ಕಾಶ್ಮೀರದಲ್ಲಿ 40 ನಾಯಕರು, ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ವಶಕ್ಕೆ
ಶ್ರೀನಗರ, ಆಗಸ್ಟ್ 27: ಜಮ್ಮು ಕಾಶ್ಮೀರದಲ್ಲಿ 40 ನಾಯಕರು ಹಾಗೂ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಕಳೆದ 24 ದಿನಗಳಲ್ಲಿ, ಜಮ್ಮು ಮತ್ತು ಕಾಶ್ಮೀರದ 2 ಮಾಜಿ ಮುಖ್ಯಮಂತ್ರಿಗಳನ್ನು ಗೃಹಬಂಧನದಲ್ಲಿರಿಸಲಾಗಿದೆ ಮತ್ತು ಅವರನ್ನು ತಲುಪಲು ಯಾವುದೇ ಕುಟುಂಬದ ಸದಸ್ಯರು ಅಥವಾ ಕೇಂದ್ರವು ಯಾವುದೇ ಪ್ರಯತ್ನ ಮಾಡಿಲ್ಲ.
ಕಳೆದ ವಾರದ ಕೊನೆಯಲ್ಲಿ ಐಬಿ ನಿರ್ದೇಶಕ ಅರವಿಂದ್ ಕುಮಾರ್ ಮತ್ತು ಹಲವಾರು ಅಧಿಕಾರಿಗಳು ಕಾಶ್ಮೀರದಲ್ಲಿದ್ದರು. ಹಲವಾರು ಏಜೆನ್ಸಿಗಳ ಶಾಖೆಗಳೊಂದಿಗೆ ಮಧ್ಯಂತರ ಸಭೆ ನಡೆಸಿದರು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೀಡಿದ ಸೂಚನೆಯಂತೆ ಪ್ರತಿಕ್ರಿಯೆಯನ್ನು ಪಡೆದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಕೂಡ ರಾಜ್ಯವನ್ನು ತೊರೆದಿದ್ದಾರೆ. ಏತನ್ಮಧ್ಯೆ, ಸುಮಾರು ನಾಲ್ಕು ವಾರಗಳವರೆಗೆ 40 ಕ್ಕೂ ಹೆಚ್ಚು ರಾಜ್ಯ ನಾಯಕರನ್ನು ವಿವಿಧ ಸ್ಥಳಗಳಲ್ಲಿ ಬಂಧಿಸಲಾಗಿದೆ. 6 ಜನರನ್ನು ಜಮ್ಮುವಿನಲ್ಲಿ ಮತ್ತು ಉಳಿದವರನ್ನು ಕಣಿವೆಯಲ್ಲಿ ಬಂಧಿಸಲಾಗಿದೆ.
ಜಮ್ಮುವಿನಲ್ಲಿ ಮೋದಿ ಸರ್ಕಾರದಲ್ಲಿರುವ ಜಿತೇಂದ್ರ ಸಿಂಗ್ ಅವರ ಸಹೋದರನನ್ನೂ ಗೃಹಬಂಧನದಲ್ಲಿರಿಸಲಾಗಿದೆ. ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರ ಸರ್ಕಾರದ ಎಲ್ಲ ಕ್ಯಾಬಿನೆಟ್ ಮಂತ್ರಿಗಳು ಗೃಹಬಂಧನದಲ್ಲಿದ್ದಾರೆ. ಅನೇಕ ರಾಜಕಾರಣಿಗಳು ಸೆಂಟೌರ್ ಹೋಟೆಲ್ನಲ್ಲಿ ತಂಗಿದ್ದಾರೆ.
ಕೆಲವು ನಾಯಕರ ಸಂಬಂಧಿಕರು ಅವರನ್ನು ಭೇಟಿಯಾಗಲು ಬಂದರು ಆದರೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ತೋರಿಸಿದ ನಂತರವೇ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಯಿತು.
ಆದರೆ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಕುಟುಂಬಗಳನ್ನು ಭೇಟಿ ಮಾಡಲು ಯಾರೂ ಬಂದಿಲ್ಲ. ಒಮರ್ ಅಬ್ದುಲ್ಲಾ ಹರಿ ನಿವಾಸ್ ಅರಮನೆಯಲ್ಲಿದ್ದರೆ ಮತ್ತು ಮೆಹಬೂಬಾ ಮುಫ್ತಿ ಚಶ್ಮೆ ಶಾಹಿಯಲ್ಲಿದ್ದಾರೆ.
ಆದರೆ ಆತಂಕಕಾರಿ ಸಂಗತಿಯೆಂದರೆ, ಈ ನಾಯಕರನ್ನು ಹೇಗೆ ಮತ್ತು ಯಾವಾಗ ಬಿಡುಗಡೆ ಮಾಡಲಾಗುವುದು ಮತ್ತು ಅವರ ಬಂಧನ ಕೊನೆಗೊಳ್ಳುತ್ತದೆ ಎಂಬುದರ ಬಗ್ಗೆ ಭಾರತ ಸರ್ಕಾರಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ.
ಪ್ರತಿಪಕ್ಷದ ನಾಯಕ ಮೊಹಮ್ಮದ್ ಯೂಸುಫ್ ತರಿಗಾಮಿಯನ್ನೂ ಗೃಹಬಂಧನದಲ್ಲಿರಿಸಲಾಗಿದೆ. ರಾಜ್ಯದಲ್ಲಿ 1100 ಕ್ಕೂ ಹೆಚ್ಚು ಕಲ್ಲು ತೂರಾಟಗಾರರನ್ನು ಬಂಧಿಸಲಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications