ಅದೊಂದು ಕಪ್ ಗೆಲ್ಲಬೇಕು; ಟಿ20 ವಿಶ್ವಕಪ್ ಗೆದ್ದ ಕೊಹ್ಲಿಗೆ ಹೊಸ ಜವಾಬ್ದಾರಿ ಕೊಟ್ಟ ರಾಹುಲ್ ದ್ರಾವಿಡ್
ಟೀಂ ಇಂಡಿಯಾ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ಕೊನೆಯಾಗಿಸಿದೆ. ಎರಡನೇ ಬಾರಿ ಟಿ20 ವಿಶ್ವಕಪ್ ಗೆದ್ದ ಭಾರತ 17 ವರ್ಷಗಳ ಬಳಿಕ ಎರಡನೇ ಬಾರಿ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿತು.
ಐಸಿಸಿ ಪಂದ್ಯಾವಳಿಗಳಲ್ಲಿ 2013 ರಿಂದ ಅನೇಕ ನಿರಾಶೆಗಳನ್ನು ಅನುಭವಿಸಿದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಈ ಬಾರಿ ಟಿ20 ವಿಶ್ವಕಪ್ ಗೆಲ್ಲುವುದು ಬಹಳ ಮುಖ್ಯವಾಗಿತ್ತು. ಅವರ ಕನಸು ಕೊನೆಗೂ ನನಸಾಯಿತು.

ವಿಶ್ವಕಪ್ ಗೆಲ್ಲುತ್ತಿದ್ದಂತೆ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದರು. ರಾಹುಲ್ ದ್ರಾವಿಡ್ ಅವರ ಕೋಚ್ ಅವಧಿ ಕೂಡ ಮುಕ್ತಾಯವಾಗಿದ್ದು, ಮುಂದಿನ ಕೋಚ್ ಯಾರು ಎನ್ನುವುದು ಶೀಘ್ರದಲ್ಲೇ ಘೋಷಣೆಯಾಗಲಿದೆ.
ಕೊಹ್ಲಿಗೆ ಮಹತ್ವದ ಜವಾಬ್ದಾರಿ ಕೊಟ್ಟ ದ್ರಾವಿಡ್
ಭಾರತ ವಿಶ್ವಕಪ್ ಗೆಲ್ಲುತ್ತಿದ್ದಂತೆ ತಂಡವನ್ನು ಉದ್ದೇಶಿಸಿ ರಾಹುಲ್ ದ್ರಾವಿಡ್ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷವಾಗಿ ಕೊಹ್ಲಿಯ ಬಗ್ಗೆ ಪ್ರಸ್ತಾಪಿಸಿದ ಅವರು, ಮತ್ತೊಂದು ಮಹತ್ವದ ಕಪ್ ಗೆಲ್ಲುವ ಜವಾಬ್ದಾರಿ ನೀಡಿದರು.
ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಕೊಹ್ಲಿ ಸೀಮಿತ ಓವರ್ ಗಳಲ್ಲಿ ಮೂರು ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಸಾಧನೆ ಮಾಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ 2011ರ ಏಕದಿನ ವಿಶ್ವಕಪ್ ಮತ್ತು 2013 ರ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದರು. ಕೊಹ್ಲಿ ನಾಯಕನಾಗಿ ಐಸಿಸಿ ಟೆಸ್ಟ್ ಮೇಸ್ ಅನ್ನು ಗೆದ್ದಿದ್ದರೂ, ಅವರು ಇನ್ನೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪದಕವನ್ನು ಗೆದ್ದಿಲ್ಲ.
ಭಾರತವು ತನ್ನ ಎರಡೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗಳಲ್ಲಿ ಕಠಿಣ ಸೋಲುಗಳನ್ನು ಅನುಭವಿಸಿತು. 2021 ರಲ್ಲಿ, ಕೊಹ್ಲಿ ನಾಯಕತ್ವದಲ್ಲಿ ತಂಡವು ನ್ಯೂಜಿಲೆಂಡ್ ವಿರುದ್ಧ ಸೋತಿತು, 2023 ರ ಫೈನಲ್ನಲ್ಲಿ ಆಸ್ಟ್ರೇಲಿಯಾವು ಓವಲ್ನಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವನ್ನು ಸೋಲಿಸಿತು.
ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತವು ಪ್ರಸ್ತುತ ಒಂಬತ್ತು ಪಂದ್ಯಗಳಲ್ಲಿ ಆರು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಮತ್ತು ಮುಂದಿನ ವರ್ಷ ಮತ್ತೊಂದು ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ.
ಟಿ20 ವಿಶ್ವಕಪ್ ವಿಜಯದ ಸಂಭ್ರಮಾಚರಣೆಯು ಡ್ರೆಸ್ಸಿಂಗ್ ರೂಮ್ನಲ್ಲಿ ಮುಂದುವರಿಯುತ್ತಿದ್ದಂತೆ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿರಾಟ್ ಕೊಹ್ಲಿಗೆ ಬಿಳಿ ಚೆಂಡಿನ ಕಪ್ಗಳನ್ನು ಗೆದ್ದಿದ್ದೀರಿ, ಈಗ ಕೆಂಪು ಚೆಂಡಿನ ಪ್ರಶಸ್ತಿಯನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಈ ಬಾರಿ ಚಾಂಪಿಯನ್ ಆಗಬೇಕು ಎಂದು ರಾಹುಲ್ ದ್ರಾವಿಡ್ ಬಯಸಿದ್ದಾರೆ. ಕೊಹ್ಲಿಗೆ ಅದಕ್ಕಾಗಿ ವಿಶೇಷವಾಗಿ ಜವಾಬ್ದಾರಿ ವಹಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications