Breaking; ವಿಶ್ವ ಅಥ್ಲೆಟಿಕ್ಸ್; ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ
ನವದೆಹಲಿ, ಜುಲೈ 24; ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2022ರಲ್ಲಿ ಭಾರತದ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಭಾನುವಾರ ಪುರುಷರ ಜಾವೆಲಿನ್ ಥ್ರೋ ಫೈನಲ್ ಪಂದ್ಯ ನಡೆಯಿತು.
ಫೈನಲ್ ಪಂದ್ಯದಲ್ಲಿ ನಾಲ್ಕನೇ ರೌಂಡ್ನಲ್ಲಿ 88.13 ಮೀಟರ್ ದೂರ ಜಾವೆಲಿನ್ ಥ್ರೋ ಮಾಡುವ ಮೂಲಕ ನೀರಜ್ ಚೋಪ್ರಾ ಬೆಳ್ಳಿಪದಕ ಪಡೆದರು.
ಅಮೆರಿಕದ ಒರೆಗಾನ್ನಲ್ಲಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2022 ನಡೆಯುತ್ತಿದೆ. ಭಾರತದ ನೀರಜ್ ಚೋಪ್ರಾ ಎರಡನೇ ಸುತ್ತಿನಲ್ಲಿ 82.39 ಮೀಟರ್, 3ನೇ ರೌಂಡ್ನಲ್ಲಿ 86.37 ಮೀಟರ್ ಎಸೆದರು.

ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಪಡೆದಿದ್ದ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಫೈನಲ್ನಲ್ಲಿಯೂ ಚಿನ್ನದ ಪದಕದ ನಿರೀಕ್ಷೆ ಹುಟ್ಟಿಸಿದ್ದರು. ಆದರೆ ಬೆಳ್ಳಿ ಪದಕ ಗೆದ್ದಿದ್ದಾರೆ.
ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತ ಗೆದ್ದ ಮೊದಲ ಪಕದವಿದಾಗಿದೆ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತ ಗೆದ್ದ 2ನೇ ಪದಕವಿದು. 2003ರಲ್ಲಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಪ್ಯಾರಿಸ್ನಲ್ಲಿ ನಡೆದಿತ್ತು. ಆಗ, ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು.
#WATCH | I will give my best in the Commonwealth Games, says India's Neeraj Chopra after landing the silver medal in the World Athletics Championships, speaking with ANI pic.twitter.com/9MtHUHYDqL
— ANI (@ANI) July 24, 2022
ಭಾನುವಾರ ನಡೆದ ಜಾವೆಲಿನ್ ಥ್ರೋ ಫೈನಲ್ ಪಂದ್ಯದಲ್ಲಿ ಭಾರತದ ಮತ್ತೊಬ್ಬರು ಫೈನಲಿಸ್ಟ್ ರೋಹಿತ್ ಯಾದವ್ 77.96, 78.05 ಮತ್ತು 78.72 ಮೀಟರ್ ದೂರಕ್ಕೆ ಎಸೆದರು.
ಗ್ರೆನೇಡಾದ ಆಂಡರ್ಸನ್ ಪೀಟರ್ಸ್ 90.54 ಮೀಟರ್ ದೂರ ಎಸೆದು ಚಿನ್ನದ ಪದಕ ಪಡೆದರು. ಜೆಕ್ ಜಾಕುಬ್ ವಾಡ್ಲೆಜ್ 88.09 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದರು.
-
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು












Click it and Unblock the Notifications