Glenn Maxwell: ಎಸ್ಆರ್ಎಚ್ ವಿರುದ್ಧ ಕಣಕ್ಕಿಳಿಯಲ್ಲ ಗ್ಲೆನ್ ಮ್ಯಾಕ್ಸ್ವೆಲ್!
ಐಪಿಎಲ್ 2024ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತವಾಗಿ ನಾಲ್ಕನೇ ಸೋಲು ಕಂಡಿದೆ, ಆಡಿರುವ 6 ಪಂದ್ಯಗಳಲ್ಲಿ ಒಂದು ಪಂದ್ಯ ಮಾತ್ರ ಗೆದ್ದಿದ್ದು ಐದು ಪಂದ್ಯಗಳಲ್ಲಿ ಸೋಲನುಭವಿಸಿದೆ. ಗ್ಲೆನ್ ಮ್ಯಾಕ್ಸ್ವೆಲ್ ಅವರ ಕಳಪೆ ಫಾರ್ಮ್ ಆರ್ ಸಿಬಿ ಸೋಲಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.
ಇದುವರೆಗೂ ಆಡಿರುವ 6 ಪಂದ್ಯಗಳಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಕೇವಲ 32 ರನ್ ಗಳಿಸಿದ್ದಾರೆ. 5.33 ಸರಾಸರಿ ಇದ್ದು, 94.11 ಸ್ಟ್ರೈಕ್ರೇಟ್ ಆಗಿದೆ. ಮೂರು ಬಾರಿ ಡಕೌಟ್ ಆಗಿದ್ದು, ಒಂದು ಪಂದ್ಯದಲ್ಲಿ ಮಾತ್ರ 28 ರನ್ ಗಳಿಸಿದ್ದಾರೆ. ಉಳಿದ ಎರಡು ಪಂದ್ಯಗಳಲ್ಲಿ ಕ್ರಮವಾಗಿ 1 ರನ್ ಮತ್ತು 3 ರನ್ ಗಳಿಸಿದ್ದಾರೆ.

ಅವರ ಕಳಪೆ ಫಾರ್ಮ್ನಿಂದ ಉಳಿದ ಬ್ಯಾಟರ್ ಗಳ ಮೇಲಿನ ಒತ್ತಡ ಹೆಚ್ಚಾಗಿದೆ. ಮುಂಬೈ ವಿರುದ್ಧ ಸೋತ ಬಳಿಕ ಆರ್ಸಿಬಿ ಮುಂದಿನ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಸೋಮವಾರ (ಏಪ್ರಿಲ್ 15) ಆರ್ ಸಿಬಿ ತವರಿನಲ್ಲಿ ಈ ಪಂದ್ಯವನ್ನಾಡಲಿದೆ.
ಗ್ಲೆನ್ ಮ್ಯಾಕ್ಸ್ವೆಲ್ ಆಡೋದು ಅನುಮಾನ
ಸನ್ರೈಸಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಆಡುವುದು ಅನುಮಾನವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಮ್ಯಾಕ್ಸ್ವೆಲ್ ಗಾಯಗೊಂಡಿದ್ದಾರೆ. ಸೂರ್ಯಕುಮಾರ್ ಅವರ ಕ್ಯಾಚ್ ಹಿಡಿಯುವ ಪ್ರಯತ್ನದಲ್ಲಿ ಮ್ಯಾಕ್ಸ್ವೆಲ್ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ.
ಆದರೆ ಅವರ ಗಾಯದ ತೀವ್ರತೆ ಹೇಗಿದೆ ಇನ್ನೂ ಗೊತ್ತಿಲ್ಲ, ಆದರೂ ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಅನುಮಾನವಾಗಿದೆ. 6 ಪಂದ್ಯಗಳಲ್ಲಿ ಸತತವಾಗಿ ವೈಫಲ್ಯವಾಗಿರುವ ಕಾರಣ, ಅವರು ಮುಂದಿನ ಪಂದ್ಯದಲ್ಲಿ ವಿಶ್ರಾಂತಿ ಪಡೆಯುವ ಸಾಧ್ಯತೆ ಇದ್ದು, ಅವರ ಬದಲಾಗಿ ಕ್ಯಾಮೆರಾನ್ ಗ್ರೀನ್ ಅಥವಾ ಲಾಕಿ ಫರ್ಗ್ಯುಸನ್ ಕಣಕ್ಕಿಳಿಯುವ ಸಾಧ್ಯತೆ ಇದೆ.
ಬೌಲಿಂಗ್ ವಿಭಾಗ ಬಲಿಷ್ಠಪಡಿಸಿಕೊಳ್ಳಿ
ಒಂದು ವೇಳೆ ಮ್ಯಾಕ್ಸ್ವೆಲ್ ಆಡದೇ ಇದ್ದರೆ, ಅವರ ಬದಲಾಗಿ ಗ್ರೀನ್ ಆಡಿಸುವ ಬದಲಿ ಲಾಕಿ ಫರ್ಗ್ಯುಸನ್ ಆಡಿಸುವ ಬಗ್ಗೆ ಚಿಂತಿಸಬೇಕಿದೆ. ಫಾಫ್ ಡುಪ್ಲೆಸಿಸ್, ರಜತ್ ಪಾಟಿದಾರ್ ಮುಂಬೈ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಫಾರ್ಮ್ ಕಂಡುಕೊಂಡಿದ್ದಾರೆ.
ಸದ್ಯದ ಮಟ್ಟಿ ಆರ್ ಸಿಬಿ ಬ್ಯಾಟಿಂಗ್ ಬಲಿಷ್ಠವಾಗೇ ಇದೆ, ಆದರೆ ಬೌಲಿಂಗ್ ವಿಭಾಗದಲ್ಲಿ ಸಾಕಷ್ಟು ಸುಧಾರಣೆ ಕಾಣಬೇಕಿದೆ. ಮ್ಯಾಕ್ಸ್ವೆಲ್ ಬದಲಾಗಿ ಲಾಕಿ ಫರ್ಗ್ಯುಸನ್ ಆಡಿದರೆ, ಬೌಲಿಂಗ್ ವಿಭಾಗಕ್ಕೆ ಬಲ ಬರಲಿದೆ. ಈ ಆವೃತ್ತಿಯಲ್ಲಿ ವಿಫಲವಾಗಿರುವ ಮೊಹಮ್ಮದ್ ಸಿರಾಜ್ ಅವರಿಗೂ ವಿಶ್ರಾಂತಿ ನೀಡಿ, ಯಶ್ ದಯಾಳ್ ಅವರನ್ನು ಆಡಿಸಿದರೆ ಚಿನ್ನಸ್ವಾಮಿ ಅಂಗಳದಲ್ಲಿ ಆರ್ ಸಿಬಿ ಗೆಲ್ಲಲು ಹೋರಾಟ ಕೊಡಬಹುದು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications