WTC Final: ಲಿಯಾನ್ ಮತ್ತು ಅಶ್ವಿನ್ ಬಗ್ಗೆ ದ್ರಾವಿಡ್ ಕನ್ನಡದಲ್ಲಿ ಏನ್ ಹೇಳಿದ್ರು ಗೊತ್ತಾ?
ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕನ್ನಡ ಮಾತಾಡ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನು ಗೆಲ್ಲುವ ಉತ್ಸಾಹದಲ್ಲಿರುವ ಅವರು, ಕನ್ನಡದಲ್ಲಿ ಮಾತನಾಡಿದ್ದಾರೆ.
ಭಾರತ ತಂಡದ ರವಿಚಂದ್ರನ್ ಅಶ್ವಿನ್ ಮತ್ತು ಆಸ್ಟ್ರೇಲಿಯಾದ ನಾಥನ್ ಲಿಯಾನ್ ಸದ್ಯ ಕ್ರಿಕೆಟ್ ಜಗತ್ತಿನ ಶ್ರೇಷ್ಠ ಸ್ಪಿನ್ನರ್ ಗಳು. ಇಬ್ಬರೂ ಕೂಡ ತಮ್ಮ ತಂಡವನ್ನು ಸಾಕಷ್ಟು ಪಂದ್ಯಗಳಲ್ಲಿ ಗೆಲ್ಲಿಸಿದ್ದಾರೆ. ತಮ್ಮ ಮಾರಕ ಬೌಲಿಂಗ್ ಮೂಲಕ ಜಗತ್ತಿನ ಎಂತಹ ಬ್ಯಾಟರ್ ಗಳನ್ನಾದರೂ ಕಟ್ಟಿ ಹಾಕುವ ಸಾಮರ್ಥ್ಯ ಹೊಂದಿದ್ದಾರೆ.

ಭಾರತ ತಂಡದ ಮುಖ್ಯ ಕೋಚ್ ಈ ಇಬ್ಬರು ದಿಗ್ಗಜ ಬೌಲರ್ ಗಳ ಬಗ್ಗೆ ಮಾತನಾಡಿದ್ದಾರೆ. "ರವಿಚಂದ್ರನ್ ಅಶ್ವಿನ್ ಮತ್ತು ನಾಥನ್ ಲಿಯಾನ್ ಇಬ್ಬರು ಶ್ರೇಷ್ಠ ಸ್ಪಿನ್ ಬೌಲರ್ ಗಳು, ಇಬ್ಬರ ನಡುವೆ ವ್ಯತ್ಯಾಸ ಏನಂದ್ರೆ, ಅಶ್ವಿನ್ ಸ್ವಲ್ಪ ಸೈಡ್ ಸ್ಪಿನ್ನಲ್ಲಿ ಹಾಕ್ತಾರೆ, ನಾಥನ್ ಲಯಾನ್ ಸ್ವಲ್ಪ ಓವರ್ ಸ್ಪಿನ್ನಲ್ಲಿ ಹಾಕ್ತಾರೆ" ಎಂದು ಹೇಳಿದರು.
"ಇಬ್ಬರು ಯಾವಾಗಲೂ ಸ್ಥಿರವಾಗಿ ಬೌಲಿಂಗ್ ಮಾಡುತ್ತಾರೆ, ಲೆಂತ್ ಕಂಟ್ರೋಲ್ ಮಾಡ್ತಾರೆ, ಮಾಜಿ ಕ್ರಿಕೆಟಿಗೆ ಪ್ರಸನ್ನ ಅವರು ಹೇಳುವಂತೆ, ಲೆಂತ್ ಯಾವಾಗಲೂ ಕಡ್ಡಾಯವಾಗಿರುತ್ತದೆ, ಲೈನ್ ಬೌಲರ್ ಗಳ ಆಯ್ಕೆಯಾಗಿರುತ್ತದೆ, ಇಬ್ಬರೂ ಕೂಡ ಲೆಂತ್ ಅನ್ನು ಅದ್ಭುತವಾಗಿ ನಿಭಾಯಿಸಿದ್ದಾರೆ. ಬ್ಯಾಟರ್ ಗಳನ್ನು ನೋಡಿಕೊಂಡು, ಲೆಂತ್ ಅನ್ನು ಬದಲಾಯಿಸ್ತಾರೆ, ಲೆಂತ್ ಮೇಲೆ ನಿಮಗೆ ಯಾವಗಲೂ ನಿಯಂತ್ರಣ ಇರಬೇಕು" ಎಂದು ಹೇಳಿದರು.
"ಇತರೆ ಸ್ಪಿನ್ ಬೌಲರ್ ಗಳಿಗಿಂತ ಅಶ್ವಿನ್ ಹಾಗೂ ನಾಥನ್ ಲಿಯಾನ್ರನ್ನು ಶ್ರೇಷ್ಠವಾಗಿಸಿರೋದು ಅವರ ಲೆಂತ್. ನಾಥನ್ ಲಿಯಾನ್ ಬೌನ್ಸ್ ಅನ್ನು ಬಳಸುತ್ತಾರೆ. ಇಬ್ಬರ ಲೆಂತ್ ಕೂಡ ಅದ್ಭುತವಾಗಿದೆ" ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಆಡುವ ಬಳಗದಿಂದ ಅಶ್ವಿನ್ ಕೈಬಿಟ್ಟ ಟೀಂ ಇಂಡಿಯಾ
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ಭಾರತ ತಂಡ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ರನ್ನು ಕೈಬಿಟ್ಟಿದೆ. ನಾಲ್ಕು ವೇಗಿಗಳು ಒಬ್ಬ ಸ್ಪಿನ್ನರ್ ಜೊತೆ ಕಣಕ್ಕಿಳಿದಿದ್ದು, ಅಶ್ವಿನ್ ತಂಡದಿಂದ ಹೊರಗುಳಿದಿದ್ದಾರೆ. ಅನುಭವಿ ಆಟಗಾರ ಅಶ್ವಿನ್ರನ್ನು ಕೈಬಿಟ್ಟಿರುವುದಕ್ಕೆ ಹಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಉಮೇಶ್ ಯಾದವ್ ಬದಲಾಗಿ ಅಶ್ವಿನ್ ಅವರನ್ನೇ ಆಡಿಸಬೇಕಿತ್ತು ಎಂದು ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications