ಲೈವ್ ಕಾಮೆಂಟರಿಯಲ್ಲೇ ವೀರೇಂದರ್ ಸೆಹ್ವಾಗ್-ಆರ್.ಅಶ್ವಿನ್ ಕಿತ್ತಾಟ; ಹಿರಿಯ ಆಟಗಾರರ ವರ್ತನೆಗೆ ಕ್ರೀಡಾಭಿಮಾನಿಗಳ ಆಕ್ರೋಶ
ಐಪಿಎಲ್ 2026 ಕೇವಲ ಮೈದಾನದ ಆಟದಿಂದ ಮಾತ್ರವಲ್ಲದೆ, ಈಗ ಕಾಮೆಂಟರಿ ಬಾಕ್ಸ್ನಲ್ಲಿ ನಡೆಯುತ್ತಿರುವ ವಿವಾದಗಳಿಂದಲೂ ಸುದ್ದಿಯಾಗುತ್ತಿದೆ. ಶನಿವಾರ ನಡೆದ ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ವೇಳೆ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಮತ್ತು ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ನಡುವೆ ನಡೆದ ನೇರಪ್ರಸಾರದ ವಾಕ್ಸಮರ ಈಗ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಆರ್.ಅಶ್ವಿನ್ ಅವರು ಜಿಯೋಸ್ಟಾರ್ ಲೈವ್ನಲ್ಲಿ ಕಾಮೆಂಟರಿ ಮಾಡಲು ಆಗಮಿಸಿದ್ದರು. ಈ ವೇಳೆ ಅಲ್ಲಿಯೇ ಇದ್ದ ಸೆಹ್ವಾಗ್, ಅಶ್ವಿನ್ ಅವರ ಕಾಲೆಳೆಯುವ ಉದ್ದೇಶದಿಂದ ವ್ಯಂಗ್ಯವಾಡಿದರು. "ಇವತ್ತಾದರೂ ಜನ ತಮ್ಮ ಹೃದಯದಿಂದ ಮಾತನಾಡುತ್ತಾರೆ ಮತ್ತು ಮಾತನಾಡುವ ಮೊದಲು ಅತಿಯಾಗಿ ಯೋಚಿಸುವುದಿಲ್ಲ ಎಂದು ಭಾವಿಸುತ್ತೇನೆ," ಎಂದು ಸೆಹ್ವಾಗ್ ಹೇಳಿದರು.

ಸೆಹ್ವಾಗ್ಗೆ ಅಶ್ವಿನ್ ತಿರುಗೇಟು
ಸೆಹ್ವಾಗ್ ಅವರ ಈ ಮಾತಿನಿಂದ ಅಸಮಾಧಾನಗೊಂಡ ಅಶ್ವಿನ್ ತಕ್ಷಣವೇ ತಿರುಗೇಟು ನೀಡಿದರು. "ನನ್ನ ಪೋಷಕರು ನನಗೆ ಯಾವಾಗಲೂ ಮಾತನಾಡುವ ಮುನ್ನ ಯೋಚಿಸಬೇಕೆಂದು ಕಲಿಸಿದ್ದಾರೆ. ನಾನು ಯೋಚನೆ ಮಾಡದೆ ಯಾವುದೇ ಮಾತನ್ನು ಆಡುವುದಿಲ್ಲ" ಎಂದು ಖಡಕ್ ಆಗಿ ಉತ್ತರಿಸಿದರು. ಈ ಸಂಭಾಷಣೆಯು ಇಬ್ಬರ ನಡುವೆ ದೊಡ್ಡ ವಾಗ್ವಾದಕ್ಕೆ ಕಾರಣವಾಯಿತು.
ಪಂದ್ಯದ ವಿಶ್ಲೇಷಣೆ ಮಾಡಬೇಕಾದವರು ಹೀಗೆ ಕಿತ್ತಾಡಿಕೊಂಡಿರುವುದು ಬಿಸಿಸಿಐ ಗಮನಕ್ಕೆ ಬಂದಿದ್ದು, ಮೂಲಗಳ ಪ್ರಕಾರ ಈ ಇಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಂಡಳಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಬಿಸಿಸಿಐನಿಂದ ಇನ್ನೂ ಯಾವುದೇ ಅಧಿಕೃತ ಆದೇಶ ಹೊರಬಿದ್ದಿಲ್ಲ.
ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ
ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತಮ್ಮದೇ ಆದ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. "ಅಶ್ವಿನ್ ಅಲ್ಲಿರುವುದು ಕ್ರಿಕೆಟ್ ವಿಶ್ಲೇಷಣೆ ಮಾಡುವುದಕ್ಕೆ ಹೊರತು ಸೆಹ್ವಾಗ್ ಅವರಂತೆ ಸಮಯ ಕಳೆಯಲು ಅಲ್ಲ," ಎಂದು ಕೆಲವರು ಅಶ್ವಿನ್ ಬೆಂಬಲಕ್ಕೆ ನಿಂತಿದ್ದಾರೆ. ಅಲ್ಲದೆ, "ಹಿರಿಯ ಆಟಗಾರರಾದ ಸೆಹ್ವಾಗ್ ಹೇಗೆ ವೃತ್ತಿಪರವಾಗಿ ನಡೆದುಕೊಳ್ಳಬೇಕು ಎಂಬುದನ್ನು ಕಲಿಯಬೇಕು," ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಂದೆಡೆ, "ಅಶ್ವಿನ್ ಅವರಿಗೆ ತಮಾಷೆಯನ್ನು ಸಹಿಸಿಕೊಳ್ಳುವ ಗುಣವಿಲ್ಲ, ಅವರು ತಮ್ಮ ಯೂಟ್ಯೂಬ್ ಚಾನೆಲ್ನಲ್ಲೇ ವಿಶ್ಲೇಷಣೆ ಮಾಡುವುದು ಒಳಿತು," ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.
-
Virat Kohli: ಅನುಷ್ಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಬಳಿಕ ತನ್ನ ಆಟದ ಯಶಸ್ಸಿನ ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿ -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
RCB Vs SHR: ಚಿನ್ನಸ್ವಾಮಿಯಲ್ಲಿ ಎಸ್ಆರ್ಎಚ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ -
ಕಾಲ್ತುಳಿತದಲ್ಲಿ ಮೃತಪಟ್ಟ 11 ಅಭಿಮಾನಿಗಳಿಗೆ ಆರ್ಸಿಬಿ-ಎಸ್ಆರ್ಎಚ್ ಆಟಗಾರರಿಂದ ವಿಶೇಷ ಗೌರವ -
ಚಿನ್ನಸ್ವಾಮಿಯಲ್ಲಿ ಕನ್ನಡಿಗ ದೇವ್, ವಿರಾಟ್ ಅಬ್ಬರದ ಬ್ಯಾಟಿಂಗ್: ಆರ್ಸಿಬಿ ವಿರುದ್ಧ ಎಸ್ಆರ್ಎಚ್ ಹೀನಾಯು ಸೋಲು -
RCB Playing 11 Prediction: ಎಸ್ಆರ್ಎಚ್ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್ -
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ











Click it and Unblock the Notifications