Yuzvendra Chahal: ಯುಜ್ವೇಂದ್ರ ಚಹಾಲ್ 'ಕ್ಯೂಟ್' ಕಾಮೆಂಟ್, ತಾನಿಯಾ ಚಟರ್ಜಿ ವಿಡಿಯೋ ವೈರಲ್
Yuzvendra Chahal: ಭಾರತೀಯ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರು ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲಿದ್ದಾರೆ. ಇದೀಗ ಚಹಾಲ್ ನಟಿ ಮತ್ತು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ತಾನಿಯಾ ಚಟರ್ಜಿ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಕಳುಹಿಸಿದ್ದಾರೆ ಎಂಬ ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ನಟಿ ತಾನಿಯಾ ಚಟರ್ಜಿ ಅವರು ಇತ್ತೀಗೆ ನಡೆದ ಸಂವಾದವೊಂದರಲ್ಲಿ ತಮ್ಮ ಫೋನ್ ತೋರಿಸುತ್ತಾ, ಯುಜ್ವೇಂದ್ರ ಚಹಾಲ್ ಅವರು ತಮಗೆ ಇನ್ಸ್ಟಾಗ್ರಾಮ್ನಲ್ಲಿ ಮೆಸೇಜ್ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಚಹಾಲ್ ಅವರು ತಾನಿಯಾ ಅವರ ವಿಡಿಯೋ ಒಂದನ್ನು ನೋಡಿ 'ನೀವು ಕ್ಯೂಟ್ ಆಗಿದ್ದೀರಿ' ಎಂದು ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.

ಚಹಾಲ್ ಸಂದೇಶದ ಬಗ್ಗೆ ತಾನಿಯಾ ಹೇಳಿದ್ದೇನು?
ಚಹಾಲ್ ಅವರ ಈ ಸಂದೇಶದ ಬಗ್ಗೆ ಮಾತನಾಡಿದ ತಾನಿಯಾ, "ಕ್ಯೂಟ್ ಎಂದು ಹೇಳುವುದು ಸಾಮಾನ್ಯ ವಿಷಯ, ನನಗೆ ಅನೇಕರು ಹೀಗೆ ಹೇಳುತ್ತಾರೆ" ಎಂದು ಹಗುರವಾಗಿ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ, ತಾವು ಆ ಮೆಸೇಜ್ ಅನ್ನು ತುಂಬಾ ತಡವಾಗಿ ಗಮನಿಸಿದ್ದರಿಂದ ತಕ್ಷಣವೇ ಯಾವುದೇ ಉತ್ತರ ನೀಡಿಲ್ಲ ಎಂದು ತಿಳಿಸಿದ್ದಾರೆ.
ಯಾರು ಈ ತಾನಿಯಾ ಚಟರ್ಜಿ?
ತಾನಿಯಾ ಚಟರ್ಜಿ ಅವರು 'ಗಂಧಿ ಬಾತ್' ಮತ್ತು 'ತಿತ್ಲಿಯಾನ್' ಅಂತಹ ಕೆಲವು ಹಿಂದಿ ವೆಬ್ ಸಿರೀಸ್ಗಳಲ್ಲಿ ನಟಿಸಿ ಹೆಸರು ಮಾಡಿದ್ದಾರೆ. ಇನ್ನೂ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದ ಬಗ್ಗೆ ನೆಟ್ಟಿಗರಿಂದ ಮಿಶ್ರಪ್ರತಿಕ್ರಿಯೆಗಳು ಬಂದಿವೆ. ಕೆಲವರು "ಒಬ್ಬ ಕ್ರಿಕೆಟಿಗರಾಗಿ ಈ ರೀತಿ ಸಂದೇಶ ಕಳುಹಿಸುವುದು ಸರಿಯಲ್ಲ," ಎಂದು ಟೀಕಿಸಿದರೆ, ಇನ್ನು ಕೆಲವರು "ಕ್ಯೂಟ್" ಎಂದು ಹೇಳುವುದು ಸಾಮಾನ್ಯ ಪ್ರಶಂಸೆಯಾಗಿದೆ. ನಟಿ ಇದನ್ನು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ," ಎಂದು ಕಿಡಿಕಾರಿದ್ದಾರೆ.
ಚಹಾಲ್ ವೈಯಕ್ತಿಕ ಜೀವನ
ಚಹಾಲ್ ಅವರ ವೈಯಕ್ತಿಕ ಜೀವನ ಈ ಹಿಂದೆಯೂ ಸುದ್ದಿಯಲ್ಲಿತ್ತು. ವಿಶೇಷವಾಗಿ ಅವರ ಮತ್ತು ಧನಶ್ರೀ ವರ್ಮಾ ಅವರ ವಿಚ್ಛೇದನದ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಾಗಿದ್ದವು. ಇನ್ನೂ ಇದೀಗ ಪ್ರಸ್ತುತ ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್ ಪರ ಆಡುತ್ತಿರುವ ಯುಜ್ವೇಂದ್ರ ಚಹಲ್ ಅವರು ಈಗ ವೈರಲ್ ಆಗುತ್ತಿರುವ ವಿಡಿಯೋದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಅಥವಾ ಸ್ಪಷ್ಟನೆ ನೀಡಿಲ್ಲ.
-
ಮೈದಾನದಲ್ಲಿ ಲೆಜೆಂಡ್ ಬೌಲರ್ಗಳ ಮೇಲೆ ಸವಾರಿ, ಬಸ್ನಲ್ಲಿ ಸ್ವಿಚ್, ಲೈಟ್, ಎಸಿ ಜೊತೆ ಕಿಲಾಡಿ ಆಟ; ವೈಭವ್ ವಿಡಿಯೋ ಭಾರಿ ವೈರಲ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications