Virat Kohli: ನಾನು ಅವರಷ್ಟು ಉತ್ತಮ ಆಟಗಾರನಲ್ಲ: ಸಚಿನ್ ಬಗ್ಗೆ ವಿರಾಟ್ ಕೊಹ್ಲಿ ಏನಂದ್ರು?
ಕ್ರಿಕೆಟ್ ದೇವರು ಎನಿಸಿಕೊಳ್ಳುವ ಸಚಿನ್ ತೆಂಡೂಲ್ಕರ್ ಏಕದಿನ ಶತಕಗಳ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಮೋಘ ಶತಕ ಗಳಿಸಿದ ವಿರಾಟ್ ಕೊಹ್ಲಿ ತಮ್ಮ ಹುಟ್ಟುಹಬ್ಬದ ದಿನವೇ ಸಚಿನ್ ದಾಖಲೆ ಸರಿಗಟ್ಟಿದರು.
ವಿರಾಟ್ ಕೊಹ್ಲಿ ಅವರ ಸಾಧನೆ ಬಗ್ಗೆ ಅಭಿನಂದನೆ ತಿಳಿಸಿದ ಸಚಿನ್ ಬೇಗನೇ 50ನೇ ಶತಕ ಗಳಿಸುವ ಮೂಲಕ ತಮ್ಮ ದಾಖಲೆ ಮುರಿಯುವಂತೆ ಹಾರೈಸಿದ್ದಾರೆ. ಸಚಿನ್ ಅವರು ಅಭಿನಂದಿಸಿರುವ ಬಗ್ಗೆ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ ದೊಡ್ಡ ಅಭಿಮಾನಿ, ಸಚಿನ್ ಅಭಿನಂದನೆ ಸಲ್ಲಿಸಿದ್ದರಿಂದ ಕೊಹ್ಲಿ ಸಹಜವಾಗಿಯೇ ಖುಷಿಯಾಗಿದ್ದಾರೆ. ತಮ್ಮ ಆರಾಧ್ಯ ದೈವದಿಂದ ಸಂದೇಶವನ್ನು ಸ್ವೀಕರಿಸಲು ನನಗೆ ದೊಡ್ಡ ಗೌರವವಾಗಿದೆ ಎಂದು ಹೇಳಿಕೊಂಡಿದ್ದಾರೆ.
ಅವರಷ್ಟು ಉತ್ತಮವಲ್ಲ ಎಂದ ಕೊಹ್ಲಿ
ತಮ್ಮ 35 ನೇ ಹುಟ್ಟುಹಬ್ಬದಂದು ವಿರಾಟ್ ಕೊಹ್ಲಿ ತಮ್ಮ ಆರಾಧ್ಯ ದೈವ ಸಚಿನ್ ತೆಂಡೂಲ್ಕರ್ ಅವರ ಶತಕಗಳ ಸಾಧನೆಯನ್ನು ಸರಿಗಟ್ಟಿದರು. ಆದರೂ ಎಂದಿಗೂ ತಾನು ಸಚಿನ್ ಅವರಷ್ಟು ಉತ್ತಮ ಆಟಗಾರನಲ್ಲ ಎಂದು ಹೇಳಿಕೊಂಡರು.
"ತೆಂಡೂಲ್ಕರ್ ಅವರ ಸಂದೇಶವು ತುಂಬಾ ವಿಶೇಷವಾಗಿದೆ. ಸದ್ಯಕ್ಕೆ ತೆಗೆದುಕೊಳ್ಳಲು ಇದು ತುಂಬಾ ಹೆಚ್ಚು. ನನ್ನ ಆರಾಧ್ಯ ದೈವದ ದಾಖಲೆ ಸರಿಗಟ್ಟಿದ್ದು ದೊಡ್ಡ ಗೌರವ. ನಾನು ಅವರಷ್ಟು ಉತ್ತಮ ಆಟಗಾರನಲ್ಲ. ಅವರು ಬ್ಯಾಟ್ನೊಂದಿಗೆ ಪರಿಪೂರ್ಣರಾಗಿದ್ದಾರೆ. ಅದೊಂದು ಭಾವನಾತ್ಮಕ ಕ್ಷಣ. ನಾನು ಬಂದ ದಿನಗಳು ನನಗೆ ಗೊತ್ತು, ನಾನು ಅವರ ಆಟವನ್ನು ಟಿವಿಯಲ್ಲಿ ನೋಡಿದ ದಿನಗಳು ನನಗೆ ಗೊತ್ತು. ಅವರಿಂದ ಮೆಚ್ಚುಗೆ ಪಡೆಯುವುದು ನನಗೆ ತುಂಬಾ ಖುಷಿಯಾಗಿದೆ" ಎಂದು ಪಂದ್ಯದ ನಂತರ ಕೊಹ್ಲಿ ಹೇಳಿದರು.
ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕೊಹ್ಲಿ ತಮ್ಮ ದಾಖಲೆಯ ಮೈಲಿಗಲ್ಲನ್ನು ಸರಿಗಟ್ಟಿದಾಗ ಸಚಿನ್ ತೆಂಡೂಲ್ಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿ "ವಿರಾಟ್ ಚೆನ್ನಾಗಿ ಆಡಿದ್ದಾರೆ. ಈ ವರ್ಷದ ಆರಂಭದಲ್ಲಿ 49 ರಿಂದ 50 ಕ್ಕೆ ಹೋಗಲು ನನಗೆ 365 ದಿನಗಳು ಬೇಕಾಯಿತು. ನೀವು 49 ರಿಂದ 50 ಕ್ಕೆ ಹೋಗಿ ಮುಂದಿನ ಕೆಲವು ದಿನಗಳಲ್ಲಿ ನನ್ನ ದಾಖಲೆಯನ್ನು ಮುರಿಯುತ್ತೀರಿ ಎಂದು ನಾನು ಭಾವಿಸುತ್ತೇನೆ. ಅಭಿನಂದನೆಗಳು!!" ಎಂದು ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications