Women's Asia Cup: ಶೆಫಾಲಿ ಅಬ್ಬರದ ಆಟ: ಟೀಮ್ ಇಂಡಿಯಾ ಸೆಮಿಫೈನಲ್ಸ್ಗೆ
ಮಹಿಳಾ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಭರ್ಜರಿ ಪ್ರದರ್ಶನ ನೀಡಿದ್ದು 82 ರನ್ಗಳಿಂದ ನೇಪಾಳ ತಂಡವನ್ನು ಮಣಿಸಿ, ಸೆಮಿಫೈನಲ್ ಪ್ರವೇಶಿಸಿದೆ.
ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 3 ವಿಕೆಟ್ಗೆ 178 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ನೇಪಾಳ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 96 ರನ್ ಸೇರಿಸಲು ಮಾತ್ರ ಸೀಮಿತವಾಯಿತು. ಎ ಗುಂಪಿನಲ್ಲಿ ಆಡಿದ ಮೂರು ಪಂದ್ಯಗಳನ್ನು ಗೆದ್ದ ಭಾರತ ಟೂರ್ನಿಯ ಸೆಮಿಫೈನಲ್ ಹಂತವನ್ನು ಪ್ರವೇಶಿಸಿದೆ.

ಟೀಮ್ ಇಂಡಿಯಾದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಶೆಫಾಲಿ ವರ್ಮಾ ಹಾಗೂ ದಯಾಳನ್ ಹೇಮಲತಾ ಸೊಗಸಾದ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿಯನ್ನು ಬೇರ್ಪಡಿಸಲು ನೇಪಾಳ ಬೌಲರ್ಗಳು ವಿಫಲರಾದರು. ಈ ಜೋಡಿ 13.6 ಓವರ್ಗಳಲ್ಲಿ 122 ರನ್ ಸೇರಿಸಿ ಅಬ್ಬರಿಸಿತು. ದಯಾಳನ್ ಹೇಮಲತಾ 47 ರನ್ ಬಾರಿಸಿದ್ದಾಗ ಔಟ್ ಆದರು.
ಶೆಫಾಲಿ 81
ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 48 ಎಸೆತಗಳಲ್ಲಿ 12 ಬೌಂಡರಿ, 1 ಸಿಕ್ಸರ್ ಸಹಾಯದಿಂದ 81 ರನ್ ಬಾರಿಸಿ ಅಬ್ಬರಿಸಿದರು.
ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರಾಡ್ರಿಗಸ್ ಬಿರುಸಿನ ಆಟವಾಡಿ 5 ಬೌಂಡರಿ ನೆರವಿನಿಂದ ಅಜೇಯ 28 ರನ್ ಬಾರಿಸಿ ಅಜೇಯರಾಗಿ ಉಳಿದರು.

ಬಿಗುವಿನ ದಾಳಿ
ಟೀಮ್ ಇಂಡಿಯಾ ವನಿತೆಯರು ಭರ್ಜರಿ ಪ್ರದರ್ಶನ ನೀಡಿತು. ಭಾರತ ತಂಡದ ಬಿಗುವಿನ ದಾಳಿಗೆ ನೇಪಾಳ ವನಿತೆಯರು ರನ್ ಗಳಿಸಲು ಪರದಾಟ ನಡೆಸಿದರು. ನೇಪಾಳ ಪರ ಸೀತಾ ರಾಣಾ ಮಗರ್ (18), ಇಂದು ಬರ್ಮಾ (14), ರುಬಿನಾ ಛೆಟ್ರಿ (15), ಬಿಂದು ರಾವಲ್ (ಅಜೇಯ17) ಡಬಲ್ ಡಿಜಿಟ್ ಮುಟ್ಟಿದ್ದು ಬಿಟ್ಟರೆ, ಉಳಿದ ಆಟಗಾರ್ತಿಯರು, ಒಂದಂಕ್ಕಿಯಲ್ಲಿ ಆಟ ಮುಗಿಸಿದರು.
ಟೀಮ್ ಇಂಡಿಯಾ ಪರ ದೀಪ್ತಿ ಶರ್ಮಾ 3, ಅರುಂಧತಿ ರೆಡ್ಡಿ ಹಾಗೂ ರಾಧಾ ಯಾದವ್ ತಲಾ ಎರಡು ವಿಕೆಟ್ ಕಬಳಿಸಿದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications