ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ ಎಸ್ ಆರ್ ಹಿರೇಮಠ
ಧಾರವಾಡ, ಅಕ್ಟೋಬರ್ 5: ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಗುರುವಾರ ಹುಬ್ಬಳ್ಳಿಯಲ್ಲಿ ಘೋಷಿಸಿದ್ದಾರೆ. ಜನ ಸಂಗ್ರಾಮ ಪರಿಷತ್ ನ ಮಹಾಮೈತ್ರಿ ರಚಿಸಿಕೊಂಡು ಚುನಾವಣೆ ರಾಜಕಾರಣಕ್ಕೆ ಇಳಿಯುವುದಾಗಿ ಅವರು ತಿಳಿಸಿದ್ದಾರೆ.
ರಾಜಕಾರಣಿಗಳು, ಅವರ ಸಂಬಂಧಿಕರ ಅಕ್ರಮಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ಮನೆ ಮಾತಾಗಿದ್ದ ಎಸ್.ಆರ್.ಹಿರೇಮಠ ಧಾರವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದು ಖಚಿತ ಎಂದು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮಹಾಮೈತ್ರಿ ಅಡಿಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸಮಾಜದಲ್ಲಿ ಉತ್ತಮ ಹೆಸರು ಇರುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತೇವೆ. ನಮ್ಮೊಂದಿಗೆ ಸ್ವರಾಜ್ ಇಂಡಿಯಾ, ಕರ್ನಾಟಕ ಶಕ್ತಿ ಸಂಘಟನೆ, ಆಮ್ ಆದ್ಮಿ ಪಾರ್ಟಿ, ಸಿಪಿಐ, ಸಿಪಿಎಂ ಪಕ್ಷಗಳು ಒಂದಾಗಿ ಬರಲು ಮುಂದಾಗಿವೆ ಎಂದು ತಿಳಿಸಿದರು.
ಇದೇ ವೇಳೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ತಮ್ಮ ರಾಜ್ಯದ ಸರಕಾರಿ ಆಸ್ಪತ್ರೆಗಳನ್ನು ಸರಿಯಾಗಿ ಇಟ್ಟುಕೊಳ್ಳದ ಯೋಗಿ ಆದಿತ್ಯನಾಥ್ ಕೇರಳಕ್ಕೆ ಬಂದು, ಅಲ್ಲಿನ ಸರಕಾರಕ್ಕೆ ಬುದ್ಧಿ ಹೇಳುವುದನ್ನು ನೋಡಿದರೆ ಆರು ಮಕ್ಕಳನ್ನು ಹಡೆದವಳ ಮುಂದೆ ಮೂರು ಮಕ್ಕಳನ್ನು ಹಡೆದವಳು ಪಾಠ ಮಾಡಿದಂತೆ ಇದೆ ಎಂದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications