ಶ್ರೀನಗರದ ಬಳಿ ಉಗ್ರರಿಂದ ಗುಂಡಿನ ದಾಳಿ: ಇಬ್ಬರು ಯೋಧರು ಹುತಾತ್ಮ
ಶ್ರೀನಗರ, ನವೆಂಬರ್ 26: ಜಮ್ಮು ಕಾಶ್ಮೀರದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ತಂಡದ ಮೇಲೆ ಮೂವರು ಉಗ್ರರ ತಂಡ ಏಕಾಏಕಿ ದಾಳಿ ನಡೆಸಿತ್ತು. ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಉಳಿಯಲಿಲ್ಲ.
26/11 ಮುಂಬೈ ದಾಳಿಯಲ್ಲೂ ತನ್ನ ಉಪಸ್ಥಿತಿ ಒಪ್ಪಿಕೊಂಡ ಪಾಕಿಸ್ತಾನ
2008ರ ನವೆಂಬರ್ 26ರಂದು ಉಗ್ರರು ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಸಿದ್ದರು. ಈ ಉಗ್ರ ದಾಳಿ ನಡೆದು ಇಂದಿಗೆ 12 ವರ್ಷಗಳಾದ ಹಿನ್ನೆಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಸದ್ಯ ಗುಂಡಿನ ದಾಳಿ ನಡೆದ ಜಾಗವನ್ನು ಭಾರತೀಯ ಸೇನೆ ಸುತ್ತುವರೆದಿದ್ದು ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
26/11 ಮುಂಬೈ ದಾಳಿಯಲ್ಲಿ ತನ್ನ ದೇಶದ 11 ಭಯೋತ್ಪಾದಕರ ಉಪಸ್ಥಿತಿಯನ್ನು ಪಾಕಿಸ್ತಾನದ ಉನ್ನತ ತನಿಖಾ ಸಂಸ್ಥೆ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಒಪ್ಪಿಕೊಂಡಿತ್ತು.
ಇತ್ತೀಚೆಗಷ್ಟೇ ಪುಲ್ವಾಮಾ ದಾಳಿಯನ್ನು ಮಾಡಿಸಿದವರೇ ನಾವು ಎಂದು ಪಾಕಿಸ್ತಾನದ ಸಚಿವರೊಬ್ಬರು ಬಹಿರಂಗವಾಗಿ ಒಪ್ಪಿಕೊಂಡಿದ್ದರು.
Recommended Video
ಹಫೀಜ್ ಸಯೀದ್ ಯುಎನ್ ಪಟ್ಟಿಮಾಡಿದ ಅಂತರರಾಷ್ಟ್ರೀಯ ಭಯೋತ್ಪಾದಕ, 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್, ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕಳೆದ ವರ್ಷ 40 ಕ್ಕೂ ಹೆಚ್ಚು ಭಾರತೀಯ ಅರೆಸೈನಿಕ ಪಡೆಗಳನ್ನು ಕೊಂದ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಪಟ್ಟಿ ಮಾಡಲಾಗಿತ್ತು.