WTC Final: ಮೀಸಲು ದಿನಕ್ಕೆ ಐಪಿಎಲ್ 2023 ಫೈನಲ್: ಭಾರತ ಟೆಸ್ಟ್ ತಂಡಕ್ಕೆ ಸಂಕಷ್ಟ
ಭಾನುವಾರ ನಡೆಯಬೇಕಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ಸೋಮವಾರಕ್ಕೆ ಮುಂದೂಡಲಾಗಿದೆ. ಪಂದ್ಯ ಮುಂದೂಡಿರುವುದು ಭಾರತ ತಂಡಕ್ಕೆ ಹೊಸ ಸಂಕಷ್ಟ ತಂದೊಡ್ಡಿದೆ.
ಜೂನ್ 7 ರಿಂದ 11 ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಈ ಪ್ರಶಸ್ತಿಗಾಗಿ ಸೆಣೆಸಲಿವೆ. ಇಂಗ್ಲೆಂಡ್ನ ಓವಲ್ನಲ್ಲಿ ಈ ಪಂದ್ಯ ನಡೆಯಲಿದೆ. ಭಾರತ ತಂಡದ ಆಟಗಾರರು ಈಗಾಗಲೇ ಇಂಗ್ಲೆಂಡ್ಗೆ ತೆರಳಿದ್ದು ಅಭ್ಯಾಸ ಆರಂಭಿಸಿದ್ದಾರೆ.

ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಫೈನಲ್ನಲ್ಲಿ ಸೆಣೆಸಲಿದ್ದು, ಮೊಹಮ್ಮದ್ ಶಮಿ, ಶುಭಮನ್ ಗಿಲ್ ಮತ್ತು ರವೀಂದ್ರ ಜಡೇಜಾ ಅನಿವಾರ್ಯವಾಗಿ ಭಾರತದಲ್ಲೇ ಉಳಿದುಕೊಳ್ಳಬೇಕಾಗಿದೆ. ಇಂದು ಪಂದ್ಯ ಮುಗಿದ ಬಳಿಕ ಅವರು ಇಂಗ್ಲೆಂಡ್ಗೆ ತೆರಳಲಿದ್ದು, ಅಲ್ಲಿನ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಕಡಿಮೆ ಸಮಯ ಇರುವುದರಿಂದ ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.
ಇದೇ ಮೊದಲ ಬಾರಿಗೆ ಐಪಿಎಲ್ ಫೈನಲ್ ಮೀಸಲು ದಿನಕ್ಕೆ
16 ವರ್ಷಗಳ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಪಂದ್ಯ ಮೀಸಲು ದಿನಕ್ಕೆ ಮುಂದೂಡಲಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಫೈನಲ್ ನಡೆಯಬೇಕಿತ್ತು. ಆದರೆ ಪಂದ್ಯದ ಆರಂಭಕ್ಕೆ ಮುನ್ನವೇ ಶುರುವಾದ ಮಳೆ ರಾತ್ರಿ 11 ಗಂಟೆಯ ನಂತರವು ನಿಲ್ಲದ ಕಾರಣ ಅನಿವಾರ್ಯವಾಗಿ ಪಂದ್ಯವನ್ನು ರದ್ದು ಮಾಡಿ, ಸೋಮವಾರಕ್ಕೆ ಮುಂದೂಡಲಾಗಿದೆ.
ಇಂದು ಕೂಡ ಮಳೆಯಿಂದಾಗಿ ಪಂದ್ಯ ರದ್ದಾದರೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ತಂಡವನ್ನು ಚಾಂಪಿಯನ್ ಎಂದು ಘೋಷಣೆ ಮಾಡಲಾಗುತ್ತದೆ. ಮಹೇಂದ್ರ ಸಿಂಗ್ ಧೋನಿ ತಮ್ಮ 250 ನೇ ಐಪಿಎಲ್ ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ. ಈ ದಾಖಲೆ ಮಾಡಿದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆ ಕೂಡ ಅವರದ್ದಾಗಲಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಭಾರತ ಸಿದ್ಧತೆ
ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ಸಿದ್ದತೆ ಮಾಡಿಕೊಳ್ಳಲು ಭಾರತ ತಂಡದ ಆಟಗಾರರು ಈಗಾಗಲೇ ಇಂಗ್ಲೆಂಡ್ಗೆ ಹೋಗಿದ್ದಾರೆ. ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಕೂಡ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದ ನಂತರ ಇಂಗ್ಲೆಂಡ್ಗೆ ಹೋಗಿದ್ದು ಅಭ್ಯಾಸ ಮಾಡುತ್ತಿದ್ದಾರೆ. ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕೂಡ ತಂಡವನ್ನು ಸೇರಿಕೊಂಡಿದ್ದಾರೆ.
ಕಳೆದ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಭಾರತ, ಈ ಬಾರಿ ಚಾಂಪಿಯನ್ ಆಗುವ ವಿಶ್ವಾಸದಲ್ಲಿದೆ. ಇನ್ನು ಆಸ್ಟ್ರೇಲಿಯಾ ಕೂಡ ಸಕಲ ರೀತಿಯಲ್ಲಿ ಸಜ್ಜಾಗಿದ್ದು, ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್).
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications