WPL 2026 RCB: ಗುಜರಾತ್ ಜೈಂಟ್ಸ್ ವಿರುದ್ಧ ಆರ್ಸಿಬಿ ಗೆಲುವಿಗೆ ಪ್ರಮುಖ ಕಾರಣಗಳು
WPL 2026 RCB: ಜನವರಿ 16ರ ಶುಕ್ರವಾರ ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯ ಸಾಧಿಸಿತು. ಈ ಮೂಲಕ ಡಬ್ಲ್ಯೂಪಿಎಲ್ 2026ರ ಆವೃತ್ತಿಯಲ್ಲಿ ಹ್ಯಾಟ್ರಿಕ್ ಗೆಲುವು ಖಂಡಿದೆ. ಹಾಗಾದ್ರೆ, ನಿನ್ನೆಯ ಜಯಭೇರಿಗೆ ಪ್ರಮುಖ ಕಾರಣಗಳು ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿಯು ಗುಜರಾತ್ ಜೈಂಟ್ಸ್ ವಿರುದ್ಧ 32 ರನ್ಗಳ ಭರ್ಜರಿ ಗೆಲುವು ಕಂಡಿದ್ದು, ಇದು ಆರ್ಸಿಬಿಯ ಹ್ಯಾಟ್ರಿಕ್ ಜಯ ಆಗಿದೆ. ಟಾಸ್ ಗೆದ್ದ ಗುಜರಾತ್ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ರಾಧಾ, ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್: ಮೊದಲು ಬ್ಯಾಟ್ ಬೀಸಿದ ಆರ್ಸಿಬಿ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 182 ರನ್ಗಳನ್ನು ಕಲೆಹಾಕುವ ಮೂಲಕ ಗುಜರಾತ್ ಜೈಂಟ್ಸ್ಗೆ 183 ರನ್ಗಳನ್ನು ಗುರಿ ನೀಡಿತು. ರಾಧಾ ಯಾದವ್ ಹಾಗೂ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗಿನಿಂದ ತಂಡಕ್ಕೆ ಬೃಹತ್ ರನ್ಗಳು ಹರಿದುಬಂದವು.
ರಾಧಾ ಯಾದವ್ 47 ಬಾಲ್ಗೆ 6 ಬೌಂಡರಿ, 3 ಸಿಕ್ಸ್ ಸಹಿತ 66 ರನ್ ಕಲೆಹಾಕಿದರು. ರಿಚಾ ಘೋಷ್ 28 ಬಾಲ್ಗಳಲ್ಲಿ 2 ಸಿಕ್ಸ್, 4 ಬೌಂಡರಿ ಸಹಿತ 44 ರನ್ ಕಲೆಹಾಕಿ ತಂಡಕ್ಕೆ ನೆರವಾದರು. ಇನ್ನೂ ಗ್ರೇಸ್ ಹ್ಯಾರಿಸ್ 17(8), ನಾಯಕಿ ಸ್ಮೃತಿ ಮಂಧಾನ 5(8), ದಯಾಲನ್ ಹೇಮಾಲತಾ 4(8), ಗೌತಮಿ ನಾಯಕ್ 9(6), ನಾಡಿನ್ ಡಿ ಕ್ಲರ್ಕ್ 26(12), ಅರುಂಧತಿ ರೆಡ್ಡಿ 2(2) ರನ್ ಕಲೆಹಾಕಿದರು.
ಶ್ರೇಯಾಂಕಾ ಸ್ಪಿನ್ ಮೋಡಿ: ಬಳಿಕ ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ 18.5 ಓವರ್ಗಳಿಗೆ ಬರೀ 150 ರನ್ಗಳನ್ನು ಮಾತ್ರ ಕಲೆಹಾಕಿ ಸೋಲನುಭವಿಸಿತು. ಅಷ್ಟರ ಮಟ್ಟಿಗೆ ಆರ್ಸಿಬಿ ಬೌಲರ್ಗಳು ಮಾರಕ ಬೌಲಿಂಗ್ ದಾಳಿ ನಡೆಸಿದರು. ಶ್ರೇಯಾಂಕ ಪಾಟೀಲ್ ಅವರು ಸ್ಪಿನ್ ಮೋಡಿ ಮಾಡಿ ಐದು ವಿಕೆಟ್ ಕಬಳಿಸಿ ಆರ್ಸಿಬಿ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.
ಯಾರಿಗೆ ಎಷ್ಟು ವಿಕೆಟ್?: ಶ್ರೇಯಾಂಕಾ ಪಾಟೀಲ್ 4 ಓವರ್ಗಳಲ್ಲಿ 23 ರನ್ ಬಿಟ್ಟುಕೊಟ್ಟು 5 ವಿಕೆಟ್ ಕಬಳಿಸಿ ಮಿಂಚಿದರು. ಇನ್ನೂ ಲಾರೆನ್ಸ್ ಬೆಲ್ 3, ಅರುಂಧತಿ ರೆಡ್ಡಿ ಹಾಗೂ ನಾಡಿನ್ ಡಿ ಕ್ಲರ್ಕ್ ತಲಾ ಒಂದು ವಿಕೆಟ್ ಪಡೆದುಕೊಂಡರು.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾದವು. ಎರಡು ಬಲಿಷ್ಠ ತಂಡಗಳ ನಡುವಿನ ಸ್ಪರ್ಧೆ ಭಾರೀ ಕುತೂಹಲ ಕೆರಳಿಸಿತ್ತು. ಕೊನೆಗೆ ಸ್ಮೃತಿ ಮಂಧಾನ ಬಳಗ ಗುಜರಾತ್ ತಂಡವನ್ನು ಮಣಿಸುವ ಮೂಲಕ ಈ ಆವೃತ್ತಿಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಆರ್ಸಿಬಿ ಆರಂಭದಲ್ಲಿ ನಿರೀಕ್ಷಿಸಿದಷ್ಟು ರನ್ಗಳನ್ನು ಬರಲಿಲ್ಲ. ಪವರ್ಪ್ಲೇನಲ್ಲಿ ಕೇವಲ 45 ರನ್ಗಳಿಗೆ ಪ್ರಮುಖ ನಾಲ್ಕು ವಿಕೆಟ್ಗಳನ್ನು ಕಳೆದುಕೊಂಡಿತು ಸಂಕಷ್ಟಕ್ಕೆ ಸಿಲುಕಿತು. ಬಳಿಕ ರಾಧಾ ಯಾದವ್ ಮತ್ತು ರಿಚಾ ಘೋಷ್ 5ನೇ ವಿಕೆಟ್ಗೆ ಅದ್ಭುತ ಆಟ ಮುಂದುವರೆಸಿದರು.
ರಾಧಾ ಯಾದವ್ 47 ಎಸೆತಗಳಲ್ಲಿ 66 ರನ್, ರಿಚಾ ಘೋಷ್ 28 ಎಸೆತಗಳಲ್ಲಿ 44 ರನ್ಗಳನ್ನು ಕಲೆಹಾಕಿದರು. ಇಬ್ಬರು ಆಟಗಾರ್ತಿಯರು 66 ಎಸೆತಗಳಲ್ಲಿ 5ನೇ ವಿಕೆಟ್ಗೆ 105 ರನ್ ಕಲೆಹಾಕಿದರು. ನಂತರ ನಾಡಿನ್ ಡಿ ಕ್ಲರ್ಕ್ 26 ರನ್ ಗಳಿಸಿದರು. ಈ ಮೂವರ ಸ್ಫೋಟಕ ಬ್ಯಾಟಿಂಗ್ನಿಂದ ತಂಡದ ಮೊತ್ತ 20 ಓವರ್ಗಳಲ್ಲಿ 7 ವಿಕೆಟ್ಗಳಿಗೆ 182 ರನ್ಗಳಿಗೆ ತಲುಪಿತು.
ಬ್ಯಾಟಿಂಗ್ನಲ್ಲಿ ಗುಜರಾತ್ ಜೈಂಟ್ಸ್ ಉತ್ತಮ ಆರಂಭ ಪಡೆದುಕೊಂಡಿತು. ಆದರೂ ಆರ್ಸಿಬಿ ಬೌಲರ್ಗಳು ಎದುರಾಳಿ ತಂಡದ ಬ್ಯಾಟರ್ಗಳನ್ನು ನಿಯಂತ್ರಣದಲ್ಲಿಡುವ ಮೂಲಕ ಕಡಿಮೆ ರನ್ಗಳಿಗರ ಕಟ್ಟಿಹಾಕಿದರು. ಶ್ರೇಯಾಂಕಾ ಪಾಟೀಲ್ ಮಾರಕ ಬೌಲಿಂಗ್ ದಾಳಿ ನಡೆಸಿ, 3.5 ಓವರ್ಗಳಲ್ಲಿ ಕೇವಲ 23 ರನ್ಗಳನ್ನು ಬಿಟ್ಟುಕೊಟ್ಟು 5 ವಿಕೆಟ್ಗಳನ್ನು ಪಡೆದರು.
ಆರ್ಸಿಬಿ ಗೆಲುವಿಗೆ ಪ್ರಮುಖ ಕಾರಣ
* ಸ್ಫೋಟಕ ಬ್ಯಾಟ್ ಬೀಸಿದ ರಾಧಾ ಯಾದವ್, ರಿಚಾ ಘೋಷ್, ನಾಡಿನ್ ಡಿ ಕ್ಲರ್ಕ್.
* ಮಾರಕ ಬೌಲಿಂಗ್ ದಾಳಿ ನಡೆಸಿದ ಶ್ರೇಯಂಕಾ ಪಾಟೀಲ್, ಲಾರೆನ್ ಬೆಲ್.
* ಗುಜರಾತ್ ಜೈಂಟ್ಸ್ ಬ್ಯಾಟರ್ಗಳನ್ನು ಕಡಿಮೆ ರನ್ಗಳಿಗೆ ಕಟ್ಟಿಹಾಕಿದ ಆರ್ಸಿಬಿ ಬೌಲರ್ಗಳು.
* ಮಧ್ಯಮ ಕ್ರಮಾಂಕದದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ.
* ಐದು ವಿಕೆಟ್ ಕಬಳಿಸಿದ ಕನ್ನಡತಿ ಶ್ರೇಯಂಕಾ ಪಾಟೀಲ್.
-
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ -
Namma Metro: ಐಪಿಎಲ್ ಪಂದ್ಯದ ದಿನ ದಟ್ಟಣೆ ಇಲ್ಲದೇ ಓಡಾಡಿ, ಮೆಟ್ರೋ ಸೇವಾವಧಿ ವಿಸ್ತರಣೆ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ












Click it and Unblock the Notifications