Year Ender 2025: ವಿರಾಟ್ ಕೊಹ್ಲಿ ಪಾಲಿಗೆ 2025 ಎಂದೆಂದಿಗೂ ಮರೆಯಲಾಗದ ವರ್ಷ...
ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ ದೊರೆ, ಕ್ರಿಕೆಟ್ ದೇವರು ಅಂತಾ ಸಚಿನ್ ತೆಂಡೂಲ್ಕರ್ಗೆ ಬಿರುದು ಕೊಟ್ಟ ಜನರೇ ವಿರಾಟ್ ಕೊಹ್ಲಿಗೆ ಕಿಂಗ್ ಅಂತಾ ಕರೆಯುತ್ತಾರೆ. ಕ್ರಿಕೆಟ್ ಅಖಾಡದಲ್ಲಿ ದಾಖಲೆಗಳ ಜೊತೆಗೆ ಜನರನ್ನು ಸೆಳೆಯುವ ಕಲೆ ಕೂಡ ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಅವರಿಗೆ ಚನ್ನಾಗಿ ಗೊತ್ತು ಅಂತಾ ವಿರೋಧಿಗಳೆಲ್ಲಾ ಹೇಳುತ್ತಾರೆ. ಆದರೆ ವಿರಾಟ್ ಕೊಹ್ಲಿ ಫೀಲ್ಡ್ಗೆ ಎಂಟ್ರಿ ಕೊಟ್ಟರೆ ಸಾಕು ಜನರೇ ಓಡಿ, ಓಡಿ ಬರ್ತಾರೆ ಅನ್ನೋದು ಅಭಿಮಾನಿಗಳ ಮಾತು. ಇಷ್ಟೆಲ್ಲದರ ನಡುವೆ, ವಿರಾಟ್ ಕೊಹ್ಲಿ ಪಾಲಿಗೆ 2025 ಎಂದೆಂದಿಗೂ ಮರೆಯಲಾಗದ ವರ್ಷ...
ಹೌದು, ವಿರಾಟ್ ಕೊಹ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಫೀಲ್ಡ್ಗೆ ಎಂಟ್ರಿ ಕೊಟ್ಟರೆ ಸಾಕು ಅಭಿಮಾನಿಗಳ ಎದೆಯಲ್ಲಿ ಕಿಚ್ಚು ಹೊತ್ತಿಕೊಳ್ಳುತ್ತದೆ. ವಿರಾಟ್ ಕೊಹ್ಲಿ ಹೆಸರು ಕೇಳಿದರೆ ದಿಗ್ಗಜ ಬೌಲರ್ ಕೂಡ ಒಂದು ಕ್ಷಣ ನಡುಗುವುದು ಗ್ಯಾರಂಟಿ. ಇಂತಿಪ್ಪ ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಜೀವನದಲ್ಲೇ ಮರೆಯಲು ಆಗದ ವರ್ಷ 2025, ಏಕೆಂದರೆ 18 ವರ್ಷಗಳಿಂದ ತನ್ನ ಎದೆಯಲ್ಲಿ ಇಟ್ಟುಕೊಂಡ ಬೆಂಕಿ ಆರಿದ ಸಮಯ. ಐಪಿಎಲ್ ಕಪ್ ಗೆದ್ದು ಕೊಹ್ಲಿ ಸಂಭ್ರಮಿಸಿದ ಘಳಿಗೆ ಇದೇ 2025ರ ಜೊತೆ ಬೆರೆತು ಹೋಗಿದೆ!

ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ!
ವಿರಾಟ್ ಕೊಹ್ಲಿ ಆರ್ಸಿಬಿ ತಂಡಕ್ಕಾಗಿ ಕಳೆದ 18 ವರ್ಷಗಳಿಂದ ಸತತವಾಗಿ ಆಡಿ ಕಪ್ ಗೆದ್ದು & ಕನ್ನಡಿಗರ ಕನಸು ನನಸು ಮಾಡಿದ್ದರು. ಇಷ್ಟೇ ಅಲ್ಲ ಇದರ ಜೊತೆಗೆ ಮರಳಿ ತಮ್ಮ ಹಳೇ ಆಟಕ್ಕೆ ಎಂಟ್ರಿ ಕೊಟ್ಟು, ಸಾಲು ಸಾಲಾಗಿ 2 ಶತಕ ಬಾರಿಸಿದ್ದರು. ದಕ್ಷಿಣ ಆಫ್ರಿಕಾ ಎದುರು ಈ ಸಾಧನೆ ಮಾಡಿ ಇಡೀ ಜಗತ್ತಿನ ಕ್ರಿಕೆಟ್ ಅಖಾಡದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದರು.
100ನೇ ಶತಕ ಬಾರಿಸುವುದು ಪಕ್ಕಾ!
ಇಷ್ಟೆಲ್ಲಾ ಸಾಧನೆ ನಡುವೆ ಟೆಸ್ಟ್ ಕ್ರಿಕೆಟ್ ಬಿಟ್ಟು ಹೊರಟಿದ್ದು ಅಭಿಮಾನಿಗಳಿಗೆ ನೋವು ತಂದಿದೆ. ಅಲ್ಲದೆ ಗೌತಮ್ ಗಂಭೀರ್ ವಿರುದ್ಧ ಕೂಡ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಎಲ್ಲವನ್ನೂ ಮೀರಿ ಆಟ ಆಡುವ ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವಕಪ್ ಆಡುವುದು ಕೂಡ ಗ್ಯಾರಂಟಿ ಆಗಿದೆ. ಹಾಗೇ ಕ್ರಿಕೆಟ್ ಇತಿಹಾಸದಲ್ಲಿ 100ನೇ ಶತಕ ಬಾರಿಸುವುದು ಕೂಡ ಬಹುತೇಕ ಪಕ್ಕಾ ಆಗಿ ಹೋಗಿದ್ದು, ವಿರಾಟ್ ಕೊಹ್ಲಿ ಅವರಿಗಾಗಿ ಅಭಿಮಾನಿಗಳ ಹೃದಯ ಸದಾ ಮಿಡಿಯುತ್ತಿರುತ್ತದೆ...
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications