Dinesh Karthik: ನಿವೃತ್ತಿಯಾದರೂ ಆರ್ಸಿಬಿ ತಂಡದಲ್ಲಿರುತ್ತಾರೆ ದಿನೇಶ್ ಕಾರ್ತಿಕ್!
ಆರ್ಸಿಬಿ ಅಭಿಮಾನಿಗಳು ದಿನೇಶ್ ಕಾರ್ತಿಕ್ರನ್ನು 'ಡಿಕೆ ಬಾಸು' ಎಂದೇ ಕರೆಯುತ್ತಾರೆ. ತಂಡ ಸಂಕಷ್ಟದಲ್ಲಿದ್ದಾಗ ಆಪದ್ಭಾಂಧವರಾಗಿದ್ದಾರೆ. ಆರ್ಸಿಬಿ ತಂಡಕ್ಕೆ ಕಪ್ ಗೆದ್ದುಕೊಟ್ಟು ಐಪಿಎಲ್ನಿಂದ ನಿವೃತ್ತಿಯಾಗುವ ಕನಸು ಹೊಂದಿದ್ದರು.
ಟೂರ್ನಿಯಿಂದಲೇ ಹೊರಬೀಳುವ ಹಂತದಿಂದ ಪುಟಿದೆದ್ದ ಆರ್ಸಿಬಿ ಸತತ ಆರು ಪಂದ್ಯಗಳನ್ನು ಗೆದ್ದು ಪ್ಲೇಆಫ್ ತಲುಪಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತು.

ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿನ ಬಳಿಕ ದಿನೇಶ್ ಕಾರ್ತಿಕ್ ಅವರಿಗೆ ತಂಡದ ಆಟಗಾರರು ಗಾರ್ಡ್ ಆಫ್ ಹಾನರ್ ನೀಡಿದರು. ಆರ್ಸಿಬಿ ಫ್ರಾಂಚೈಸಿ ಕೂಡ ದಿನೇಶ್ ಕಾರ್ತಿಕ್ ಕುರಿತಂತೆ ವಿಶೇಷ ವಿಡಿಯೋವನ್ನು ಕೂಡ ಹಂಚಿಕೊಂಡಿದೆ.
ತಂಡದಲ್ಲಿರುತ್ತಾರೆ ದಿನೇಶ್ ಕಾರ್ತಿಕ್
ಕಳೆದ ಬಾರಿ ಐಪಿಎಲ್ ಆಡಿದ್ದ ಬಳಿಕ ವೀಕ್ಷಕ ವಿವರಣೆಗಾರರಾಗಿ ಕೆಲಸ ಮಾಡಿದ್ದ ದಿನೇಶ್ ಕಾರ್ತಿಕ ಈ ಐಪಿಎಲ್ನಲ್ಲಿ ಬ್ಯಾಟಿಂಗ್ನಲ್ಲಿ ಮೋಡಿ ಮಾಡಿದ್ದರು. ಈಗ ಐಪಿಎಲ್ನಿಂದ ನಿವೃತ್ತಿ ಹೊಂದಿರುವ ದಿನೇಶ್ ಕಾರ್ತಿಕ್, ಮತ್ತೆ ವೀಕ್ಷಕ ವಿವರಣೆಗಾರರಾಗಿ ಕೆಲಸ ಮುಂದುವರೆಸುವ ಸಾಧ್ಯತೆ ಇದೆ.
ಆಟಗಾರನಾಗಿ ತಂಡದಿಂದ ನಿವೃತ್ತಿಯಾದರೂ, ದಿನೇಶ್ ಕಾರ್ತಿಕ್ ಆರ್ಸಿಬಿ ಜೊತೆಯೇ ಇರಬೇಕು ಎನ್ನುವುದು ಅಭಿಮಾನಿಗಳ ಆಸೆ. ದಿನೇಶ್ ಕಾರ್ತಿಕ್ ಹಿರಿಯ ಆಟಗಾರ, ಉತ್ತಮ ಮಾತುಗಾರ. ತಂಡ ಸೋತಾಗ ಅವರು ಆಟಗಾರರ ಆತ್ಮವಿಶ್ವಾಸ ಹೆಚ್ಚುವಂತೆ ಮಾತನಾಡಿದ್ದರು.
ಮುಂದಿನ ಐಪಿಎಲ್ನಲ್ಲಿ ದಿನೇಶ್ ಕಾರ್ತಿಕ್ ಆರ್ಸಿಬಿ ತಂಡದ ಮೆಂಟರ್ ಅಥವಾ ಬ್ಯಾಟಿಂಗ್ ಕೋಚ್ ಆಗಿ ತಂಡದಲ್ಲಿದ್ದರೆ ತಂಡಕ್ಕೆ ಲಾಭವಾಗಲಿದೆ ಎನ್ನುವ ಲೆಕ್ಕಾಚಾರ ಅಭಿಮಾನಿಗಳದ್ದಾಗಿದೆ.
ಅನುಭವ ಬಳಸಿಕೊಳ್ಳುತ್ತಾ ಆರ್ಸಿಬಿ?
ಆರ್ಸಿಬಿ ತಂಡ ಈ ಮೊದಲು ಎಬಿ ಡಿವಿಲಿಯರ್ಸ್ ಅವರನ್ನು ತಂಡಕ್ಕೆ ಮೆಂಟರ್ ಆಗಿ ಮಾಡಿಕೊಳ್ಳುವ ಅವಕಾಶ ಇದ್ದರೂ ಅದನ್ನು ಬಳಸಿಕೊಳ್ಳಲಿಲ್ಲ. ಆದರೆ ದಿನೇಶ್ ಕಾರ್ತಿಕ್ ತಂಡದ ಮೆಂಟರ್ ಅಥವಾ ಬ್ಯಾಟಿಂಗ್ ಕೋಚ್ ಆಗಲು ಅತ್ಯುತ್ತಮ ಆಯ್ಕೆಯಾಗಿದ್ದಾರೆ.
ವೀಕ್ಷಕ ವಿವರಣೆಗಾರರಾಗಿ ಕೆಲಸ ಮಾಡುವ ಅವರಿಗೆ, ವಿಶ್ವದ ವಿವಿಧ ತಂಡಗಳ ಆಟಗಾರರ ಬಗ್ಗೆ ಮಾಹಿತಿ ಇರುತ್ತದೆ. ದೇಶೀಯ ಕ್ರಿಕೆಟ್ನಲ್ಲಿ ಕೂಡ ಅವರು ಆಡಿದ್ದು, ಭಾರತೀಯ ಯುವ ಆಟಗಾರರ ಬಗ್ಗೆ ಕೂಡ ಮಾಹಿತಿ ಇರುತ್ತದೆ. ಅವರ ಅಪಾರ ಅನುಭವ ಐಪಿಎಲ್ 2025 ಮೆಗಾ ಹರಾಜಿನಲ್ಲಿ ಕೂಡ ಕೆಲಸಕ್ಕೆ ಬರಲಿದೆ. ಆದರೆ ಈ ಬಗ್ಗೆ ಆರ್ಸಿಬಿ ಮ್ಯಾನೇಜ್ಮೆಂಟ್ ಯೋಚಿಸಬೇಕಿದೆ.
-
ಯುಗಾದಿ ಹಬ್ಬದಂದೇ ಆರ್ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್-ದೀಪಿಕಾ ಪಳ್ಳಿಕಲ್ ಮನೆಗೆ ಮಹಾಲಕ್ಷ್ಮಿಯ ಆಗಮನ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications