WI vs SL: ಸೆಮಿಫೈನಲ್ನಲ್ಲಿ ಶ್ರೀಲಂಕಾ ವಿರುದ್ಧ ರೋಚಕ ಗೆಲುವು ಸಾಧಿಸಿದ ವೆಸ್ಟ್ ಇಂಡೀಸ್; ಫೈನಲ್ನಲ್ಲಿ ಭಾರತಕ್ಕೆ ಸವಾಲು
ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಟಿ20 ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವು ಶ್ರೀಲಂಕಾ ಮಾಸ್ಟರ್ಸ್ ವಿರುದ್ಧ 6 ರನ್ಗಳ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ವೆಸ್ಟ್ ಇಂಡೀಸ್ ಫೈನಲ್ಗೆ ಲಗ್ಗೆಯಿಟ್ಟಿದೆ. ಟಿನೋ ಬೆಸ್ಟ್ ಮಾರಕ ಬೌಲಿಂಗ್ ನೆರವಿನಿಂದ ವೆಸ್ಟ್ ಇಂಡೀಸ್ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಶ್ರೀಲಂಕಾ ಮಾಸ್ಟರ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿತು. ನಾಯಕ ಬ್ರಿಯಾನ್ ಲಾರಾ 33 ಎಸೆತಗಳಲ್ಲಿ 41 ರನ್ ಗಳಿಸಿದರೆ, ವಾಲ್ಟನ್ 31 ರನ್ ಗಳಿಸಿದರು, ದಿನೇಶ್ ರಾಮ್ದಿನ್ 22 ಎಸೆತಗಳಲ್ಲಿ ಅಜೇಯ 50 ರನ್ ಗಳಿಸುವ ಮೂಲಕ ವೆಸ್ಟ್ ಇಂಡೀಸ್ ಸವಾಲಿನ ಮೊತ್ತ ಕಲೆಹಾಕಲು ಕಾರಣವಾದರು.

ಈ ಮೊತ್ತವನ್ನು ಬೆನ್ನಟ್ಟಿದ ಶ್ರೀಲಂಕಾ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 173 ರನ್ ಗಳಿಸುವ ಮೂಲಕ ರೋಚಕ ಸೋಲು ಕಂಡಿತು. ಅಸೆಲಾ ಗುಣರತ್ನೆ 42 ಎಸೆತಗಳಲ್ಲಿ 66 ರನ್ ಗಳಿಸಿದರೂ ತಂಡದ ಸೋಲನ್ನು ತಪ್ಪಿಸಲು ಆಗಲಿಲ್ಲ, ಇಸುರು ಉಡಾನ 10 ಎಸೆತಗಳಲ್ಲಿ 21 ರನ್ ಗಳಿಸಿ ಶ್ರೀಲಂಕಾಗೆ ಗೆಲುವಿನ ಆಸೆ ಮೂಡಿಸಿದ್ದರೂ ಅವರು ಔಟ್ ಆದ ಬಳಿಕ ಶ್ರೀಲಂಕಾ ಸೋಲೊಪ್ಪಿಕೊಂಡಿತು.
ಟಿನೋ ಬೆಸ್ಟ್ 4 ಓವರ್ ಗಳಲ್ಲಿ 27 ರನ್ ಬಿಟ್ಟುಕೊಟ್ಟು 4 ವಿಕೆಟ್ ಪಡೆಯುವ ಮೂಲಕ ವೆಸ್ಟ್ ಇಂಡೀಸ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಡ್ವಾನೆ ಸ್ಮಿತ್ 2 ವಿಕೆಟ್ ಪಡೆದರೆ, ಆಶ್ಲೆ ನರ್ಸ್, ಜೆರೋಮ್ ಟೇಲರ್, ಲೆಂಡಲ್ ಸಿಮನ್ಸ್ ತಲಾ ಒಂದು ವಿಕೆಟ್ ಪಡೆದುಕೊಂಡರು.
ಈ ಸೋಲಿನೊಂದಿಗೆ ಶ್ರೀಲಂಕಾ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ವೆಸ್ಟ್ ಇಂಡೀಸ್ ಫೈನಲ್ ಪ್ರವೇಶಿಸಿದೆ. ಮಾರ್ಚ್ 16ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಇಂಡಿಯಾ ಮಾಸ್ಟರ್ಸ್ ತಂಡವನ್ನು ಎದುರಿಸಲಿದೆ. ಎರಡೂ ತಂಡಗಳು ಬಲಿಷ್ಠವಾಗಿದ್ದು ರೋಚಕ ಹಣಾಹಣಿಯನ್ನು ನಿರೀಕ್ಷೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮಿಂಚಿ ನಿವೃತ್ತಿ ಹೊಂದಿರುವ ಲೆಜೆಂಡ್ ಆಟಗಾರರು ಮತ್ತೊಮ್ಮೆ ಮೈದಾನಕ್ಕಿಳಿದಿದ್ದು ಅಭಿಮಾನಿಗಳ ಮನಗೆದ್ದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications