ಜಮ್ಮುವಿನಲ್ಲಿ ಇಬ್ಬರು ಹಿಜ್ಬುಲ್ ಭಯೋತ್ಪಾದಕರ ಎನ್ಕೌಂಟರ್
ಶ್ರೀನಗರ, ಮೇ 19: ಜಮ್ಮು ಮತ್ತು ಕಾಶ್ಮೀರನ ಶ್ರೀನಗರ ವ್ಯಾಪ್ತಿಯ ನವಾ ಕಡಲ್ ಪ್ರದೇಶದಲ್ಲಿ ಇಂದು ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಗೆ ಹಿಜ್ಬುಲ್ ಮುಜಾಹಿದ್ದೀನ್ ನ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಎರಡು ಎಕೆ 47 ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಈ ಕಾರ್ಯಾಚರಣೆಯ ಸಮಯದಲ್ಲಿ ಮೂವರು ಭದ್ರತಾ ಪಡೆ ಸಿಬ್ಬಂದಿಗಳು ಸಹ ಗಾಯಗೊಂಡಿದ್ದಾರೆ.
ಶ್ರೀನಗರದಲ್ಲಿ ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ: ಇಂಟರ್ನೆಟ್ ಸೇವೆ ಸ್ಥಗಿತ
ಹಿಜ್ಬುಲ್ ಉಗ್ರರ ಅಡಗುತಾಣದ ಮೇಲೆ ಮಧ್ಯರಾತ್ರಿ ಸುಮಾರಿಗೆ ಜಮ್ಮು ಕಾಶ್ಮೀರ ರಾಜ್ಯ ಪೊಲೀಸ್ ಮತ್ತು ಕೇಂದ್ರ ಪೊಲೀಸ್ ರಿಸರ್ವ್ ಫೋರ್ಸ್ ನ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಆರಂಭಿಸಿ ಉಗ್ರರನ್ನು ಸದೆ ಬಡೆದಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೋಲಿಸ್ ಅಧಿಕಾರಿ ತಿಳಿಯಪಡಿಸಿದ್ದಾರೆ. ಶ್ರೀನಗರದ ಕನೆಮಾಜಾರ್ ನವಾಕಡಾಲ್ ಪ್ರದೇಶದಲ್ಲಿ ಎನ್ಕೌಂಟರ್ ಮುಂದುವರೆದಿದೆ.