ಶೋಪಿಯಾನ್ ಎನ್ಕೌಂಟರ್: ಲಷ್ಕರ್ ಇ ತೊಯ್ಬಾದ ಮೂವರು ಉಗ್ರರ ಹತ್ಯೆ
ಶ್ರೀನಗರ, ಮಾರ್ಚ್ 22: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ.
ಸೋಮವಾರ ನಸುಕಿನ ಜಾವ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಲಷ್ಕರ್ ಇ ತೊಯ್ಬಾ ಉಗ್ರರ ಹತ್ಯೆಯಾಗಿದೆ. ಎನ್ ಕೌಂಟರ್ ನಡೆದ ಸ್ಥಳದಲ್ಲಿ ಮತ್ತಿಬ್ಬರು ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅನಂತ್ನಾಗ್ನಲ್ಲಿ ನಾಲ್ವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಕಾಶ್ಮೀರ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಅನಂತ್ನಾಗ್ನಲ್ಲಿ ಭಾರತೀಯ ಯೋಧರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದರು, . ಅನಂತ್ ನಾಗ್ ಜಿಲ್ಲೆಯ ಶ್ರೀಗುಫ್ವಾರಾದ ಶಾಲ್ಗುಲ್ ಅರಣ್ಯ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದ್ದು, ನಾಲ್ಕು ಮಂದಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿತ್ತು.
Recommended Video
ಇನ್ನೂ ಕೂಡ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಮತ್ತೆ 3 ರಿಂದ ನಾಲ್ಕ ಮಂದಿ ಉಗ್ರರು ಅಡಗಿ ಕುಳಿತು ದಾಳಿ ಮಾಡುತ್ತಿದ್ದರು. ಫೆ.14 ಭಾರತಕ್ಕೆ ಕರಾಳ ದಿನ, ಯೋಧರ ಬಲಿದಾನ ಸ್ಮರಣೀಯ ಇನ್ನು ಈ ಹಿಂದೆ ಶ್ರೀನಗರದ ಭಾಗತ್ ಪ್ರದೇಶದ ಬರ್ಜುಲ್ಲಾ ಪ್ರದೇಶದಲ್ಲಿ ಅಂಗಡಿ ಮುಂದೆ ನಿಂತಿದ್ದ ಇಬ್ಬರು ಪೊಲೀಸರನ್ನು ಉಗ್ರನೋರ್ವ ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದ. ಈ ಘಟನೆ ಬಳಿಕ ಸೇನೆ ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿತ್ತು.