Virat Kohli - Chris Gayle: ಗೇಲ್ ಕಾಕಾ 'ಆರ್ಸಿಬಿ'ಗೆ ಬನ್ನಿ ಎಂದ ಕೊಹ್ಲಿ; ಯೂನಿವರ್ಸಲ್ ಬಾಸ್ ಏನಂದ್ರು?
ಯೂನಿವರ್ಸಲ್ ಬಾಸ್ ಎಂದೇ ಹೆಸರಾಗಿರುವ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ಶನಿವಾರ ಸಿಎಸ್ಕೆ ವಿರುದ್ಧದ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡರು. ಮಾಜಿ ಆರ್ಸಿಬಿ ಆಟಗಾರ ತಂಡದ ಜೆರ್ಸಿ ತೊಟ್ಟು ತನ್ನ ನೆಚ್ಚಿನ ತಂಡಕ್ಕೆ ಬೆಂಬಲ ಕೊಟ್ಟರು.
ಗೆಲ್ಲಲೇಬೇಕಾದ ಪಂದ್ಯದಲ್ಲಿ ರೋಚಕವಾಗಿ ಹೋರಾಡಿದ ಆರ್ಸಿಬಿ, 27 ರನ್ಗಳಿಂದ ಸಿಎಸ್ಕೆ ತಂಡವನ್ನು ಮಣಿಸಿ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡು, ಸಿಎಸ್ಕೆ ತಂಡವನ್ನು ಟೂರ್ನಿಯಿಂದಲೇ ಹೊರಹಾಕಿದರು.

ಪಂದ್ಯ ಗೆಲ್ಲುತ್ತಿದ್ದಂತೆ ಆಟಗಾರರ ಸಂಭ್ರಮ ಸಖತ್ ಜೋರಾಗಿತ್ತು. ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಮತ್ತು ಕ್ರಿಸ್ ಗೇಲ್ ಡ್ರೆಸ್ಸಿಂಗ್ ರೂಂನಲ್ಲಿ ಭೇಟಿಯಾದರು. ಆರ್ಸಿಬಿಯ ಹಳೆಯ ದಿನಗಳನ್ನು ಇಬ್ಬರೂ ನೆನಪು ಮಾಡಿಕೊಂಡಿದ್ದಲ್ಲದೆ, ಅಭಿಮಾನಿಗಳಿಗೂ ನೆನಪಿಸಿದರು.
ಆರ್ಸಿಬಿಗೆ ಬನ್ನಿ ಎಂದ ವಿರಾಟ್
ಸದ್ಯ ಐಪಿಎಲ್ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಇರುವುದರಿಂದ ಬರೀ ಬ್ಯಾಟಿಂಗ್ ಮಾಡಿ, ಬಳಿಕ ರೆಸ್ಟ್ ಮಾಡುವ ಅವಕಾಶ ಇದೆ. ಇದನ್ನೇ ನೆನಪಿಸಿದ ವಿರಾಟ್ ಕೊಹ್ಲಿ"ಗೇಲ್ ಕಾಕಾ ಮುಂದಿನ ಐಪಿಎಲ್ನಲ್ಲಿ ಆರ್ಸಿಬಿಗೆ ಬನ್ನಿ, ಇಂಪ್ಯಾಕ್ಟ್ ಪ್ಲೇಯರ್ ನಿಯಮ ಇರುವುದರಿಂದ ನೀವು ಬ್ಯಾಟಿಂಗ್ ಮಾತ್ರ ಮಾಡಿ, ಫೀಲ್ಡಿಂಗ್ ಮಾಡುವ ಅಗತ್ಯವಿಲ್ಲ" ಎಂದು ಆಹ್ವಾನ ಕೊಟ್ಟಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಕ್ರಿಸ್ ಗೇಲ್ "ನೋಡು ಈಗಲೂ ಜೆರ್ಸಿ ಫಿಟ್ ಆಗಿ ಕಾಣುತ್ತಿದೆ, ನಿಮಗೇನಾದರೂ ಎಕ್ಸ್ಟ್ರಾ ಬ್ಯಾಟರ್ ಬೇಕಾದರೆ, ನಾನು ಇಂಪ್ಯಾಕ್ಟ್ ಪ್ಲೇಯರ್ ಆಗುತ್ತೇನೆ" ಎಂದು ಹೇಳಿದ್ದಾರೆ.
ವಿರಾಟ್ ಕೊಹ್ಲಿಯನ್ನು ಭೇಟಿಯಾದ ಫೋಟೊ ಹಂಚಿಕೊಂಡಿದ್ದು, ಖುಷಿ ವ್ಯಕ್ತಪಡಿಸಿದ್ದಾರೆ. ಬಳಿಕ ಸಿಎಸ್ಕೆ ತಂಡದ ಮಾಜಿ ನಾಯಕ ಎಂಎಸ್ ಧೋನಿ ಮತ್ತು ತಮ್ಮದೇ ದೇಶದ ಮಾಜಿ ಕ್ರಿಕೆಟ್ ಡಿಜೆ ಬ್ರಾವೋ ಅವರನ್ನು ಭೇಟಿ ಮಾಡಿ, ಮಾತನಾಡಿಸಿದ್ದಾರೆ.
ಕ್ರಿಸ್ ಗೇಲ್, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಆರ್ ಸಿಬಿ ತಂಡದ ಬ್ಯಾಟಿಂಗ್ ಆಧಾರಸ್ಥಂಭವಾಗಿದ್ದರು. ತಂಡದ ಜನಪ್ರಿಯತೆ ಹೆಚ್ಚಾಗಲು ಈ ಮೂವರ ಕೊಡುಗೆ ಸಾಕಷ್ಟಿದೆ.
ಆರ್ ಸಿಬಿ ತಂಡಕ್ಕೆ ಗೇಲ್ ಅವರ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಫ್ರಾಂಚೈಸಿ 'ಹಾಲ್ ಆಫ್ ಫೇಮ್' (Hall of Fame) ನೀಡಿ ಗೌರವಿಸಿದೆ. ಎಬಿ ಡಿವಿಲಿಯರ್ಸ್ ಮತ್ತು ವಿನಯ್ ಕುಮಾರ್ ಈ ಗೌರವಕ್ಕೆ ಭಾಜನರಾದ ಇನ್ನಿಬ್ಬರು ಮಾಜಿ ಆರ್ ಸಿಬಿ ಆಟಗಾರರಾಗಿದ್ದಾರೆ.
-
ಮೈದಾನಕ್ಕೆ ಬರ್ತಾರಾ ಆರ್ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications