Get Updates
Get notified of breaking news, exclusive insights, and must-see stories!

Cricket: 'ಇದು ಟೀಮ್‌ ಇಂಡಿಯಾ ಅಲ್ಲ..': ಸೆಹ್ವಾಗ್ ಶಾಕಿಂಗ್ ಹೇಳಿಕೆ!

ಭಾರತದ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಇಂದು ಸರ್ಪ್ರೈಸ್ ಸಿಕ್ಕಿದೆ. ಕ್ರಿಕೆಟ್ ವಿಶ್ವಕಪ್‌ಗಾಗಿ ಭಾರತ ತಂಡದ ಆಟಗಾರರನ್ನು ಘೋಷಿಸಲಾಗಿದೆ. ಎಲ್ಲೆಲ್ಲೂ ಈ ಬಗ್ಗೆ ಚರ್ಚೆ ನಡೆದಿದೆ. ಹಾಗೇ ಭಾರತ ವಿಶ್ವಕಪ್ ಗೆಲ್ಲುತ್ತಾ? ಎಂಬ ಬಗ್ಗೆಯೂ ಅಭಿಮಾನಿಗಳು ಚಿಂತಿಸುತ್ತಿದ್ದಾರೆ. ಆದ್ರೆ ಈ ಸಂದರ್ಭದಲ್ಲಿ ಭಾರತದ ಮಾಜಿ ಸ್ಟಾರ್ ಆಟಗಾರ ವೀರೇಂದ್ರ ಸೆಹ್ವಾಗ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಹಾಗಾದರೆ ಟೀಂ ಇಂಡಿಯಾ ಬಗ್ಗೆ ಸೆಹ್ವಾಗ್ ಹೇಳಿದ್ದೇನು?

ಹೌದು ಟೀಂ ಇಂಡಿಯಾ ಬಗ್ಗೆ ವೀರೇಂದ್ರ ಸೆಹ್ವಾಗ್ ಮಹತ್ವದ ಹೇಳಿಕೆ ನೀಡಿದ್ದು, ಇಂದು ಘೋಷಣೆಯಾದ ಭಾರತ ತಂಡದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಇಂಡಿಯಾ ಹೆಸರನ್ನು ಭಾರತ ಎಂದು ಬದಲಿಸಲು ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ ಭಾರತದ ಈ ಆಟಗಾರ. ಈ ಮೂಲಕ ಮುಂದಿನ ವಿಶ್ವಕಪ್‌ ಟೂರ್ನಿಯ ವೇಳೆ ಟೀಮ್‌ ಇಂಡಿಯಾ ಎನ್ನುವ ಬದಲಿಗೆ ಟೀಮ್‌ ಭಾರತ್‌ ಅಂದರೆ #TeamBharat ಎನ್ನುವ ಹ್ಯಾಶ್‌ ಟ್ಯಾಗ್‌ ಬಳಸಿ ಎಂದು ವೀರೇಂದ್ರ ಸೆಹ್ವಾಗ್ ಮನವಿ ಮಾಡಿದ್ದಾರೆ.

indias-name-to-bharat-on-world-cup-jersey

ಭಾರತದ ಆಟಗಾರರ ಬಗ್ಗೆ ಹೇಳಿದ್ದೇನು?

ಹಾಗೇ ಭಾರತದ ವರ್ಲ್ಡ್ ಕಪ್ ತಂಡದಲ್ಲಿ ಸ್ಥಾನ ಪಡೆದಿರುವ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮ, ಜಸ್‌ಪ್ರೀತ್‌ ಬುಮ್ರಾ & ರವೀಂದ್ರ ಜಡೇಜಾ ಬಗ್ಗೆ ಕೂಡ ಸೆಹ್ವಾಗ್ ಮಾತನಾಡಿದ್ದಾರೆ. ಒಬ್ಬ ಅಭಿಮಾನಿಯಾಗಿ, ನಾವು ನಮ್ಮ ಹೃದಯದಲ್ಲಿ ಭಾರತ್ ಎಂಬ ಸ್ಫೂರ್ತಿ ಜೊತೆಗೆ ಈ ಆಟಗಾರರನ್ನು ಹುರಿದುಂಬಿಸಬೇಕು ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಹಾಗೇ ಇದೇ ವೇಳೆ ಆಟಗಾರರು ತಮ್ಮ ಗುರುತು ಬದಲಾಗಿರುವ ಬಗ್ಗೆ ತಿಳಿಸಲು ವಿಶ್ವಕಪ್‌ನಲ್ಲಿ "ಭಾರತ್" ಎನ್ನುವ ಪದವಿರುವ ಜೆರ್ಸಿ ಧರಿಸಬೇಕು ಎಂದು ಸೆಹ್ವಾಗ್ ಸಲಹೆ ನೀಡಿದ್ದಾರೆ.

15 ಆಟಗಾರರ ಪಟ್ಟಿ ರಿಲೀಸ್!

ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ಮಹತ್ವದ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಪ್ರಕಟಿಸಲಾಗಿದೆ. ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ. ಉಳಿದಂತೆ ಸದ್ಯ ಏಷ್ಯಾಕಪ್ ಸರಣಿಯಲ್ಲಿ ಆಡುತ್ತಿರುವ ತಂಡ ಏಕದಿನ ವಿಶ್ವಕಪ್‌ನಲ್ಲಿ ಆಡಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ರಾಷ್ಟ್ರೀಯ ಆಯ್ಕೆ ಸಮಿತಿಯು 15 ಆಟಗಾರರ ಪಟ್ಟಿಯನ್ನ ಆಯ್ಕೆ ಮಾಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

indias-name-to-bharat-on-world-cup-jersey

ಯಾವೆಲ್ಲಾ ಆಟಗಾರರಿಗೆ ವಿಶ್ರಾಂತಿ?

ಗಾಯದಿಂದ ಚೇತರಿಸಿಕೊಂಡು ಫಿಟ್ ಆಗಿರುವ ಕೆಎಲ್ ರಾಹುಲ್ ಏಕದಿನ ವಿಶ್ವಕಪ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಬ್ಯಾಕ್ಅಪ್ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದು ಸಂಜು ಸ್ಯಾಮ್ಸನ್‌ಗೆ ಸ್ಥಾನ ಸಿಕ್ಕಿಲ್ಲ. ಇದೇ ವೇಳೆ ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ ಅವರು ಭಾರತ ತಂಡದ ವಿಶ್ವಕಪ್ ಪಟ್ಟಿಯಿಂದ ಹೊರಗೆ ಉಳಿದಿದ್ದಾರೆ.

ಭಾರತ ತಂಡದ ಆಟಗಾರರ ವಿವರ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್) , ಇಶಾನ್ ಕಿಶನ್ (ವಿಕೆಟ್ ಕೀಪರ್) ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಅವರು ಭಾರತದ ವರ್ಲ್ಡ್ ಕಪ್ ತಂಡದಲ್ಲಿ ಸ್ಥಾನವನ್ನು ಪಡೆದಿದ್ದಾರೆ. ಈ ಮೂಲಕ ವಿಶ್ವಕಪ್ ಗೆಲ್ಲಲು ಭಾರತ ಕ್ರಿಕೆಟ್ ತಂಡ ಸಜ್ಜಾಗಿದೆ.

ಒಟ್ನಲ್ಲಿ ಭಾರತ ತಂಡ ವಿಶ್ವಕಪ್‌ಗೆ ಸಿದ್ಧತೆ ನಡೆಸಿರುವ ಸಂದರ್ಭದಲ್ಲೇ ಟೀಂ ಇಂಡಿಯಾದ ಹೆಸರು ಬದಲಾವಣೆಗೆ ಒತ್ತಾಯ ಕೇಳಿಬಂದಿದೆ. ಈ ಕುರಿತು ಭಾರತದ ಮಾಜಿ ಆಟಗಾರರೇ ಒತ್ತಾಯ ಮಾಡಿರುವುದು ವಿಶೇಷ. ಹೀಗಾಗಿ ಸೆಹ್ವಾಗ್ ಮಾಡಿದ ಮನವಿಗೆ ಬಿಸಿಸಿಐನಿಂದ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗುತ್ತೆ? ಅನ್ನೋದನ್ನ ಕಾದು ನೋಡಬೇಕಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ಭಾರತ ಈ ಬಾರಿಯ ವಿಶ್ವಕಪ್ ಗೆದ್ದು ಬರಲಿ ಅಂತಾ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+