ಪಾಂಡ್ಯ ವಿನಿಂಗ್ ಶಾಟ್; ಟಿವಿಗೆ ಮುತ್ತಿಟ್ಟ ಅಫ್ಘಾನ್ ವ್ಯಕ್ತಿ- ವಿಡಿಯೋ ವೈರಲ್
ಪಾಕಿಸ್ತಾನ ವಿರುದ್ಧ ಭಾರತ ಬಹಳ ರೋಚಕವಾಗಿ ನಿನ್ನೆ ಗೆದ್ದು ಏಷ್ಯಾ ಕಪ್ನಲ್ಲಿ ಶುಭಾರಂಭ ಮಾಡಿತು. ಭಾರತ ಮತ್ತು ಪಾಕಿಸ್ತಾನ ಪಂದ್ಯ ಎಂದರೆ ಅದರ ಜಿದ್ದಾಜಿದ್ದಿ ಬೇರೆ ಸ್ತರದ್ದು. ಎರಡೂ ತಂಡಗಳ ಆಟಗಾರರಲ್ಲಿ ಅದೇನೋ ಹುರುಪು. ಎರಡೂ ದೇಶಗಳ ಕ್ರಿಕೆಟ್ ಅಭಿಮಾನಿಗಳಿಗೂ ಇದು ಮಾಡು ಇಲ್ಲ ಮಡಿ ಎನ್ನುವ ರೋಚಕತೆ.
ಅಭಿಮಾನಿಗಳ ಸಂಭ್ರಮ ನೋಡುವುದೇ ಒಂದು ದೊಡ್ಡ ಸಂಭ್ರಮ. ಅದರಲ್ಲೂ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ ಕ್ರಿಕೆಟ್ ಪ್ರೇಮಿಗಳ ಸೆಲಬ್ರೇಶನ್ಗಳಂತೂ ವರ್ಣಿಸಲು ಹೇಳತೀರದು.
ನಿನ್ನೆ ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸಿದ ಬಳಿಕ ಅಫ್ಘಾನಿಸ್ತಾನದ ಅಭಿಮಾನಿ ಸಂಭ್ರಮಿಸಿದ ವಿಡಿಯೋವೊಂದು ಬಹಳ ವೈರಲ್ ಆಗಿದೆ. ಹಾರ್ದಿಕ್ ಪಾಂಡ್ಯ ಸಿಕ್ಸರ್ ಭಾರಿಸಿ ವಿನಿಂಗ್ ರನ್ ಹೊಡೆಯುತ್ತಿದ್ದಂತೆಯೇ, ಪಂದ್ಯವನ್ನು ಟಿವಿಯಲ್ಲಿ ತನ್ನ ಸ್ನೇಹಿತರ ಜೊತೆ ವೀಕ್ಷಿಸುತ್ತಿದ್ದ ಒಬ್ಬ ವ್ಯಕ್ತಿ ಟಿವಿ ಬಳಿ ಹೋಗಿ ಹಾರ್ದಿಕ್ ಪಾಂಡ್ಯಗೆ ಮುತ್ತಿಕ್ಕಿದ ಘಟನೆ ಈ ವಿಡಿಯೋದಲ್ಲಿ ಕಂಡಿದೆ.

ಅಫ್ಘಾನಿಸ್ತಾನದ ಜನರು ಸಾಮಾನ್ಯವಾಗಿ ಪಾಕಿಸ್ತಾನಕ್ಕಿಂತ ಭಾರತೀಯರನ್ನು ಹೆಚ್ಚು ಇಷ್ಟಪಡುತ್ತಾರೆ. ಅಫ್ಗಾನಿಸ್ತಾನಕ್ಕೆ ರಾಜತಾಂತ್ರಿಕವಾಗಿ ಮತ್ತು ಆರ್ಥಿಕವಾಗಿ ಭಾರತ ಸಾಕಷ್ಟು ನೆರವು ಒದಗಿಸುತ್ತದೆ. ಇದರಿಂದ ಭಾರತದ ಮೇಲೆ ಅಫ್ಗನ್ನರಿಗೆ ವಿಶೇಷ ಅಭಿಮಾನ. ಇದಕ್ಕೆ ಸಾಕ್ಷಿ ಈ ವಿಡಿಯೋ.
Congratulations to all our brothers. Indians And Afghans🇦🇫🇮🇳. We the people Afghanistan celebrating this victory with or friend country indian people. #India #ViratKohli𓃵 #pandya #INDvsPAK pic.twitter.com/FFI5VvKE0d
— A H (@YousafzaiAnayat) August 28, 2022
ಏಷ್ಯಾ ಕಪ್ನಲ್ಲಿ ಅಫ್ಘಾನಿಸ್ತಾನವೂ ಆಡುತ್ತಿದೆ. ಭಾರತ, ಪಾಕಿಸ್ತಾನ ಮತ್ತು ಹಾಂಕಾಂಗ್ ತಂಡಗಳು ಎ ಗುಂಪಿನಲ್ಲಿ ಇವೆ. ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ಬಿ ಗುಂಪಿನಲ್ಲಿ ಇವೆ. ಶ್ರೀಲಂಕಾ ವಿರುದ್ಧ ಅಫ್ಗಾನಿಸ್ತಾನ ಭರ್ಜರಿ ಗೆಲುವು ಸಾಧಿಸಿ ಭಾರತದಂತೆಯೇ ಶುಭಾರಂಭ ಮಾಡಿದೆ.
ಭಾರತ-ಪಾಕ್ ರೋಚಕ ಪಂದ್ಯ
ನಿನ್ನೆ ಭಾನುವಾರ ದುಬೈನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ರೋಚಕ ಹಣಾಹಣಿ ಕಂಡಿತ್ತು. ಪಾಕಿಸ್ತಾನ 20 ಓವರ್ಗೆ ಒಂದು ಎಸೆತ ಇರುವಂತೆಯೇ 147 ರನ್ಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಯಾಗಿ ಭಾರತ ಎರಡು ಎಸೆತ ಬಾಕಿ ಇರುವಂತೆ ಗೆಲುವು ಪಡೆಯಿತು.

ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಉತ್ತಮವಾಗಿ ಬ್ಯಾಟಿಂಗ್ ಮಾಡಿದರು. ಪಾಕಿಸ್ತಾನದ ಬೌಲರ್ಗಳೂ ಸಾಕಷ್ಟು ಪ್ರತಿರೋಧ ತೋರಿ ಕೊನೆಯ ಓವರ್ವರೆಗು ಪಂದ್ಯ ಸಾಗುವಂತೆ ಮಾಡಿದರು. 19ನೇ ಓವರ್ ಭಾರತಕ್ಕೆ ಟರ್ನಿಂಗ್ ಪಾಯಿಂಟ್ ಆಯಿತು. ಹಾರ್ದಿಕ್ ಪಾಂಡ್ಯ 17 ಬಾಲ್ನಲ್ಲಿ ಅಜೇಯ 33 ರನ್ ಭಾರಿಸಿ ಗೆಲುವಿನ ರೂವಾರಿ ಎನಿಸಿದರು. ಕೊನೆಯ ಓವರ್ನ 3ನೇ ಎಸೆತದಲ್ಲಿ ಸಿಕ್ಸರ್ ಭಾರಿಸಿ ಗೆಲುವಿನ ರನ್ ಕೂಡ ಭಾರಿಸಿದರು. ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಅನುಭವಿಸಿದ್ದ ಸೋಲಿಗೆ ಭಾರತ ಸೇಡು ತೀರಿಸಿಕೊಂಡಂತಾಗಿದೆ.
ಭಾರತ ತನ್ನ ಮುಂದಿನ ಪಂದ್ಯವನ್ನು ಹಾಂಕಾಂಗ್ ವಿರುದ್ಧ ಆಗಸ್ಟ್ 31ರಂದು ಆಡಲಿದೆ. ಪ್ರತೀ ಗುಂಪಿನಲ್ಲಿ ಎರಡು ತಂಡಗಳು ಸೂಪರ್-4 ಹಂತ ಪ್ರವೇಶಿಸಲಿವೆ. ಸೆಪ್ಟೆಂಬರ್ 11ರಂದು ಫೈನಲ್ ಪಂದ್ಯ ನಡೆಯಲಿದೆ.
(ಒನ್ಇಂಡಿಯಾ ಸುದ್ದಿ)
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications