನು ಕಂಡು ವಿನೇಶ್ ಫೋಗಟ್ ಭಾವುಕರಾದರು. ಇಂತಹ ಪ್ರೀತಿ ಮತ್ತು ಗೌರವವನ್ನು ನೀಡಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದರು. ದೆಹಲಿಗೆ ಬಂದ ಬಳಿಕ ವಿನೇಶ್ ಫೋಗಟ್ ಅವರು ಭಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಅವರ ಜೊತೆ ರೋಡ್ ಶೋ ನಡೆಸಿದರು.

ಈ ಸಂದರ್ಭದಲ್ಲಿ ಎಎನ್ಐ ಜೊತೆ ಮಾತನಾಡಿದ ವಿನೇಶ್ ಫೋಗಟ್, ನನ್ನ ದೇಶದ ಜನರಿಂದ ನನಗೆ ಸಿಕ್ಕಿರುವ ಈ ಪ್ರೀತಿ ಮತ್ತು ಗೌರವಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು. ಒಂದು ಕ್ಷಣ ಭಾವುಕರಾದ ಅವರು, ಕಣ್ಣೀರು ಹಾಕಿದರು..
ಆಕೆ ನಿಜವಾದ ಚಾಂಪಿಯನ್
ಬಜರಂಗ್ ಪುನಿಯಾ ಮಾತನಾಡಿ, ವಿನೇಶ್ ಅವರನ್ನು ಚಾಂಪಿಯನ್ ರೀತಿ ಸ್ವಾಗರಿಸಲಾಗಿದೆ. ದೆಹಲಿಯ ಬೀದಿಗಳಿಂದ, ಒಲಿಂಪಿಕ್ಸ್ನಲ್ಲಿ ಆಕೆಯ ಕುಸ್ತಿಯವರೆಗೆ ಹೋರಾಟವನ್ನು ದೇಶದ ಜನ ನೋಡಿದ್ದಾರೆ. ಇಂದು ಆಕೆಗೆ ಜನರಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ ಎಂದು ಹೇಳಿದರು. ವಿನೇಶ್ ಫೋಗಟ್ ಮಹಿಳೆಯರು ಮತ್ತು ದೇಶಕ್ಕಾಗಿ ಸಾಕಷ್ಟು ಸೇವೆ ಮಾಡಿದ್ದಾರೆ. ಈಗ ಅವರಿಗೆ ಜನ ಗೌರವ ನೀಡುತ್ತಾರೆ ಎಂದು ಸಾಕ್ಷಿ ಮಲಿಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ಯಾರಿಸ್ನಲ್ಲಿ ವಿನೇಶ್ ಅವರು ಒಲಿಂಪಿಕ್ಸ್ನಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎನ್ನುವ ದಾಖಲೆ ಮಾಡಿದ್ದರು. ಚಿನ್ನ ಗೆಲ್ಲುವ ಆಕೆಯ ಆಸೆಗೆ ಅನರ್ಹತೆ ಅಡ್ಡಿಯಾಯಿತು. ಬೆಳ್ಳಿ ಪದಕ ಗೆಲ್ಲದೇ ಇದ್ದರೂ ವಿನೇಶ್ ಫೋಗಟ್ ಹೋರಾಡಿದ ರೀತಿಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಆಕೆಗೆ ಬೆಳ್ಳಿ ಪದಕ ಕೊಡುವಂತೆ ಸಾಕಷ್ಟು ಒತ್ತಾಯ ಮಾಡಲಾಯಿತಾದರೂ, ಕೊನೆಗೆ ನಿರಾಸೆಯಾಯಿತು.
ಅನರ್ಹತೆ ಬಳಿಕ ಕುಸ್ತಿಗೆ ವಿದಾಯ ಘೋಷಿಸಿದ್ದ ವಿನೇಶ್ ಫೋಗಟ್, ಇದೀಗ ನಿವೃತ್ತಿಯಿಂದ ವಾಪಸ್ ಬರುವ ಮುನ್ಸೂಚನೆ ಕೊಟ್ಟಿದ್ದಾರೆ. ನನ್ನೊಳಗಿನ ಕುಸ್ತಿ ಮತ್ತು ಹೋರಾಟದ ಮನೋಭಾವ ಎಂದಿಗೂ ಕಡಿಮೆಯಾಗಲ್ಲ ಎಂದು ಹೇಳಿದ್ದಾರೆ. ವಿನೇಶ್ ಮುಂದಿನ ಒಲಿಂಪಿಕ್ಸ್ನಲ್ಲಿ ಭಾಗವಹಿಸಲಿ ಎನ್ನುವುದು ಕ್ರೀಡಾಭಿಮಾನಿಗಳ ಆಗ್ರಹವಾಗಿದೆ. ಇದಕ್ಕೆ ವಿನೇಶ್ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications