WPL 2026: ಆರ್ಸಿಬಿ ಡಬ್ಲ್ಯೂಪಿಎಲ್ 2026 ಟ್ರೋಫಿ ಗೆಲುವಿಗೆ ಪ್ರಮುಖ ಕಾರಣಗಳು
RCB Won WPL 2026 Trophy: ಡಬ್ಲ್ಯೂಪಿಎಲ್ 2026 ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್ ಆಯಿತು. ಹಾಗಾದ್ರೆ, ಆರ್ಸಿಬಿ ಟ್ರೋಫಿ ಗೆಲ್ಲಲು ಪ್ರಮುಖ ಕಾರಣಕರ್ತೆಯರಾದ ಆಟಗಾರ್ತಿಯರು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಫಬ್ರವರಿ 5ರಂದು ವಡೋದರಾದಲ್ಲಿ ನಾಲ್ಕನೇ ಆವೃತ್ತಿಯ ಡಬ್ಲ್ಯೂಪಿಎಲ್ ಫೈನಲ್ ಪಂದ್ಯದಲ್ಲಿ ಜೆಮಿಮಾ ರೋಡ್ರಿಗಸ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸ್ಮೃತಿ ಮಂಧಾನ ನಾಯಕತ್ವದ ಆರ್ಸಿಬಿ ತಂಡ ಮುಖಾಮುಖಿಯಾದವು. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಜೆಮಿಮಾ ರೋಡ್ರಿಗಸ್ ಪಡೆ ನಿಗದಿತ 20 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಬರೋಬ್ಬರಿ 203 ರನ್ಗಳ ಬೃಹತ್ ಮೊತ್ತ ಕಲೆಹಾಕಿತು.

ಆರ್ಸಿಬಿ ಗೆಲುವಿಗೆ ಕಾರಣಗಳೇನು?: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 204 ಬೃಹತ್ ರನ್ಗಳನ್ನು ಗುರಿಯನ್ನು ಸ್ಮೃತಿ ಮಂಧಾನ ಪಡೆಯು19.4 ಓವರ್ಗಳಲ್ಲಿ ತಲುಪಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಮೂಲಕ ಎಡರನೇ ಬಾರಿ ಟ್ರೋಫಿ ಗೆದ್ದುಕೊಂಡಿತು. 2024 ಹಾಗೂ 2026ರಲ್ಲಿ ಒಟ್ಟು ಎರಡು ಬಾರಿ ಚಾಂಪಿಯನ್ ಆಯಿತು. 2023 ಹಾಗೂ 2025ರಲ್ಲಿ ಮುಂಬೈ ಇಂಡಿಯನ್ಸ್ ಈ ಸಾಧನೆ ಮಾಡಿದೆ. ಇನ್ನೂ ಈ ಬಾರಿ ಆರ್ಸಿಬಿಗೆ ಗೆಲುವಿಗೆ ನಾಯಕಿ ಸ್ಮೃತಿ ಮಂಧಾನ ಸೇರಿದಂತೆ ಹಲವರು ಪ್ರಮುಖ ಪಾತ್ರವಹಿಸಿದ್ದಾರೆ.
ಆರ್ಸಿಬಿ ಗೆಲುವಿಗೆ ಪ್ರಮುಖ ಕಾರಣಗಳು
* ಸ್ಮೃತಿ ಮಧಾನ, ಜಾರ್ಜಿಯಾ ವೋಲ್ ಸ್ಫೋಟಕ ಬ್ಯಾಟಿಂಗ್
* ರಾಧಾ ಯಾದವ್ ಕೊನೆಯಲ್ಲಿ ಸಿಡಿಸಿದ ಎರಡು ಬೌಂಡರಿಗಳು
* ಲಾರೆನ್ ಬೆಲ್ ಮಾರಕ ಬೌಲಿಂಗ್ ದಾಳಿ
* ಲಾರೆನ್ ಬೆಲ್ ನಾಲ್ಕು ಓವರ್ ಬೌಲಿಂಗ್ ಮಾಡಿ ಡೆಲ್ಲಿ ಬ್ಯಾಟರ್ಗಳಿಗೆ ಕಾಡಿ ಕೇವಲ 19 ರನ್ಗಳನ್ನು ಮಾತ್ರ ಬಿಟ್ಟುಕೊಟ್ಟರು.
ಸ್ಫೋಟಕ ಬ್ಯಾಟ್ ಬೀಸಿದ ಸ್ಮೃತಿ ಮಂಧಾನ: ಡಬ್ಲ್ಯೂಪಿಎಲ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವಲ್ಲಿ ಹಲವು ಪ್ರಮುಖ ಕಾರಣಗಳಿವೆ. ತೀವ್ರ ಜ್ವರದಿಂದ ಬಳಲುತ್ತಿದ್ದರೂ ಸಹ ಸ್ಮೃತಿ ಮಂಧಾನ ಅವರು 41 ಎಸೆತಗಳಲ್ಲಿ 87 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಆರಂಭದಲ್ಲೇ ಆಕ್ರಮಣಕಾರಿ ಆಟವಾಡಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಒತ್ತಡದ ಫೈನಲ್ ಪಂದ್ಯದಲ್ಲಿ ಶಾಂತತೆಯಿಂದ ಆಟ ಆಡಿ ಗಮನ ಸೆಳೆದರು. ಆರಂಭದಲ್ಲಿ ಗ್ರೇಸ್ ಹ್ಯಾರಿಸ್ ವಿಕೆಟ್ ಒಪ್ಪಿಸಿದಾಗಲೂ ಯಾವುದೇ ಒತ್ತಡ ಮಾಡಿಕೊಳ್ಳದೆ, ಸ್ಮೃತಿ ಶಾಂತತೆಯಿಂದ ಆಟ ಮುಂದುವರೆಸಿದರು.
* ಸ್ಮೃತಿ ಮಂಧಾನ ಹಾಗೂ ಆಸ್ಟ್ರೇಲಿಯಾದ ಜಾರ್ಜಿಯಾ ವೋಲ್ ಉತ್ತಮ ಜೊತೆಯಾಟ ಆಡಿದರು. ಈ ಮೂಲಕ ಇವರಿಬ್ಬರು ಆರ್ಸಿಬಿ ಬೃಹತ್ ರನ್ಗಳನ್ನು ಕಲೆಹಾಕಿ ತಂಡವನ್ನು ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಅಲ್ಲದೆ, ಈ ಇಬ್ಬರೂ ಡೆಲ್ಲಿ ಬೌಲರ್ಗಳ ಬೆವರಿಳಿಸಿದಂತೂ ನಿಜ.
* ಟಾಪ್ ಆರ್ಡರ್ ನಂತರ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ನಾಲ್ಕು ಬಾಲ್ಗಳಿಗೆ ಎಂಟು ರನ್ ಬೇಕಾದಾದ ರಾಧಾ ಯಾದನ್ ಸತತ ಎರಡು ಬೌಂಡರಿಗಳನ್ನು ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿ ಅಜೇಯರಾಗಿ ಉಳಿದರು.
* ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬೃಹತ್ ಮೊತ್ತ ಹಾಕಲು ಅವಕಾಶ ನೀಡದಂತೆ ಆರ್ಸಿಬಿ ಬೌಲರ್ಗಳು ಆರಂಭದಿಂದಲೇ ಮಾರಕ ಬೌಲಿಂಗ್ ದಾಳಿ ನಡೆಸಿದರು. ಮಧ್ಯದ ಓವರ್ಗಳಲ್ಲಿ ವಿಕೆಟ್ಗಳನ್ನು ಕಬಳಿಸಿ ಎದುರಾಳಿ ಬ್ಯಾಟರ್ಗಳ ವೇಗಕ್ಕೆ ಕಡಿವಾಣ ಹಾಕಿದರು. ಇನ್ನೂ ಆರ್ಸಿಬಿ ಆಟಗಾರ್ತಿಯರು ಕ್ಯಾಚ್ಗಳು, ರನ್ಔಟ್ ಪ್ರಯತ್ನಗಳು ಹಾಗೂ ಮೈದಾನದಲ್ಲಿ ತೋರಿದ ಅದ್ಭುತ ಪ್ರದರ್ಶನ ಡೆಲ್ಲಿ ತಂಡದ ಮೇಲೆ ಹೆಚ್ಚು ಒತ್ತಡ ತಂದಿತು.
ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರು ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡಿ ಫೈನಲ್ನಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿತು. ಇದರಿಂದಲೇ ಫೈನಲ್ನಲ್ಲಿ ಆರ್ಸಿಬಿ ಗೆದ್ದು ಚಾಂಪಿಯನ್ ಆಯಿತು.
---------
ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್' ವೆಬ್ಸೈಟ್ನಲ್ಲಿದೆ
ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್, 'ಮೈಖೇಲ್' ವೆಬ್ಸೈಟ್ ಬೆಸ್ಟ್.
ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್ಬುಕ್ ಮತ್ತು ಟ್ವಿಟರ್ನಲ್ಲೂ ಮೈಖೇಲ್ ಫಾಲೊ ಮಾಡಿ.
-
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
ಐಪಿಎಲ್ 2026 ಉದ್ಘಾಟನಾ ಪಂದ್ಯಕ್ಕೂ ಮುನ್ನ ಆರ್ಸಿಬಿಯಿಂದ ಸ್ಟಾರ್ ಆಟಗಾರ ಔಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications