Virat Kohli: ಐಪಿಎಲ್ ಇತಿಹಾಸದಲ್ಲಿ ಎರಡು ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ಪ್ರತಿ ಪಂದ್ಯ ಆಡಿದಾಗಲೂ ಏನಾದರೂ ಒಂದು ದಾಖಲೆ ಆಗುತ್ತಲೇ ಇರುತ್ತದೆ. ಭಾನುವಾರ ಕೂಡ ಅವರ ಒಂದು ಇನ್ನಿಂಗ್ಸ್ ಮೂಲಕ ಐಪಿಎಲ್ನಲ್ಲಿ ಎರಡು ಹೊಸ ದಾಖಲೆ ಬರೆದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಬ್ಯಾಟರ್ ವಿರಾಟ್ ಕೊಹ್ಲಿ ಪ್ರಸ್ತುತ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಶಿಖರ್ ಧವನ್ ಅವರನ್ನು ಹಿಂದಿಕ್ಕಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ರನ್ ಚೇಸ್ನಲ್ಲಿ ಹೆಚ್ಚು ಅರ್ಧ ಶತಕ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದರು. ಕೊಹ್ಲಿ 44 ಎಸೆತಗಳಲ್ಲಿ 159.09 ರ ಸ್ಟ್ರೈಕ್ ರೇಟ್ನಲ್ಲಿ 70 ರನ್ ಗಳಿಸಿದರು.
ಐಪಿಎಲ್ ಪಂದ್ಯಾವಳಿಗಳಲ್ಲಿ ಅತಿ ಹೆಚ್ಚು ಬಾರಿ 500 ರನ್ ಗಳಿಸಿದ ಡೇವಿಡ್ ವಾರ್ನರ್ ಅವರ ದಾಖಲೆಯನ್ನು ಸರಿಗಟ್ಟಿದರು. ಕೊಹ್ಲಿ ಮತ್ತು ವಾರ್ನರ್ ಇಬ್ಬರೂ ಐಪಿಎಲ್ ಋತುವಿನಲ್ಲಿ ಏಳು ಬಾರಿ 500 ರನ್ ಗಡಿ ದಾಟಿದ್ದಾರೆ.
ಚೇಸಿಂಗ್ ಮಾಡುವಾಗ ಐಪಿಎಲ್ನಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದವರ ಪಟ್ಟಿಯಲ್ಲಿ ಕೊಹ್ಲಿ ಸದ್ಯ ಎರಡನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ 35 ಅರ್ಧ ಶತಕಗಳೊಂದಿಗೆ ಅಗ್ರಸ್ಥಾನದಲ್ಲಿ ನಿಂತಿದ್ದಾರೆ. ಶಿಖರ್ ಧವನ್ 23 ಅರ್ಧಶತಕ ಸಿಡಿಸಿದ್ದಾರೆ. ಭಾರತೀಯ ಆಟಗಾರರ ಪೈಕಿ ವಿರಾಟ್ ಕೊಹ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ.
ಟೀಕಾಕಾರರಿಗೆ ಉತ್ತರ
ಜೂನ್ 1 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಗೆ ಯಾವುದೇ ಕ್ಷಣದಲ್ಲಾದರೂ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ ತಂಡದಲ್ಲಿ ಸ್ಥಾನ ಪಡೆಯುವ ಬಗ್ಗೆ ಅನುಮಾನ ಇಲ್ಲವಾದರೂ, ಕೆಲವರು ಮಾತ್ರ ಕೊಹ್ಲಿ ಸ್ಟ್ರೈಕ್ ರೇಟ್ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಸ್ಪಿನ್ ವಿರುದ್ಧ ಕೊಹ್ಲಿ ಉತ್ತಮವಾಗಿ ಆಡಲ್ಲ ಎಂದು ಕೂಡ ಟೀಕೆ ವ್ಯಕ್ತವಾಗಿತ್ತು.
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ಎರಡೂ ಟೀಕೆಗಳಿಗೆ ಉತ್ತರ ಕೊಟ್ಟರು. 44 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್ ಸಹಿತ 70 ರನ್ ಗಳಿಸಿದರು. ಅವರ ಸ್ಟ್ರೈಕ್ರೇಟ್ 159 ಆಗಿತ್ತು. ರಶೀದ್ ಖಾನ್, ನೂರ್ ಅಹಮದ್ ಮತ್ತು ಸಾಯಿ ಕಿಶೋರ್ ಅವರಂತಹ ಬೆಸ್ಟ್ ಸ್ಪಿನ್ ದಾಳಿಗೆ ಕೊಹ್ಲಿ ಬೌಂಡರಿ ಗಳಿಸಿದ್ದು, ತಮ್ಮ ವಿರುದ್ಧದ ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರ ಕೊಟ್ಟರು.
-
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications