ಕಾಶ್ಮೀರದಲ್ಲಿ ಎಕೆ 47 ಹೊತ್ತ ಉಗ್ರರ ಟ್ರಕ್ ಪೊಲೀಸ್ ವಶಕ್ಕೆ
ಶ್ರೀನಗರ, ಮಾರ್ಚ್ 12: ಜಮ್ಮು-ಕಾಶ್ಮೀರ ಮತ್ತು ಪಂಜಾಬಿನ ಗಡಿಯ ಲಖಾನ್ಪುರ ಬಳಿಯ ಕತುವಾದಲ್ಲಿ 6 ಎಕೆ 47 ರೈಫಲ್ ಮತ್ತು ಹಲವು ಶಸಸ್ತ್ರಾಸ್ತ್ರಗಳನ್ನು ಹೊಂದಿದ್ದ ಟ್ರಲಕ್ ವೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟ್ರಕ್ ನಲ್ಲಿದ್ದ ಮೂವರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆಗೆ ಜಮ್ಮು-ಪಠಾಣ್ ಕೋಟ್ ಹೆದ್ದಾರಿಯಲ್ಲಿ ಟ್ರಕ್ ಚಲಿಸುತ್ತಿದ್ದ ಸಂದರ್ಭದಲ್ಲಿ ಅನುಮಾನಗೊಂಡ ಪೊಲೀಸರು, ಟ್ರಕ್ ಅನ್ನು ಅಡ್ಡ ಹಾಕಿ ಪರಿಶೀಲಿಸಿದಾಗ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ.
ಟ್ರಕ್ ಕಾಶ್ಮೀರದಿಂದ ಪಂಜಾಬಿನ ಬಾಮ್ಯಾಳ್ ನತ್ತ ಹೊರಟಿತ್ತು ಎಂಬುದು ತಿಳಿದುಬಂದಿದೆ. ಬಂಧಿಸಲ್ಪಟ್ಟ ಮೂವರೂ ಕಾಶ್ಮೀರ ಮೂಲದವರಾಗಿದ್ದು ಅವರನ್ನು ತನಿಖೆಗೊಳಪಡಿಸಲಾಗುತ್ತಿದೆ.

ಸಂವಿಧದಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರದ ನಂತರ ಗಡಿಯಲ್ಲಿ ಉಗ್ರ ಚಟುವಟಿಕೆ ಮತ್ತು ಒಳನುಸುಳುವಿಕೆಯ ಪ್ರಯತ್ನಗಳು ನಡೆಯುತ್ತಲೇ ಇವೆ. ಆಗಸ್ಟ್ ಮೊದಲ ವಾರ ಭಾರತೀಯ ಸೇನೆ ಪಾಕಿಸ್ತಾನದ ಹಲವು ಉಗ್ರರನ್ನು ಹತ್ಯೆಗೈದ ವಿಡಿಯೋವೊಂದು ಸೆಪ್ಟೆಂಬರ್ 9 ರಂದು ಮಾಧ್ಯಮಗಳಿಗೆ ಲಭಿಸಿತ್ತು.
ಭಾರತದಲ್ಲಿ ಉಗ್ರ ಚಟುವಟಿಕೆ ನಡೆಸಲು ಪಾಕ್ ಸೇನೆ ಮತ್ತು ಉಗ್ರರು ಹಲವು ರೀತಿಯ ಕೋಡ್ ಶಬ್ದಗಳನ್ನು ಬಳಸುತ್ತಿರುವ ಬಗ್ಗೆಯೂ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಇದೀಗ ಎಕೆ 47 ಮತ್ತು ಇತರ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವುದು, ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿರುವುದು ಭಾರತದಲ್ಲಿ ಶಾಂತಿ ಕದಡಲು ಉಗ್ರರು ನಿರಂತರ ಪ್ರಯತ್ನ ನಡೆಸುತ್ತಿರುವುದಕ್ಕೆ ಸಾಕ್ಷಿಯಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications